ಮುರುಘಾ ಶ್ರೀ ಬಂಧನದ ಬೆನ್ನಲ್ಲೇ ಪ್ರಶಸ್ತಿ ವಾಪಸ್ ಅಭಿಯಾನ!

Public TV
1 Min Read
MURUGHA SHREE

ಚಿತ್ರದುರ್ಗ: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶರಣರ ಬಂಧನದ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪ್ರಶಸ್ತಿ ವಾಪಸ್ ಅಭಿಯಾನ ನಡೆಯುತ್ತಿದೆ.

BASAVARAJ BOMMAI LETTER

ಬಸವ ಭೂಷಣ ಪ್ರಶಸ್ತಿ ವಾಪಸ್ ನೀಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆಯಲಾಗಿದೆ. ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್ ಸಿಎಂಗೆ ಈ ಪತ್ರ ಬರೆದಿದ್ದಾರೆ. ಸಿಎಂ ಅವರು ಮುರುಘಾ ಶ್ರೀಗಳಿಂದ ಬಸವ ಭೂಷಣ ಪ್ರಶಸ್ತಿ ಪಡೆದಿದ್ದರು. ಇದೀಗ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ಪ್ರಶಸ್ತಿ ವಾಪಸ್ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿದೆ.

MURUGHA SHREE 1

ಈಗಾಗಲೇ ಖ್ಯಾತ ಪತ್ರಕರ್ತ ಪೊ.ಸಾಯಿನಾಥ್ ಬಸವಶ್ರೀ ಪ್ರಶಸ್ತಿ ವಾಪಸ್ ನೀಡುವುದಾಗಿ ಘೋಷಿಸಿದ್ದಾರೆ. ಸಿಎಂ ಕೂಡ ಪ್ರಶಸ್ತಿ ವಾಪಸ್ ನೀಡಿ, ತನಿಖೆ ಮಾಡುತ್ತಿರುವ ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಬೇಕು. ಮುರುಘಾ ಶ್ರೀಗಳಿಂದ ಅಧಿಕಾರಿಗಳು ಕೂಡ ತಾವು ಪಡೆದ ಪ್ರಶಸ್ತಿಗಳನ್ನ ಹಿಂದಕ್ಕೆ ನೀಡುವಂತೆ ಸುತ್ತೋಲೆ ಹೊರಡಿಸಿ ಎಂದು ಸಿಎಂ ಪತ್ರದಲ್ಲಿ ಒತ್ತಾಯಿಸಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ – ಮುರುಘಾ ಶ್ರೀಗೆ ಸೋಮವಾರದವರೆಗಿಲ್ಲ ಜಾಮೀನು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *