Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಚಕ ಕದನದಲ್ಲಿ ಹರಿಣರ ಬೇಟೆಯಾಡಿದ ಕಾಂಗರೂ ಪಡೆ – ಫೈನಲ್‌ನಲ್ಲಿ ಭಾರತ-ಆಸೀಸ್‌ ಮುಖಾಮುಖಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ರೋಚಕ ಕದನದಲ್ಲಿ ಹರಿಣರ ಬೇಟೆಯಾಡಿದ ಕಾಂಗರೂ ಪಡೆ – ಫೈನಲ್‌ನಲ್ಲಿ ಭಾರತ-ಆಸೀಸ್‌ ಮುಖಾಮುಖಿ

Cricket

ರೋಚಕ ಕದನದಲ್ಲಿ ಹರಿಣರ ಬೇಟೆಯಾಡಿದ ಕಾಂಗರೂ ಪಡೆ – ಫೈನಲ್‌ನಲ್ಲಿ ಭಾರತ-ಆಸೀಸ್‌ ಮುಖಾಮುಖಿ

Public TV
Last updated: November 16, 2023 10:43 pm
Public TV
Share
4 Min Read
Australia 2 1
SHARE

* 6 ಕ್ಯಾಚ್‌, 1 ರನೌಟ್‌ ಕೈಚೆಲ್ಲಿದ ದಕ್ಷಿಣ ಆಫ್ರಿಕಾ
* ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯ
* ಡೇವಿಡ್‌ ಮಿಲ್ಲರ್‌ ಶತಕದ ಏಕಾಂಗಿ ಹೋರಾಟ ವ್ಯರ್ಥ
* 8ನೇ ಬಾರಿ ಆಸ್ಟ್ರೇಲಿಯಾ ವಿಶ್ವಕಪ್‌ ಫೈನಲ್‌ಗೆ ಎಂಟ್ರಿ

ಕೋಲ್ಕತ್ತಾ: ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಜಿದ್ದಾ-ಜಿದ್ದಿ ಕಣದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ತಂಡ ದಕ್ಷಿಣ ಆಫ್ರಿಕಾ (South Africa) ವಿರುದ್ಧ 3 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಾ 8ನೇ ಬಾರಿಗೆ ವಿಶ್ವಕಪ್‌ ಫೈನಲ್‌ ಪ್ರವೇಶಿಸಿದ್ದು, ನವೆಂಬರ್‌ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ (Team India) ವಿರುದ್ಧ ಸೆಣಸಲಿದೆ.

Australia will be playing their 8th World Cup Final on Sunday.

They’ve won 5 times in the past. pic.twitter.com/d7uOkBig6X

— Mufaddal Vohra (@mufaddal_vohra) November 16, 2023

ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ 2ನೇ ಸೆಮಿಫೈನಲ್‌ ಪಂದ್ಯವು ಅತ್ಯಂತ ರೋಚಕತೆಯಿಂದ ಕೂಡಿತ್ತು. ಆರಂಭದಲ್ಲೇ ಸ್ಫೋಟಕ ಇನ್ನಿಂಗ್ಸ್‌ ಕಟ್ಟಲು ಮುಂದಾದ ಟ್ರಾವಿಸ್‌ ಹೆಡ್‌ ಹಾಗೂ ಡೇವಿಡ್‌ ವಾರ್ನರ್‌ ಜೋಡಿ 6.1 ಓವರ್‌ಗಳಲ್ಲಿ 60 ರನ್‌ಗಳ ಜೊತೆಯಾಟ ನೀಡಿತ್ತು. ಅಲ್ಲದೇ ಟ್ರಾವಿಸ್‌ ಹೆಡ್‌ ಸ್ಫೋಟಕ ಬ್ಯಾಟಿಂಗ್‌ ಹರಿಣರನ್ನು ಕಂಗಾಲಾಗುವಂತೆ ಮಾಡಿತ್ತು. 15 ಓವರ್‌ಗಳಲ್ಲಿ 109 ರನ್‌ಗಳಿಗೆ ಮೂರು ವಿಕೆಟ್‌ ಕಳೆದುಕೊಂಡಿದ್ದ ಆಸೀಸ್‌ ಪಡೆ ಬಳಿಕ ಹರಿಣರ ಸ್ಪಿನ್‌ ದಾಳಿಯಿಂದ ನಿಧಾನಗತಿಯ ಬ್ಯಾಟಿಂಗ್‌ಗೆ ಮುಂದಾಯಿತು. ಪ್ರಮುಖ ಬ್ಯಾಟರ್‌ಗಳು ಅಲ್ಪ ಮೊತ್ತಕ್ಕೆ ವಿಕೆಟ್‌ ಕಳೆದುಕೊಂಡ ಪರಿಣಾಮ ಪಂದ್ಯದ ಫಲಿತಾಂಶವೇ ಬುಡಮೇಲಾಗಿತ್ತು. ಒಂದೊಂದು ರನ್‌ ಕದಿಯಲೂ ಆಸೀಸ್‌ ತಂಡ ಹೆಣಗಾಡಿತ್ತು. ದಕ್ಷಿಣ ಆಫ್ರಿಕಾ ತಂಡವೇ ಗೆಲುವು ಸಾಧಿಸುವ ಸಾಧ್ಯತೆಗಳಿತ್ತು. ಆದ್ರೆ ಪ್ರಮುಖ ಕ್ಯಾಚ್‌ಗಳನ್ನು ಕೈಚೆಲ್ಲಿದ್ದು ತಂಡದ ಸೋಲಿಗೆ ಕಾರಣವಾಯಿತು.

South Africa

2015ರ ವಿಶ್ವಕಪ್‌ ಟೂರ್ನಿಯಲ್ಲೂ ದಕ್ಷಿಣ ಆಫ್ರಿಕಾ, ಕಿವೀಸ್‌ ವಿರುದ್ಧ ಇದೇ ರೀತಿ ವಿರೋಚಿತ ಸೋಲಿಗೆ ತುತ್ತಾಗಿತ್ತು. ಕ್ರಿಕೆಟ್‌ ದಿಗ್ಗಜ ಎಬಿಡಿ ವಿಲಿಯರ್ಸ್‌ ಸೇರಿದಂತೆ ಇತರ ಆಟಗಾರರು ಮೈದಾನದಲ್ಲೇ ಕಣ್ಣೀರಿಟ್ಟಿದ್ದರು. ಅಂದು ಮಳೆಯ ಕಾರಣದಿಂದಾಗಿ ಓವರ್‌ ಕಡಿತಗೊಳಿಸಲಾಗಿತ್ತು. ದಕ್ಷಿಣ ಆಫ್ರಿಕಾ 43 ಓವರ್‌ಗಳಲ್ಲಿ 5 ವಿಕೆಟ್‌ಗೆ 281 ರನ್‌ ಗಳಿಸಿತ್ತು. ಆ ನಂತರವೂ ಮಳೆಬಂದಿದ್ದರಿಂದ ಡಕ್ವರ್ತ್‌ ಲೂಯಿಸ್‌ ನಿಯಮದ ಅನ್ವಯ ನ್ಯೂಜಿಲೆಂಡ್‌ಗೆ 43 ಓವರ್‌ಗಳಲ್ಲೇ 298 ರನ್‌ಗಳ ಗುರಿ ನೀಡಲಾಗಿತ್ತು. ಆದ್ರೆ ಹರಿಣರ ಬಳಗದ ಕಳಪೆ ಫೀಲ್ಡಿಂಗ್‌ನಿಂದಾಗಿ ವಿರೋಚಿತ ಸೋಲಿಗೆ ತುತ್ತಾದರು. ಇಂದು ಸಹ ಆರಂಭದಲ್ಲೇ ಕ್ಯಾಚ್‌ಗಳನ್ನ ಕೈಚೆಲ್ಲಿದರು, ಅಲ್ಲದೇ ಅಗ್ರ ಕ್ರಮಾಂಕದ ಬ್ಯಾಟರ್ಸ್‌ಗಳ ವೈಫಲ್ಯದಿಂದ ಮತ್ತೊಮ್ಮೆ ಚೋಕರ್ಸ್‌ ಹಣೆಪಟ್ಟಿಯೊಂದಿಗೆ 2023ರ ವಿಶ್ವಕಪ್‌ಗೆ ವಿದಾಯ ಹೇಳಿತು.

Aus vs SA

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ದಕ್ಷಿಣ ಆಫ್ರಿಕಾ 49.4 ಓವರ್‌ಗಳಲ್ಲಿ 212 ರನ್‌ಗಳಿಗೆ ಆಲೌಟ್‌ ಆಯಿತು. 213 ರನ್‌ಗಳ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ 47.2 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 215 ರನ್‌ ಗಳಿಸಿ ಗೆಲುವು ಸಾಧಿಸಿತು. ಆಸೀಸ್‌ ಪರ ಟ್ರಾವಿಸ್‌ ಹೆಡ್‌ 62 ರನ್‌ (48 ಎಸೆತ, 9 ಬೌಂಡರಿ, 2 ಸಿಕ್ಸರ್)‌, ಡೇವಿಡ್‌ ವಾರ್ನರ್‌ 29 ರನ್‌ (18 ಎಸೆತ, 4 ಸಿಕ್ಸರ್‌, 1 ಬೌಂಡರಿ), ಸ್ವೀವನ್‌ ಸ್ಮಿತ್‌ 30 ರನ್‌ (62 ಎಸೆತ ), ಮಾರ್ನಸ್‌ ಲಾಬುಶೇನ್‌ 18 ರನ್‌, ಮ್ಯಾಕ್ಸ್‌ವೆಲ್‌ 1 ರನ್‌ ಗಳಿಸಿದ್ರೆ ಮಿಚೆಲ್‌ ಮಾರ್ಷ್‌ ಶೂನ್ಯ ಸುತ್ತಿದರು. ಕೊನೆಯಲ್ಲಿ ಜವಾಬ್ದಾರಿ ಬ್ಯಾಟಿಂಗ್‌ ಮಾಡಿದ ಜಾಸ್‌ ಇಂಗ್ಲಿಸ್‌ 28 ರನ್‌, ಮಿಚೆಲ್‌ ಸ್ಟಾರ್ಕ್‌ 16 ರನ್‌ ಹಾಗೂ ಪ್ಯಾಟ್‌ ಕಮ್ಮಿನ್ಸ್‌ 14 ರನ್‌ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ದಕ್ಷಿಣ ಆಫ್ರಿಕಾ ಪರ ಜೆರಾಲ್ಡ್ ಕೋಟ್ಜಿ, ತಬ್ರೈಜ್ ಶಮ್ಸಿ ತಲಾ 2 ವಿಕೆಟ್‌ ಕಿತ್ತರೆ, ಕಾಗಿಸೊ ರಬಾಡ, ಏಡನ್‌ ಮಾರ್ಕ್ರಮ್‌, ಕೇಶವ್‌ ಮಹಾರಾಜ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ರೋಚಕ ಕದನದಲ್ಲಿ ಹರಿಣರ ಬೇಟೆಯಾಡಿದ ಕಾಂಗರೂ ಪಡೆ – ಫೈನಲ್‌ನಲ್ಲಿ ಭಾರತ-ಆಸೀಸ್‌ ಮುಖಾಮುಖಿ

Aus vs SA 2

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿತ್ತು. ಆಸ್ಟ್ರೇಲಿಯಾ ಬೌಲರ್‌ಗಳ ಮಾರಕ ದಾಳಿಗೆ ನಲುಗಿದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಹೀನಾಯ ಪ್ರದರ್ಶನ ತೋರಿ ಪೆವಿಲಿಯನ್ ಸೇರಿಕೊಂಡರು. ಪಂದ್ಯದ ಆರಂಭದಿಂದಲೂ ಒಂದು ಅರ್ಧಶತಕವನ್ನೂ ಗಳಿಸದ ನಾಯಕ ತೆಂಬಾ ಬವುಮಾ ಶೂನ್ಯಕ್ಕೆ ಔಟಾಗಿ ನಿರ್ಮಿಸಿದರು. ಈ ಬೆನ್ನಲ್ಲೇ ಲೀಗ್ ಸುತ್ತಿನಲ್ಲಿ 4 ಶತಕ ಸಿಡಿಸಿ ಮಿಂಚಿದ್ದ ಕ್ವಿಂಟನ್ ಡಿಕಾಕ್ ಕೇವಲ 3 ರನ್‌ಗಳಿಗೆ, ರಾಸಿ ವಾನ್ ಡೇರ್ ಡುಸ್ಸೆನ್ 6 ರನ್ ಮತ್ತು ಏಡನ್ ಮಾರ್ಕ್ರಮ್ 10 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಹೊರನಡೆದರು. 11.5 ಓವರ್‌ಗಳಾದರೂ ಕೇವಲ 24 ರನ್ ಗಳಿಸಿದ ದಕ್ಷಿಣ ಆಫ್ರಿಕಾ ತಂಡ ಪ್ರಮುಖ 4 ವಿಕೆಟ್‌ಗಳನ್ನೂ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಇದನ್ನೂ ಓದಿ: ಇನ್ಮುಂದೆ ನಿಮ್ಮ ಅದ್ಭುತ ಪ್ರತಿಭೆ ಪ್ರದರ್ಶಿಸಬಹುದು – ಬಾಬರ್‌ ಆಜಂ ಹೊಗಳಿದ ಬೆಂಗ್ಳೂರು ಮೂಲದ ರಚಿನ್‌

ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಜೊತೆಗೂಡಿ ಉತ್ತಮ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರು. 113 ಎಸೆತಗಳಲ್ಲಿ ಈ ಜೋಡಿ 95 ರನ್‌ಗಳ ಜೊತೆಯಾಟ ನೀಡಿತು. ಅಷ್ಟರಲ್ಲೇ ಟ್ರಾವಿಸ್ ಹೆಡ್ ಸ್ಪಿನ್ ದಾಳಿಗೆ ಹೆನ್ರಿಚ್ ಕ್ಲಾಸೆನ್ ವಿಕೆಟ್ ಒಪ್ಪಿಸಿದರು. ಆ ಬಳಿಕ ಡೇವಿಡ್ ಮಿಲ್ಲರ್ ಒಬ್ಬರೇ ಏಕಾಂಗಿ ಹೋರಾಟ ನಡೆಸಿದರು. ಕೊನೆಯವರೆಗೂ ಹೋರಾಡಿದ ಮಿಲ್ಲರ್ 101 ರನ್ (5 ಸಿಕ್ಸರ್, 8 ಬೌಂಡರಿ) ಸಿಡಿಸಿದರು. ಇದರಿಂದಾಗಿ ದಕ್ಷಿಣ ಆಫ್ರಿಕಾ ತಂಡ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

ಇದರ ಹೊರತಾಗಿ ಜೆರಾಲ್ಡ್ ಕೋಟ್ಜಿ 19 ರನ್, ಕೇಶವ್ ಮಹಾರಾಜ್ 4 ರನ್, ಕಾಗಿಸೋ ರಬಾಡ, 10 ರನ್, ತಬ್ರೈಜ್ ಶಮ್ಸಿ 1 ರನ್ ಗಳಿಸಿದರು. ವೈಡ್ ನೋಬಾಲ್‌ನಿಂದ ತಂಡಕ್ಕೆ ಹೆಚ್ಚುವರಿ 11 ರನ್ ಸೇರ್ಪಡೆಯಾಯಿತು. ಹರಿಣರ ವಿರುದ್ಧ ಮಾರಕ ದಾಳಿ ನಡೆಸಿದ ಆಸೀಸ್ ಪರ ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮ್ಮಿನ್ಸ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಜೋಶ್ ಹ್ಯಾಜಲ್ವುಡ್ ಮತ್ತು ಟ್ರಾವಿಸ್ ಹೆಡ್ ತಲಾ 2 ವಿಕೆಟ್ ಪಡೆದು ಮಿಂಚಿದರು.

TAGGED:australiaDavid millerHeinrich KlaasenMitchell StarcPat CumminsQuinton De KockSA vs Aussouth africaTemba Bavumaಆಸ್ಟ್ರೇಲಿಯಾಕ್ವಿಂಟನ್ ಡಿಕಾಕ್ಡೇವಿಡ್ ಮಿಲ್ಲರ್ದಕ್ಷಿಣ ಆಫ್ರಿಕಾಮಿಚೆಲ್ ಸ್ಟಾರ್ಕ್ವಿಶ್ವಕಪ್‌ ಸೆಮಿಫೈನಲ್‌
Share This Article
Facebook Whatsapp Whatsapp Telegram

Cinema news

CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories
Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows

You Might Also Like

Bar owner murder case in Chikkamagaluru Four arrested
Chikkamagaluru

ಚಿಕ್ಕಮಗಳೂರು | ಬಾರ್ ಮಾಲೀಕನ ಹತ್ಯೆ ಕೇಸ್ – ನಾಲ್ವರು ಅರೆಸ್ಟ್‌

Public TV
By Public TV
9 minutes ago
woman arrested for blackmailing swamiji ccb police bengaluru
Bengaluru City

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಹನಿಟ್ರ್ಯಾಪ್? – ಬ್ಲಾಕ್‌ಮೇಲ್‌ ಮಾಡಿದ್ದ ಮಹಿಳೆ ಬಂಧನ

Public TV
By Public TV
10 minutes ago
Male Mahadeshwara Hills Two Wheeler Ban
Chamarajanagar

ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್

Public TV
By Public TV
30 minutes ago
supreme Court 1
Court

2000ರಲ್ಲಿ ಕೆಂಪುಕೋಟೆಯಲ್ಲಿ ದಾಳಿ ಕೇಸ್‌; ಎಲ್‌ಇಟಿ ಭಯೋತ್ಪಾದಕ ಸಲ್ಲಿಸಿದ್ದ ಕ್ಯೂರೇಟಿವ್ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

Public TV
By Public TV
31 minutes ago
CRIME
Chamarajanagar

ಚಾಮರಾಜನಗರ | ಪತ್ನಿಯೊಂದಿಗೆ ಜಗಳವಾಡಿ ಕತ್ತು ಕೊಯ್ದುಕೊಂಡ ಭೂಪ

Public TV
By Public TV
35 minutes ago
Ramanath Rai
Dakshina Kannada

ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?