ಮಡಿಕೇರಿ: ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆಟೋ ಚಾಲಕ (Auto Driver) ಶುಕ್ರವಾರ ರಾತ್ರಿ ಮನೆಯವರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿ (Madikeri) ನಗರದ ಹೊರವಲಯದಲ್ಲಿ ಇರುವ ಕೂಟ್ಟುಹೊಳೆಯಲ್ಲಿ ನಡೆದಿದೆ.
ಮಡಿಕೇರಿಯ ಆಜಾದ್ ನಗರ ನಿವಾಸಿ ಆಟೋ ಡ್ರೈವರ್ ಸೈಫು(31) ಮೃತ ವ್ಯಕ್ತಿ. ಕಳೆದ ರಾತ್ರಿ ಮನೆಯವರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸೈಫು ತಿಳಿಸಿದ್ದಾನೆ. ಕರೆ ಬಂದ ಬಳಿಕ ಮನೆಯವರು ಗಾಬರಿಯಿಂದ ಮಡಿಕೇರಿ ನಗರದ ಸುತ್ತಮುತ್ತ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಅಲ್ಲದೇ ಮಡಿಕೇರಿ ಹೊರವಲಯದ ಕೂಟುಹೊಳೆಯ ಸುತ್ತಮುತ್ತ ಹುಡುಕಾಟ ನಡೆಸಿದಾಗ, ಹೊಳೆ ಬದಿ ಆಟೋ (Auto) ಪತ್ತೆಯಾಗಿದೆ. ಅಲ್ಲದೆ ಕೂಟುಹೊಳೆ ಬದಿಯಲ್ಲಿ ಸೈಫು ಆಟೋದಲ್ಲಿ ಮೊಬೈಲ್ (Mobile), ಪರ್ಸ್ ಸಿಕ್ಕಿದೆ.
ಈ ಹಿನ್ನೆಲೆಯಲ್ಲಿ ತಕ್ಷಣವೇ ಮನೆಯರು ಪೊಲೀಸ್ ಠಾಣೆಗೆ (Police Station) ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ರಾತ್ರಿ ವೇಳೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅದಾದ ಬಳಿಕ ರಾತ್ರಿ ಆಗಿದ್ದರಿಂದ ಹೊಳೆಯಲ್ಲಿ ಮೃತದೇಹ ಶೋಧಕಾರ್ಯ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ಬೆಳಿಗ್ಗೆಯೇ ಮೃತ ದೇಹವನ್ನು ಪೊಲೀಸ್ ಇಲಾಖೆ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹೊಳೆಯ ಮಧ್ಯಭಾಗದಲ್ಲಿ ಮೃತ ದೇಹ ಸಿಕ್ಕಿದೆ. ಇದನ್ನೂ ಓದಿ: ಮೊದಲ ವಿವಾಹ ಮುಚ್ಚಿಟ್ಟು ಎರಡನೇ ಮದುವೆ – ತಾಳಿಕಟ್ಟೋ ಮುನ್ನವೇ ನಯವಂಚಕನ ಬಣ್ಣ ಕಳಚಿಟ್ಟ ಪತ್ನಿ
ಹೊಳೆಯಿಂದ ಸೈಫು ಮೃತದೇಹ ಹೊರತೆಗೆದ ಅಗ್ನಿಶಾಮಕ ಸಿಬ್ಬಂದಿ ಮರಣೋತ್ತರ ಪರೀಕ್ಷೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಹಲವು ದಿನಗಳಿಂದ ಆಟೋ ಚಾಲಕ ಅನಾರೋಗ್ಯದಿಂದ ಬಳಲುತ್ತಿದ್ದ ಎಂದು ಹೇಳಲಾಗುತ್ತಿದೆ. ಇನ್ನೂ ಘಟನೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಒಬ್ಬಳ ಹಿಂದೆ ಬಿದ್ದ ಇಬ್ಬರು ಹುಡುಗ್ರು – ಪ್ರೀತಿ ವಿಚಾರಕ್ಕೆ ನಡೀತು ಎರಡು ಗ್ಯಾಂಗ್ ಮಧ್ಯೆ ಗುದ್ದಾಟ