Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ

Latest

ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ

Public TV
Last updated: November 9, 2019 5:48 pm
Public TV
Share
6 Min Read
ayodhya final
SHARE

– ರಾಮಲಲ್ಲಾಗೆ ಅಯೋಧ್ಯೆ ಭೂಮಿ ಒಡೆತನ
– ಮಸೀದಿಗೆ 5 ಎಕರೆ ಪರ್ಯಾಯ ಭೂಮಿ
– 3 ತಿಂಗಳಲ್ಲಿ ಟ್ರಸ್ಟ್ ಸ್ಥಾಪನೆಗೆ ಸುಪ್ರೀಂಕೋರ್ಟ್ ಆದೇಶ
– ಸುನ್ನಿ, ನಿರ್ಮೋಹಿ ಅಖಾಡ ಅರ್ಜಿ ವಜಾ
– ಮಸೀದಿ ಧ್ವಂಸ ಕಾನೂನು ಉಲ್ಲಂಘನೆ ಎಂದ ಕೋರ್ಟ್

ನವದೆಹಲಿ: ಅಯೋಧ್ಯೆಯ ಜಾಗ ಹಿಂದೂಗಳಿಗೆ ಸೇರಿದ್ದು ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿ, ಸುಮಾರು 5 ಶತಮಾನಗಳ ವಿವಾದಕ್ಕೆ ಷರಾ ಬರೆದಿದೆ.

ರಾಮಜನ್ಮಭೂಮಿ ರಾಮನಿಗಷ್ಟೇ. ಸರ್ಕಾರದ ಟ್ರಸ್ಟಿಗೆ ಸೇರಬೇಕು. ಈ ಟ್ರಸ್ಟ್ ದೇವಾಲಯ ನಿರ್ಮಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಎಸ್.ಎ. ಬೋಬ್ಡೆ, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ನೇತೃತ್ವದ ಪಂಚ ನ್ಯಾಯಾಧೀಶರ ಪೀಠ ತೀರ್ಪು ನೀಡಿದೆ.

1,045 ಪುಟಗಳ ತೀರ್ಪನ್ನು ನ್ಯಾಯಪೀಠ ಸುಮಾರು 45ರಿಂದ 50 ನಿಮಿಷ ಕಾಲ ಓದಿ ಹೇಳಿದೆ. ವಿಶೇಷ ಅಂದ್ರೆ, ಐವರು ನ್ಯಾಯಮೂರ್ತಿಗಳು 5:0 ಅನುಪಾತದಲ್ಲಿ ಅಂದರೆ ಸರ್ವಾನುಮತದಲ್ಲಿ ಐತಿಹಾಸಿಕ ತೀರ್ಪು ಪ್ರಕಟಿಸಿದ್ದಾರೆ. ನ್ಯಾಯಾಧೀಶರು ತೀರ್ಪು ಓದುತ್ತಿದ್ದರೆ ಇಡೀ ಕೋರ್ಟ್ ಹಾಲ್‍ನಲ್ಲಿ ಪಿನ್ ಡ್ರಾಪ್ ಸೈಲೆನ್ಸ್ ಇತ್ತು. ಶತಕೋಟಿ ಭಾರತೀಯ ಚಿತ್ತ ಸುಪ್ರೀಂಕೋರ್ಟಿನತ್ತ   ಕೇಂದ್ರೀಕೃತವಾಗಿತ್ತು.

Ayodhya Judge 1

ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಇವತ್ತು ಪುರಾತತ್ವ ಇಲಾಖೆಯ ಸಂಶೋಧನೆಗಳೇ ಹೆಚ್ಚಾಗಿ ಪ್ರಸ್ತಾಪವಾಗಿವೆ. ಸ್ವಾತಂತ್ರ್ಯ ಭಾರತದಲ್ಲಿ ರಾಮಮಂದಿರಕ್ಕೆ ವೈಜ್ಞಾನಿಕ ಪುರಾವೆ ಒದಗಿಸಿದ, ದೇಗುಲ ಮಾದರಿಯ ಕಟ್ಟಡ ರಚನೆ ಹುಡುಕಿದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಯೂ ಪುರಾತತ್ವ ಇಲಾಖೆಗೆ ಸಲ್ಲಬೇಕು. ಪುರಾತತ್ವ ಇಲಾಖೆಯ ವರದಿಗಳನ್ನೂ ಇದೀಗ ಸುಪ್ರೀಂ ಕೋರ್ಟ್ ಗಮನಕ್ಕೆ ತೆಗೆದುಕೊಂಡಿದೆ. ಜೊತೆಗೆ, ಪುರಾತತ್ವ ಇಲಾಖೆಯ ಶೋಧನೆಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ. ಇದನ್ನೂ ಓದಿ:ಶಿಯಾ ಮತ್ತು ನಿರ್ಮೋಹಿ ಅಖಾಡ ಸಲ್ಲಿಸಿದ್ದ ಅರ್ಜಿ ವಜಾ – ಸುಪ್ರೀಂ ಆದೇಶದಲ್ಲಿ ಏನಿದೆ?

ಬಾಬ್ರಿ ಮಸೀದಿಯನ್ನು ಖಾಲಿ ಜಮೀನಿನಲ್ಲಿ ನಿರ್ಮಿಸಿದ್ದಲ್ಲ, ಅಲ್ಲಿ ದೊಡ್ಡ ಕಟ್ಟಡವಿತ್ತು. ಆ ಕಟ್ಟಡವು ಇಸ್ಲಾಮಿಕ್ ಮೂಲದ್ದಲ್ಲ ಎಂದು ಪುರಾತತ್ವ ಇಲಾಖೆ ಹೇಳಿದೆ. ಹೀಗಾಗಿ ಬಾಬರಿ ಮಸೀದಿ ಕಟ್ಟಡದ ಅಡಿಯಲ್ಲಿ ಇಸ್ಲಾಮೇತರ ಕಟ್ಟಡದ ಅವಶೇಷವಿತ್ತು ಎಂಬುದು ನಿಸ್ಸಂಶಯ. ಈ ಮೂಲಕ, ಶತಮಾನಗಳ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಹಿಂದೂಗಳ ಐತಿಹಾಸಿಕ ನಂಬಿಕೆ, ಧಾರ್ಮಿಕ ನಂಬಿಕೆ, ಪೌರಾಣಿಕ ಸಾಕ್ಷ್ಯಗಳಿಗೆ ಬಲ ಸಿಕ್ಕಿದೆ. ಸರಯೂ ನದಿ ತೀರದಲ್ಲಿದ್ದ ಶ್ರೀರಾಮಮಂದಿರ ಮತ್ತೊಮ್ಮೆ ಭವ್ಯವಾಗಿ ತಲೆ ಎತ್ತಲು ಈ ತೀರ್ಪು ಸಹಕಾರಿಯಾಗಿದೆ. ಸುಪ್ರೀಂ ಕೋರ್ಟ್‍ನ ಈ ತೀರ್ಪಿಗೆ ಬೆನ್ನೆಲುಬಾಗಿ ನಿಂತಿರೋದು ಪುರಾತತ್ವ ಇಲಾಖೆಯ ಸಂಶೋಧನೆ ಅನ್ನೋದು ಮಾತ್ರ ನಿಸ್ಸಂಶಯ.

supreme

`ಪುರಾತತ್ವ’ ಆಧಾರ:
ಅಯೋಧ್ಯೆಯ ಮಹಾರಾಜ ದಶರಥನ ಮಗನಾದ ಶ್ರೀರಾಮ, ಭಗವಾನ್ ವಿಷ್ಣುವಿನ ಮನುಷ್ಯ ರೂಪ ಅನ್ನೋದು ಧಾರ್ಮಿಕ ನಂಬಿಕೆ. ತ್ರೇತಾಯುಗದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಅವತಾರವಾಯ್ತು. ಸರಯೂ ನದಿ ತೀರದಲ್ಲಿ ಅಯೋಧ್ಯಾ ನಗರಿ ಹರಡಿಕೊಂಡಿತ್ತು ಎಂಬ ಮಾಹಿತಿ ರಾಮಾಯಣದಲ್ಲಿ ಪ್ರಸ್ತಾಪವಾಗುತ್ತೆ. ಈ ಪೌರಾಣಿಕ ಕಥೆ ನಿಜವೆನ್ನಲು ಸಾಕ್ಷಿಯಾಗಿ ಅಯೋಧ್ಯೆಯಲ್ಲಿ ಸರಯೂ ನದಿ ತೀರದಲ್ಲಿ ಶ್ರೀರಾಮ ಮಂದಿರವಿತ್ತು ಅನ್ನೋದು ವಾದ. ಆದ್ರೆ, ಈ ವಾದಕ್ಕೆ ಆಧುನಿಕ ಸಂಶೋಧನೆ ಹಾಗೂ ವೈಜ್ಞಾನಿಕ ಸಾಕ್ಷ್ಯ ಇರಲಿಲ್ಲ. 1976ರಲ್ಲಿ ಮೊದಲ ಬಾರಿಗೆ ಮಂದಿರವೊಂದರ ಇರುವಿಕೆಗೆ ಸಾಕ್ಷ್ಯ ಲಭ್ಯವಾಗಿತ್ತು. ಇದನ್ನೂ ಓದಿ:ಅಶೋಕ್ ಸಿಂಘಾಲ್‍ಗೆ ‘ಭಾರತ ರತ್ನ’ ನೀಡಿ: ಸುಬ್ರಮಣಿಯನ್ ಸ್ವಾಮಿ

ಮಸೀದಿ ಬುಡ ಕೆದಕಿತ್ತು
1973ರಲ್ಲಿ ರಾಮಾಯಣ ಕಾಲದ ಪುರಾತತ್ವ ಸಾಕ್ಷ್ಯಗಳನ್ನು ಸಂಗ್ರಹ ಯೋಜನೆ ಆರಂಭಗೊಂಡಿತ್ತು. ರಾಮ ಜನ್ಮಭೂಮಿ ಸೇರಿದಂತೆ 7 ಕಡೆ ಪುರಾತತ್ವ ಇಲಾಖೆ ಉತ್ಖನನ ನಡೆಸಿತ್ತು. 1976-77ರಲ್ಲಿ ಅಯೋಧ್ಯೆಯಲ್ಲಿ ಪುರಾತತ್ವ ಇಲಾಖೆ ಉತ್ಖನನ ಕಾರ್ಯ ಶುರುವಾಗಿತ್ತು. ಅಂದಿನ ಪುರಾತತ್ವ ಇಲಾಖೆಯ ಮಹಾನಿರ್ದೇಶಕ ಬಿ. ಬಿ. ಲಾಲ್, ಉತ್ಖನನ ಕಾರ್ಯದ ನೇತೃತ್ವ ವಹಿಸಿದ್ದರು. ಲಾಲ್ ಅವರಿಗೆ ಮೂವರು ಪುರಾತತ್ವ ಇಲಾಖೆ ಅಧಿಕಾರಿಗಳು ಸಾಥ್ ನೀಡಿದ್ದರು. ಜೊತೆಗೆ ಟ್ರೈನಿ ಅಧಿಕಾರಿಯಾಗಿ ಕೆ.ಕೆ. ಮುಹಮ್ಮದ್ ಎಂಬುವರೂ ಭಾಗಿಯಾಗಿದ್ದರು.

BABRI PTI 1

ಉತ್ಖನನದ ವೇಳೆ ಹಿಂದೂ ಧರ್ಮೀಯರ ದೇಗುಲಗಳಲ್ಲಿರುವ ಕಂಬಗಳು ಪತ್ತೆಯಾಗಿತ್ತು. ಈ ಕಂಬಗಳನ್ನು ಬುನಾದಿಯಾಗಿಸಿಕೊಂಡು ಮಸೀದಿ ನಿರ್ಮಾಣವಾಗಿತ್ತು. ಕಂಬಗಳನ್ನು ಕಡೆದಿದ್ದ ರೀತಿ, ದೇಗುಲ ನಿರ್ಮಿಸಲು ಬಳಸಿದ್ದ ವಸ್ತು, ಶೈಲಿ ಪತ್ತೆಯಾಗಿತ್ತು. ಇದನ್ನು ಗಮನಿಸಿದ್ದ ಪುರಾತತ್ವ ಇಲಾಖೆ ಇಲ್ಲಿ ಹಿಂದೂ ದೇಗುಲವಿತ್ತು ಎಂದು ಹೇಳಿತ್ತು. ಅಲಹಾಬಾದ್ ಹೈಕೋರ್ಟ್ ಕೂಡವಿವಾದಿತ ಜಾಗದಲ್ಲಿ ಉತ್ಖನನಕ್ಕೆ ಆದೇಶಿಸಿತ್ತು. ವಿಸ್ತೃತವಾಗಿ ಶೋಧ ನಡೆಸಿದ್ದ ಎಎಸ್‍ಐ, ತನ್ನ ನಿಲುವನ್ನು ಕೋರ್ಟ್ ಮುಂದಿಟ್ಟಿತ್ತು

ವರದಿಯಲ್ಲಿ ಏನಿತ್ತು?
ಈ ಜಾಗದಲ್ಲಿ ಹಿಂದೂ ದೇಗುಲ ಇತ್ತು ಅನ್ನೋದು ನಿಸ್ಸಂಶಯ. ವಿವಾದಿತ ಕಟ್ಟಡದ ಅಡಿಯಲ್ಲಿದ್ದ ಬೃಹತ್ ಕಟ್ಟಡದ ಪುರಾತತ್ವ ಸಾಕ್ಷ್ಯಗಳನ್ನು ಪರಿಗಣಿಸಿದರೆ, ಹತ್ತನೆಯ ಶತಮಾನದಿಂದ ಆರಂಭಿಸಿ ವಿವಾದಿತ ಕಟ್ಟಡ ನಿರ್ಮಾಣವಾಗುವವರೆಗಿನ ರಚನೆಯ ಹಂತಗಳ ನಿರಂತರತೆಯನ್ನು ಗಮನಿಸಿದರೆ, ಶಿಲೆ, ಅಲಂಕೃತ ಇಟ್ಟಿಗೆಗಳು ಹಾಗೂ ವಿರೂಪಗೊಂಡ ಗಂಡು-ಹೆಣ್ಣಿನ ಮೂರ್ತಿಯನ್ನು ಪರಿಗಣಿಸಿದರೆ, ಇವು ಉತ್ತರ ಭಾರತದ ದೇವಸ್ಥಾನಗಳಲ್ಲಿ ಕಂಡುಬರುವ ಗುಣಲಕ್ಷಣಗಳಿರುವ ಅವಶೇಷಗಳನ್ನು ಸೂಚಿಸುತ್ತವೆ ಎಂದು ಎಎಸ್‍ಐ ತನ್ನ ವರದಿಯಲ್ಲಿ ವಿವರಿಸಿತ್ತು.

Lord Rama statue in Ayodhya 1 768x576 1

ಸುಪ್ರೀಂ ತೀರ್ಪಿನ ಮುಖ್ಯಾಂಶಗಳು:
ರಾಮ ಜನಿಸಿದ್ದು ಅಯೋಧ್ಯೆಯಲ್ಲೇ ಅನ್ನೋ ನಂಬಿಕೆ ಇದ್ದು ವಿವಾದಿತ 2.77 ಎಕರೆ ರಾಮಲಲ್ಲಾಗೆ ಸೇರಿದ್ದಾಗಿದೆ. ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸಬೇಕು. 3 ತಿಂಗಳಲ್ಲಿ ಟ್ರಸ್ಟ್ ಮೂಲಕವೇ ನಿರ್ಮಿಸಬೇಕು. ಸರ್ಕಾರವೇ ರಾಮಮಂದಿರದ ಹೊಣೆ ಹೊರಬೇಕು.

ಮಸೀದಿಯನ್ನು ಕೆಡವಿದ್ದು ಕಾನೂನು ಉಲ್ಲಂಘನೆಯಾಗಿದೆ. ಸುನ್ನಿ ವಕ್ಫ್ ಬೋರ್ಡಿಗೆ ಅಯೋಧ್ಯೆಯಲ್ಲೇ 5 ಎಕ್ರೆ ಪರ್ಯಾಯ ಭೂಮಿಯನ್ನು ನೀಡಬೇಕು. ವಿಶೇಷಾಧಿಕಾರ ಬಳಸಿ ನೀಡುವ ಪರ್ಯಾಯ ಭೂಮಿ 3 ತಿಂಗಳಲ್ಲಿ ನಿರ್ಧರಿಸಬೇಕು. ಇದನ್ನೂ ಓದಿ:ಅಯೋಧ್ಯೆ ತೀರ್ಪು ಸಮಾಧಾನ ತಂದಿಲ್ಲ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ವಿವಾದಿತ ಭೂಮಿಯನ್ನು ಮೂರು ಭಾಗಗಳಾಗಿ ಮಾಡಿದ ಅಲಹಾಬಾದ್ ಹೈಕೋರ್ಟ್ ತೀರ್ಪು ನ್ಯಾಯ ಸಮ್ಮತವಲ್ಲ. ಯಾತ್ರಿಗಳ ಅಭಿಪ್ರಾಯ, ಪುರಾತತ್ವ ಸಾಕ್ಷ್ಯ ಹಿಂದೂಗಳ ಪರವಾಗಿದೆ. ಮಸೀದಿಯ ಒಳಭಾಗದಲ್ಲಿ ಹಿಂದೂಗಳ ಪೂಜೆ ನಡೆಯುತಿತ್ತು. ಬ್ರಿಟಿಷರಿಂದಾಗಿ ಹಿಂದೂಗಳಿಗೆ ಪೂಜೆ ಕೈತಪ್ಪಿತ್ತು. 1856-1857ರವರೆಗೆ ನಮಾಜ್ ಬಗ್ಗೆ ದಾಖಲೆ ಇಲ್ಲ.

ರಾಮಲಲ್ಲಾ ಅಸ್ತಿತ್ವದ ಬಗ್ಗೆ ಹೇಳಿದ್ದೇನು?
ಮಸೀದಿ ಮುಖ್ಯ ಗುಂಬಜ್‍ನ ಕೆಳಭಾಗದಲ್ಲಿ ಗರ್ಭಗುಡಿಯಿತ್ತು ಎಂದು ನಂಬಲಾಗುತ್ತಿದೆ. ಮಸೀದಿಯ ಒಳಭಾಗದಲ್ಲಿ ಹಿಂದುಗಳು ಕೂಡ ಪೂಜೆ ಮಾಡುತ್ತಿದ್ದರು. ಬ್ರಿಟಿಷರು ಒಳಭಾಗವನ್ನು ಮುಸ್ಲಿಮರಿಗೆ, ಹೊರಭಾಗವನ್ನು ಹಿಂದುಗಳಿಗೆ ಎಂದು ಪ್ರತ್ಯೇಕಿಸಿದರು. ಇದರಿಂದಾಗಿ ಹಿಂದುಗಳಿಗೆ ಪೂಜೆಯ ಅವಕಾಶ ಕೈತಪ್ಪಿತ್ತು. ಮಸೀದಿಯ ಗುಂಬಜನ್ನು ರಾಮಜನ್ಮ ಭೂಮಿಯ ಸ್ಥಳ ಎಂದು ಜನ ನಂಬುತ್ತಾರೆ. ಪುರಾಣಗಳಲ್ಲೂ ಸಹ ರಾಮಲಲ್ಲಾ ಬಗ್ಗೆ ಉಲ್ಲೇಖವಿದೆ. ಈ ಪ್ರದೇಶವನ್ನು ಹಿಂದೂಗಳ ಪರಿಕ್ರಮ ಮಾಡುತ್ತಿದ್ದರು. ಮಸೀದಿ ಅಡಿಪಾಯದ ಕೆಳಗೆ ವಿಶಾಲ ರಚನೆ ಇತ್ತು, ಇದು ಇಸ್ಲಾಂ ರಚನೆಯಾಗಿರಲಿಲ್ಲ.

ಮಂದಿರ ಒಡೆದು ಮಸೀದಿ ಕಟ್ಟಲಾಗಿದೆ ಎನ್ನುವ ಅಂಶದ ಕುರಿತು ಖಚಿತತೆ ಇಲ್ಲ. ಉತ್ಖನನದ ವೇಳೆ ಸಿಕ್ಕ ಕುರುಹುಗಳು ಇಸ್ಲಾಂ ರಚನೆಯಾಗಿರಲಿಲ್ಲ. ರಾಮ ಅಯೋಧ್ಯೆಯಲ್ಲೇ ಹುಟ್ಟಿದ ಎಂಬ ಬಗ್ಗೆ ವಿವಾದವಿಲ್ಲ. ಕೇವಲ ನಂಬಿಕೆಯಿಂದ ಹಕ್ಕನ್ನು ಸಾಬೀತು ಮಾಡಲು ಸಾಧ್ಯವಿಲ್ಲ. ಕಾನೂನಿನ ಆಧಾರದ ಮೇಲೆ ಭೂಮಿಯ ಹಕ್ಕನ್ನು ನಿರ್ಧರಿಸಲಾಗುತ್ತದೆ.

* ಸೀತಾ ರಸೋಯಿ – ಮೊದಲ ಬಾರಿಗೆ ಸೀತೆ ಅಡುಗೆ ಮಾಡಿದ್ದ ಸ್ಥಳ, ಕುಟುಂಬ ಸದಸ್ಯರಿಗಾಗಿ ಸಿಹಿ ಅಡುಗೆ ತಯಾರಿಸಿದ್ದ ಸೀತೆ
* ರಾಮ್ ಭಂಡಾರ್ – ಭಗವಾನ್ ಶ್ರೀರಾಮನ ಭೋಜನ ಗೃಹ, ಸೀತಾ ರಸೋಯಿಯಲ್ಲಿ ಅಡುಗೆ ಮಾಡಿ ಇಲ್ಲಿ ಭೋಜನ
* ರಾಮ್ ಚಬೂತರ್ – ಇದು ಭಗವಾನ್ ಶ್ರೀರಾಮ ಹುಟ್ಟಿದ ಸ್ಥಳ, ಇದೇ ಜಾಗದಲ್ಲಿ ಶ್ರೀರಾಮ ಬೆಳೆದ ಜಾಗ

ಕೇಳಿದವರಿಗೆ ಏನು ಸಿಕ್ಕಿತು?
ಸುನ್ನಿ ವಕ್ಫ್ ಬೋರ್ಡ್ ಜಮೀನಿನಿಂದ ನಮ್ಮನ್ನು ಹೊರಗಡೆ ಇಡಬೇಡಿ ಎಂದು ಕೇಳಿಕೊಂಡಿತ್ತು. ಕೋರ್ಟ್ ವಿವಾದಿತ ಜಮೀನಿನಲ್ಲಿ ಜಾಗ ನೀಡದೇ ಅಯೋಧ್ಯೆಯಲ್ಲಿ ಪ್ರತ್ಯೇಕವಾಗಿ 5 ಎಕ್ರೆ ಜಾಗ ನೀಡುವಂತೆ ಆದೇಶಿಸಿದೆ.

ನಿರ್ಮೋಹಿ ಅಖಾಡ ವಿವಾದಿತ ಜಾಗದ ಮೇಲೆ ನಮಗೆ ನಿಯಂತ್ರಣ ನೀಡಬೇಕು ಎಂದು ಕೇಳಿಕೊಂಡಿತ್ತು. ಆದರೆ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ. ರಾಮಜನ್ಮಭೂಮಿ ನ್ಯಾಸ್ ವಿವಾದಿತ ಜಾಗದ ಮೇಲೆ ಪೂರ್ಣ ನಿಯಂತ್ರಣ ಸಿಗಬೇಕು ಎಂದು ಕೇಳಿತ್ತು. ಕೋರ್ಟ್ ಭೂಮಿಯ ಸಂಪೂರ್ಣ ಹಕ್ಕನ್ನು ನೀಡಿದೆ.

TAGGED:Ayodhya verdictBabri MasjidRammandirShia WaqfSupreme Courtಅಯೋಧ್ಯೆಅಯೋಧ್ಯೆ ಪ್ರಕರಣಪುರಾತತ್ವ ಇಲಾಖೆಬಾಬ್ರಿ ಮಸೀದಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

IPL Ticket
Bengaluru City

RCB Vs CSK | ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರುತ್ತಿದ್ದ ಏಳು ಜನರ ವಿರುದ್ಧ FIR

Public TV
By Public TV
4 minutes ago
Mamata Banerjee narendra modi
Latest

ಪಾಕ್‌ ಬೆದರಿಕೆ ಬಗ್ಗೆ ಮೌನ ಯಾಕೆ? ನೀವು ರಾಜೀನಾಮೆ ಕೊಡಿ: ಮೋದಿ ವಿರುದ್ಧ ಬ್ಯಾನರ್ಜಿ ಗುಡುಗು

Public TV
By Public TV
6 minutes ago
CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
29 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
46 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
50 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?