ರಾಯ್ಪುರ: ಆಸ್ಟ್ರೇಲಿಯಾ (Australia) ವಿರುದ್ಧ ಟಿ20 ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ (Team India) ಯುವ ಪಡೆ, ಶುಕ್ರವಾರ (ಇಂದು) 4ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ರಾಯ್ಪುರ ಕ್ರಿಕೆಟ್ ಮೈದಾನದಲ್ಲಿ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.
5 ಪಂದ್ಯದ ಸರಣಿಯಲ್ಲಿ 2-1ರಲ್ಲಿ ಮುನ್ನಡೆ ಸಾಧಿಸಿರುವ ಭಾರತ, ಕೊನೆಯ ಪಂದ್ಯದವರೆಗೂ ಕಾಯದೆ ಸರಣಿ ಗೆಲ್ಲಲು ಎದುರು ನೋಡುತ್ತಿದ್ದರೆ, ಆಸೀಸ್ ಸರಣಿ ಸಮಬಲದ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ. ಇದನ್ನೂ ಓದಿ: ಬೌಲರ್ಗಳಿಗೆ ಶಾಕ್ ಕೊಟ್ಟ ಐಸಿಸಿ – ನಿಗದಿತ ಸಮಯದಲ್ಲಿ ಓವರ್ ಆರಂಭಿಸದಿದ್ದರೆ ಬೀಳುತ್ತೆ ದಂಡ
ಮೊದಲೆರಡು ಪಂದ್ಯ ಗೆದ್ದಿದ್ದ ಭಾರತ 3ನೇ ಟಿ20 ಪಂದ್ಯವನ್ನು ಪಂದ್ಯವನ್ನು ಮ್ಯಾಕ್ಸ್ವೆಲ್ ಅವರ ಸಾಹಸದ ಮುಂದೆ ಕೈಚೆಲ್ಲಿತ್ತು. ಮೂರೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಬೌಲರ್ಗಳ (Bowlers) ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. ಆಸೀಸ್ ವಿರುದ್ಧ ಕ್ರಮವಾಗಿ 209, 191 ಹಾಗೂ 225 ರನ್ ಬಿಟ್ಟುಕೊಟ್ಟಿತು. ಆದ್ದರಿಂದ ಟೀಂ ಇಂಡಿಯಾಕ್ಕೆ ಬ್ಯಾಟಿಂಗ್ನಷ್ಟೇ ಬೌಲಿಂಗ್ನಲ್ಲೂ ಬಲ ಬೇಕಿದೆ.
ಪ್ರಸಿದ್ ಕೃಷ್ಣ ಗಾಯದಿಂದ ಚೇತರಿಸಿ ತಂಡಕ್ಕೆ ಮರಳಿದ ಬಳಿಕ ದುಬಾರಿಯಾಗುತ್ತಿದ್ದು, ಇತರರಿಂದಲೂ ಆಸೀಸ್ ಬ್ಯಾಟರ್ಗಳನ್ನು ಕಟ್ಟಿಹಾಕಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ 4ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ತಿಲಕ್ ವರ್ಮಾ ಅವರ ಜಾಗಕ್ಕೆ ಶ್ರೇಯಸ್ ಹಾಗೂ ಪ್ರಸಿದ್ಧ್ ಕೃಷ್ಣ ಬದಲಿಗೆ ದೀಪಕ್ ಚಹಾರ್ ಅವರನ್ನ ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಾಗಿವೆ.
ಅಲ್ಲದೇ ಆಸೀಸ್ನ ಡೇಂಜರಸ್ ಬ್ಯಾಟ್ಸ್ಮ್ಯಾನ್ ಗ್ಲೇನ್ ಮ್ಯಾಕ್ಸ್ವೆಲ್, ಸ್ಟೀವ್ ಸ್ಮಿತ್, ಆಡಂ ಝಂಪಾ ಸೇರಿ ಪ್ರಮುಖ ಆಟಗಾರರು ತವರಿಗೆ ಮರಳಿದ್ದು, ಯುವ ಪಡೆ ಮೇಲೆ ಸರಣಿ ಉಳಿಸಿಕೊಳ್ಳುವ ಜವಾಬ್ದಾರಿಯಿದೆ. ಇದನ್ನೂ ಓದಿ: ಮೂರು ಮಾದರಿಗೆ ಮೂವರು ನಾಯಕರು – ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ರಿಲೀಸ್
3 ಪಂದ್ಯಗಳ ಸಂಕ್ಷಿಪ್ತ ಸ್ಕೋರ್
ಮೊದಲ ಟಿ20: ಭಾರತ – 209/8, ಆಸ್ಟ್ರೇಲಿಯಾ – 208/3
2ನೇ ಟಿ20: ಭಾರತ – 235/4, ಆಸ್ಟ್ರೇಲಿಯಾ – 191/9
3ನೇ ಟಿ20: ಭಾರತ – 222/3, ಆಸ್ಟ್ರೇಲಿಯಾ – 225/5