ಬಿರಿಯಾನಿ ತಿನ್ನಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಆಟೋ ಚಾಲಕ

Public TV
1 Min Read
BIRIYANI

ಬೆಂಗಳೂರು: ಆಟೋ ಚಾಲಕರೊಬ್ಬರು ಚಿನ್ನ ಅಡವಿಟ್ಟು 2 ಲಕ್ಷ ರೂಪಾಯಿ ಸಾಲ ಪಡೆದು ಅದನ್ನು ಬೈಕ್‍ನಲ್ಲಿ ಇಟ್ಟು ದಾರಿ ಮಧ್ಯೆ ಬಿರಿಯಾನಿ ತಿನ್ನಲು ಹೋಗಿ ವಾಪಸ್ ಬರುವಾಗ ಬೈಕ್‍ನಲ್ಲಿ ಇಟ್ಟಿದ್ದ ಹಣ ಕಳವಾಗಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

BIRIYANI 2

ಆಟೋ ಚಾಲಕರಾಗಿರುವ ಹನುಮಂತರಾಯ ಬ್ಯಾಂಕ್‍ನಲ್ಲಿ ಸಾಲ ಮಾಡಿದ್ದರು. ಬಳಿಕ ಕಟ್ಟಬೇಕಾದ ಅನಿವಾರ್ಯತೆಯಿಂದ ತಮ್ಮಲ್ಲಿದ್ದ ಚಿನ್ನ ಅಡವಿಟ್ಟು 2 ಲಕ್ಷ ಹಣ ಹೊಂದಿಸಿ ಅದನ್ನು ಬೈಕ್‍ನ ಸೈಡ್ ಲಾಕರ್‌ನಲ್ಲಿ ಇಟ್ಟುಕೊಂಡು ಅವರ ಬಾಮೈದನೊಂದಿಗೆ ಮನೆಗೆ ತೆರಳುತ್ತಿದ್ದರು. ಈ ನಡುವೆ ದಾರಿ ಮಧ್ಯೆ ಬಿರಿಯಾನಿ ತಿನ್ನಲೆಂದು ಬೈಕ್‍ನಿಂದ ಇಬ್ಬರು ಇಳಿದು ಹೋಗಿದ್ದಾರೆ. ಈ ವೇಳೆ ಬೈಕ್ ಲಾಕರ್‌ನಲ್ಲಿದ್ದ ಹಣವನ್ನು ಕೂಡ ಅಲ್ಲೇ ಬಿಟ್ಟು ಹೋಗಿದ್ದಾರೆ. ನಂತರ ಬಿರಿಯಾನಿ ತಿಂದು ಬರುವಷ್ಟರಲ್ಲಿ 2 ಲಕ್ಷ ರೂಪಾಯಿಯನ್ನು ಕಳ್ಳರು ಎಗರಿಸಿದ್ದಾರೆ. ಇದನ್ನೂ ಓದಿ: ಫ್ರೀಯಾಗಿ ಕೋಳಿ ಕೊಡಲಿಲ್ಲ- ಹಿಗ್ಗಾಮುಗ್ಗ ಥಳಿಸಿದ್ರು

BIRIYANI

ಬಿರಿಯಾನಿ ತಿಂದು ಹನುಮಂತರಾಯ ಬೈಕ್ ಬಳಿ ಬಂದು ಹಣವನ್ನು ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಕೂಡಲೇ ಪಕ್ಕದಲ್ಲಿದ್ದ ಅಂಗಡಿಯೊಂದರ ಸಿಸಿಟಿವಿ ಪರಿಶೀಲಿಸಿದಾಗ ಸಾಮಾನ್ಯರಂತೆ ಓಡಾಡಿ, ಹಣ ಕಳ್ಳತನ ಮಾಡಿದ ದೃಶ್ಯ ಸೆರೆಯಾಗಿದೆ. ಈ ಘಟನೆ ಕೆಳದಿನಗಳ ಹಿಂದೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

Share This Article
Leave a Comment

Leave a Reply

Your email address will not be published. Required fields are marked *