ಚಿಕ್ಕಬಳ್ಳಾಪುರ: ಸೇಡು ತೀರಿಸಿಕೊಳ್ಳಲು ಅಕ್ಕನೇ ತನ್ನ ತಂಗಿಯ ಮಗುವನ್ನು ಕೊಲೆಗೈದ ಘಟನೆ ಪೇರೇಸಂದ್ರ ಬಳಿಯ ಮುತ್ತಕದ ಹಳ್ಳಿಯಲ್ಲಿ ನಡೆದಿದೆ.
ಮಗುವನ್ನು ಕೊಲೆಗೈದ ಆರೋಪಿಯನ್ನು ಅಂಬಿಕಾ ಎಂದು ಗುರುತಿಸಲಾಗಿದೆ. ಆಕೆ ತನ್ನ ತಂಗಿ ಅನಿತಾಳ ಮಗ ಮಧು ಹಾಗೂ ಮಗಳನ್ನು ಗುರುವಾರ ಬೆಳಗ್ಗೆ ಮನೆಯಿಂದ ಕರೆದುಕೊಂಡು ಹೋಗಿದ್ದಳು. ಬಳಿಕ ಮಧುವನ್ನು (6) ಗುಡಿಬಂಡೆ ಮಾರ್ಗದಲ್ಲಿರುವ ಎಂಎಲ್ಸಿ ಮುನಿರಾಜು ಅವರ ಸಹೋದರರಿಗೆ ಸೇರಿದೆ ಎನ್ನಲಾದ ಮಾವಿನ ತೋಟದಲ್ಲಿ ಗುದ್ದಲಿಯಿಂದ ಹೊಡೆದು, ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಅಲ್ಲದೇ ಅಲ್ಲಿಯೇ ಮಣ್ಣಲ್ಲಿ ಹೂತು ಹಾಕಿದ್ದಾಳೆ. ಇದಾದ ನಂತರ ಹೆಣ್ಣು ಮಗುವನ್ನು ಕರೆದುಕೊಂಡು ಬೆಂಗಳೂರಿನ ಯಲಹಂಕಗೆ ತೆರಳಿದ್ದಾಳೆ. ಅಲ್ಲಿ ಅಕೆಯನ್ನು ಮಾರಾಟ ಮಾಡಲು ಮುಂದಾಗಿದ್ದಳು ಎಂದು ತಿಳಿದುಬಂದಿದೆ. ಇದನ್ನೂಓದಿ: ಪ್ರೀತಿಯ ನಾಟಕವಾಡಿ ಯುವತಿಯರಿಗೆ ವಂಚನೆ- ಚಿತ್ರಹಿಂಸೆ ನೀಡುವ ವೀಡಿಯೋ ವೈರಲ್
ಅಂಬಿಕಾಳ ನಡವಳಿಕೆಯಿಂದ ಆಟೋ ಚಾಲಕನೊಬ್ಬ ಅನುಮಾನಗೊಂಡು ಆಕೆಯನ್ನು ಹಾಗೂ ಹೆಣ್ಣು ಮಗುವನ್ನು ಕಬ್ಬನ್ ಪಾರ್ಕ್ ಪೊಲೀಸ್ (Police) ಠಾಣೆಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಪೊಲೀಸರು ವಿಷಯವನ್ನು ಬಾಲಕಿಯ ತಾಯಿ ಹಾಗೂ ಪೇರೇಸಂದ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಮೃತದೇಹವನ್ನು ಮಣ್ಣಿನಿಂದ ಪೊಲೀಸರು ಹೊರತೆಗೆದಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.
ಅಂಬಿಕಾ ಹಾಗೂ ಅನಿತಾ ಅಕ್ಕ ತಂಗಿಯಾಗಿದ್ದು ಅಂಬಿಕಾಳನ್ನ ಚಿಕ್ಕಬಳ್ಳಾಪುರದ (Chikkaballapura) ಮಾವಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಇನ್ನೂ ಅನಿತಾಳನ್ನ ಶಿಡ್ಲಘಟ್ಟದ ಬುಡಗವಾರಹಳ್ಳಿ ಗ್ರಾಮದ ವಿಶ್ವನಾಥ್ ಎಂಬವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಅನಿತಾ ಹಲವು ವರ್ಷಗಳ ಹಿಂದೆ ಗಂಡ ಮದ್ಯವ್ಯಸನಿ ಎಂದು ಗಂಡನನ್ನು ತೊರೆದು ಬಂದು ತವರು ಮನೆಯಲ್ಲಿ ವಾಸವಾಗಿದ್ದಳು. ಆರೋಪಿ ಸಹ ಒಂದು ವಾರದ ಹಿಂದೆ ಪತಿಯನ್ನು ತೊರೆದು ತವರು ಸೇರಿದ್ದಳು. ಅಲ್ಲದೇ ರಾತ್ರಿ ಮನಸ್ಸಿಗೆ ಬಂದ ಸಮಯದಲ್ಲಿ ಬರುತ್ತಿದ್ದಳು. ಇದರಿಂದ ಅಕ್ರಮ ಸಂಬಂಧದ ಶಂಕೆ ಮೂಡಿದ್ದು, ಅಂಬಿಕಾಳಿಗೆ ಅನಿತಾ ಬೈದಿದ್ದಳು. ಇದೇ ಕಾರಣಕ್ಕೆ ಮಗುವನ್ನು ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಇದನ್ನೂಓದಿ: ಮುಸ್ಲಿಮರ ಅವಹೇಳನ ಮಾಡ್ತಿರೋದಕ್ಕೆ ಬಾಂಬ್ ಬೆದರಿಕೆ ಸಂದೇಶ: ಆರ್.ಅಶೋಕ್