ಬಳ್ಳಾರಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ನಗರದಲ್ಲಿ ನಡೆದಿದೆ.
ಬಳ್ಳಾರಿ ಕೌಲಬಜಾರ ನಿವಾಸಿ 25 ವರ್ಷದ ಶಿವು ನಾಯಕ ಎಂಬ ಯುವಕನೇ ಕೊಲೆಯಾದ ದುರ್ದೈವಿ. ಬಳ್ಳಾರಿಯ ಸರ್ಕಾರಿ ಐಟಿಐ ಕಾಲೇಜು ಮೈದಾನದಲ್ಲಿ ಕಳೆದ ರಾತ್ರಿ ಶಿವು ನಾಯಕ ತನ್ನ ಸ್ನೇಹಿತರೊಂದಿಗೆ ಇದ್ದರು ಎನ್ನಲಾಗಿದೆ.
ಇಂದು ಮುಂಜಾನೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಯಾದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಶಿವು ನಾಯಕನ ಮೃತ ದೇಹ ಗುರುತಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಟೋ ಡೈವರ್ ಆಗಿರೋ ಶಿವು ನಾಯಕ ಕೆಲ ಸ್ನೇಹಿತರ ಜೊತೆ ಜಗಳ ಮಾಡಿಕೊಂಡಿದ್ದೆ ಕೊಲೆಗೆ ಕಾರಣ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಕೌಲಬಜಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.