Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ

Public TV
Last updated: November 9, 2019 5:48 pm
Public TV
Share
6 Min Read
ayodhya final
SHARE

– ರಾಮಲಲ್ಲಾಗೆ ಅಯೋಧ್ಯೆ ಭೂಮಿ ಒಡೆತನ
– ಮಸೀದಿಗೆ 5 ಎಕರೆ ಪರ್ಯಾಯ ಭೂಮಿ
– 3 ತಿಂಗಳಲ್ಲಿ ಟ್ರಸ್ಟ್ ಸ್ಥಾಪನೆಗೆ ಸುಪ್ರೀಂಕೋರ್ಟ್ ಆದೇಶ
– ಸುನ್ನಿ, ನಿರ್ಮೋಹಿ ಅಖಾಡ ಅರ್ಜಿ ವಜಾ
– ಮಸೀದಿ ಧ್ವಂಸ ಕಾನೂನು ಉಲ್ಲಂಘನೆ ಎಂದ ಕೋರ್ಟ್

ನವದೆಹಲಿ: ಅಯೋಧ್ಯೆಯ ಜಾಗ ಹಿಂದೂಗಳಿಗೆ ಸೇರಿದ್ದು ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿ, ಸುಮಾರು 5 ಶತಮಾನಗಳ ವಿವಾದಕ್ಕೆ ಷರಾ ಬರೆದಿದೆ.

ರಾಮಜನ್ಮಭೂಮಿ ರಾಮನಿಗಷ್ಟೇ. ಸರ್ಕಾರದ ಟ್ರಸ್ಟಿಗೆ ಸೇರಬೇಕು. ಈ ಟ್ರಸ್ಟ್ ದೇವಾಲಯ ನಿರ್ಮಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಎಸ್.ಎ. ಬೋಬ್ಡೆ, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ನೇತೃತ್ವದ ಪಂಚ ನ್ಯಾಯಾಧೀಶರ ಪೀಠ ತೀರ್ಪು ನೀಡಿದೆ.

1,045 ಪುಟಗಳ ತೀರ್ಪನ್ನು ನ್ಯಾಯಪೀಠ ಸುಮಾರು 45ರಿಂದ 50 ನಿಮಿಷ ಕಾಲ ಓದಿ ಹೇಳಿದೆ. ವಿಶೇಷ ಅಂದ್ರೆ, ಐವರು ನ್ಯಾಯಮೂರ್ತಿಗಳು 5:0 ಅನುಪಾತದಲ್ಲಿ ಅಂದರೆ ಸರ್ವಾನುಮತದಲ್ಲಿ ಐತಿಹಾಸಿಕ ತೀರ್ಪು ಪ್ರಕಟಿಸಿದ್ದಾರೆ. ನ್ಯಾಯಾಧೀಶರು ತೀರ್ಪು ಓದುತ್ತಿದ್ದರೆ ಇಡೀ ಕೋರ್ಟ್ ಹಾಲ್‍ನಲ್ಲಿ ಪಿನ್ ಡ್ರಾಪ್ ಸೈಲೆನ್ಸ್ ಇತ್ತು. ಶತಕೋಟಿ ಭಾರತೀಯ ಚಿತ್ತ ಸುಪ್ರೀಂಕೋರ್ಟಿನತ್ತ   ಕೇಂದ್ರೀಕೃತವಾಗಿತ್ತು.

Ayodhya Judge 1

ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಇವತ್ತು ಪುರಾತತ್ವ ಇಲಾಖೆಯ ಸಂಶೋಧನೆಗಳೇ ಹೆಚ್ಚಾಗಿ ಪ್ರಸ್ತಾಪವಾಗಿವೆ. ಸ್ವಾತಂತ್ರ್ಯ ಭಾರತದಲ್ಲಿ ರಾಮಮಂದಿರಕ್ಕೆ ವೈಜ್ಞಾನಿಕ ಪುರಾವೆ ಒದಗಿಸಿದ, ದೇಗುಲ ಮಾದರಿಯ ಕಟ್ಟಡ ರಚನೆ ಹುಡುಕಿದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಯೂ ಪುರಾತತ್ವ ಇಲಾಖೆಗೆ ಸಲ್ಲಬೇಕು. ಪುರಾತತ್ವ ಇಲಾಖೆಯ ವರದಿಗಳನ್ನೂ ಇದೀಗ ಸುಪ್ರೀಂ ಕೋರ್ಟ್ ಗಮನಕ್ಕೆ ತೆಗೆದುಕೊಂಡಿದೆ. ಜೊತೆಗೆ, ಪುರಾತತ್ವ ಇಲಾಖೆಯ ಶೋಧನೆಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ. ಇದನ್ನೂ ಓದಿ:ಶಿಯಾ ಮತ್ತು ನಿರ್ಮೋಹಿ ಅಖಾಡ ಸಲ್ಲಿಸಿದ್ದ ಅರ್ಜಿ ವಜಾ – ಸುಪ್ರೀಂ ಆದೇಶದಲ್ಲಿ ಏನಿದೆ?

ಬಾಬ್ರಿ ಮಸೀದಿಯನ್ನು ಖಾಲಿ ಜಮೀನಿನಲ್ಲಿ ನಿರ್ಮಿಸಿದ್ದಲ್ಲ, ಅಲ್ಲಿ ದೊಡ್ಡ ಕಟ್ಟಡವಿತ್ತು. ಆ ಕಟ್ಟಡವು ಇಸ್ಲಾಮಿಕ್ ಮೂಲದ್ದಲ್ಲ ಎಂದು ಪುರಾತತ್ವ ಇಲಾಖೆ ಹೇಳಿದೆ. ಹೀಗಾಗಿ ಬಾಬರಿ ಮಸೀದಿ ಕಟ್ಟಡದ ಅಡಿಯಲ್ಲಿ ಇಸ್ಲಾಮೇತರ ಕಟ್ಟಡದ ಅವಶೇಷವಿತ್ತು ಎಂಬುದು ನಿಸ್ಸಂಶಯ. ಈ ಮೂಲಕ, ಶತಮಾನಗಳ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಹಿಂದೂಗಳ ಐತಿಹಾಸಿಕ ನಂಬಿಕೆ, ಧಾರ್ಮಿಕ ನಂಬಿಕೆ, ಪೌರಾಣಿಕ ಸಾಕ್ಷ್ಯಗಳಿಗೆ ಬಲ ಸಿಕ್ಕಿದೆ. ಸರಯೂ ನದಿ ತೀರದಲ್ಲಿದ್ದ ಶ್ರೀರಾಮಮಂದಿರ ಮತ್ತೊಮ್ಮೆ ಭವ್ಯವಾಗಿ ತಲೆ ಎತ್ತಲು ಈ ತೀರ್ಪು ಸಹಕಾರಿಯಾಗಿದೆ. ಸುಪ್ರೀಂ ಕೋರ್ಟ್‍ನ ಈ ತೀರ್ಪಿಗೆ ಬೆನ್ನೆಲುಬಾಗಿ ನಿಂತಿರೋದು ಪುರಾತತ್ವ ಇಲಾಖೆಯ ಸಂಶೋಧನೆ ಅನ್ನೋದು ಮಾತ್ರ ನಿಸ್ಸಂಶಯ.

supreme

`ಪುರಾತತ್ವ’ ಆಧಾರ:
ಅಯೋಧ್ಯೆಯ ಮಹಾರಾಜ ದಶರಥನ ಮಗನಾದ ಶ್ರೀರಾಮ, ಭಗವಾನ್ ವಿಷ್ಣುವಿನ ಮನುಷ್ಯ ರೂಪ ಅನ್ನೋದು ಧಾರ್ಮಿಕ ನಂಬಿಕೆ. ತ್ರೇತಾಯುಗದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಅವತಾರವಾಯ್ತು. ಸರಯೂ ನದಿ ತೀರದಲ್ಲಿ ಅಯೋಧ್ಯಾ ನಗರಿ ಹರಡಿಕೊಂಡಿತ್ತು ಎಂಬ ಮಾಹಿತಿ ರಾಮಾಯಣದಲ್ಲಿ ಪ್ರಸ್ತಾಪವಾಗುತ್ತೆ. ಈ ಪೌರಾಣಿಕ ಕಥೆ ನಿಜವೆನ್ನಲು ಸಾಕ್ಷಿಯಾಗಿ ಅಯೋಧ್ಯೆಯಲ್ಲಿ ಸರಯೂ ನದಿ ತೀರದಲ್ಲಿ ಶ್ರೀರಾಮ ಮಂದಿರವಿತ್ತು ಅನ್ನೋದು ವಾದ. ಆದ್ರೆ, ಈ ವಾದಕ್ಕೆ ಆಧುನಿಕ ಸಂಶೋಧನೆ ಹಾಗೂ ವೈಜ್ಞಾನಿಕ ಸಾಕ್ಷ್ಯ ಇರಲಿಲ್ಲ. 1976ರಲ್ಲಿ ಮೊದಲ ಬಾರಿಗೆ ಮಂದಿರವೊಂದರ ಇರುವಿಕೆಗೆ ಸಾಕ್ಷ್ಯ ಲಭ್ಯವಾಗಿತ್ತು. ಇದನ್ನೂ ಓದಿ:ಅಶೋಕ್ ಸಿಂಘಾಲ್‍ಗೆ ‘ಭಾರತ ರತ್ನ’ ನೀಡಿ: ಸುಬ್ರಮಣಿಯನ್ ಸ್ವಾಮಿ

ಮಸೀದಿ ಬುಡ ಕೆದಕಿತ್ತು
1973ರಲ್ಲಿ ರಾಮಾಯಣ ಕಾಲದ ಪುರಾತತ್ವ ಸಾಕ್ಷ್ಯಗಳನ್ನು ಸಂಗ್ರಹ ಯೋಜನೆ ಆರಂಭಗೊಂಡಿತ್ತು. ರಾಮ ಜನ್ಮಭೂಮಿ ಸೇರಿದಂತೆ 7 ಕಡೆ ಪುರಾತತ್ವ ಇಲಾಖೆ ಉತ್ಖನನ ನಡೆಸಿತ್ತು. 1976-77ರಲ್ಲಿ ಅಯೋಧ್ಯೆಯಲ್ಲಿ ಪುರಾತತ್ವ ಇಲಾಖೆ ಉತ್ಖನನ ಕಾರ್ಯ ಶುರುವಾಗಿತ್ತು. ಅಂದಿನ ಪುರಾತತ್ವ ಇಲಾಖೆಯ ಮಹಾನಿರ್ದೇಶಕ ಬಿ. ಬಿ. ಲಾಲ್, ಉತ್ಖನನ ಕಾರ್ಯದ ನೇತೃತ್ವ ವಹಿಸಿದ್ದರು. ಲಾಲ್ ಅವರಿಗೆ ಮೂವರು ಪುರಾತತ್ವ ಇಲಾಖೆ ಅಧಿಕಾರಿಗಳು ಸಾಥ್ ನೀಡಿದ್ದರು. ಜೊತೆಗೆ ಟ್ರೈನಿ ಅಧಿಕಾರಿಯಾಗಿ ಕೆ.ಕೆ. ಮುಹಮ್ಮದ್ ಎಂಬುವರೂ ಭಾಗಿಯಾಗಿದ್ದರು.

BABRI PTI 1

ಉತ್ಖನನದ ವೇಳೆ ಹಿಂದೂ ಧರ್ಮೀಯರ ದೇಗುಲಗಳಲ್ಲಿರುವ ಕಂಬಗಳು ಪತ್ತೆಯಾಗಿತ್ತು. ಈ ಕಂಬಗಳನ್ನು ಬುನಾದಿಯಾಗಿಸಿಕೊಂಡು ಮಸೀದಿ ನಿರ್ಮಾಣವಾಗಿತ್ತು. ಕಂಬಗಳನ್ನು ಕಡೆದಿದ್ದ ರೀತಿ, ದೇಗುಲ ನಿರ್ಮಿಸಲು ಬಳಸಿದ್ದ ವಸ್ತು, ಶೈಲಿ ಪತ್ತೆಯಾಗಿತ್ತು. ಇದನ್ನು ಗಮನಿಸಿದ್ದ ಪುರಾತತ್ವ ಇಲಾಖೆ ಇಲ್ಲಿ ಹಿಂದೂ ದೇಗುಲವಿತ್ತು ಎಂದು ಹೇಳಿತ್ತು. ಅಲಹಾಬಾದ್ ಹೈಕೋರ್ಟ್ ಕೂಡವಿವಾದಿತ ಜಾಗದಲ್ಲಿ ಉತ್ಖನನಕ್ಕೆ ಆದೇಶಿಸಿತ್ತು. ವಿಸ್ತೃತವಾಗಿ ಶೋಧ ನಡೆಸಿದ್ದ ಎಎಸ್‍ಐ, ತನ್ನ ನಿಲುವನ್ನು ಕೋರ್ಟ್ ಮುಂದಿಟ್ಟಿತ್ತು

ವರದಿಯಲ್ಲಿ ಏನಿತ್ತು?
ಈ ಜಾಗದಲ್ಲಿ ಹಿಂದೂ ದೇಗುಲ ಇತ್ತು ಅನ್ನೋದು ನಿಸ್ಸಂಶಯ. ವಿವಾದಿತ ಕಟ್ಟಡದ ಅಡಿಯಲ್ಲಿದ್ದ ಬೃಹತ್ ಕಟ್ಟಡದ ಪುರಾತತ್ವ ಸಾಕ್ಷ್ಯಗಳನ್ನು ಪರಿಗಣಿಸಿದರೆ, ಹತ್ತನೆಯ ಶತಮಾನದಿಂದ ಆರಂಭಿಸಿ ವಿವಾದಿತ ಕಟ್ಟಡ ನಿರ್ಮಾಣವಾಗುವವರೆಗಿನ ರಚನೆಯ ಹಂತಗಳ ನಿರಂತರತೆಯನ್ನು ಗಮನಿಸಿದರೆ, ಶಿಲೆ, ಅಲಂಕೃತ ಇಟ್ಟಿಗೆಗಳು ಹಾಗೂ ವಿರೂಪಗೊಂಡ ಗಂಡು-ಹೆಣ್ಣಿನ ಮೂರ್ತಿಯನ್ನು ಪರಿಗಣಿಸಿದರೆ, ಇವು ಉತ್ತರ ಭಾರತದ ದೇವಸ್ಥಾನಗಳಲ್ಲಿ ಕಂಡುಬರುವ ಗುಣಲಕ್ಷಣಗಳಿರುವ ಅವಶೇಷಗಳನ್ನು ಸೂಚಿಸುತ್ತವೆ ಎಂದು ಎಎಸ್‍ಐ ತನ್ನ ವರದಿಯಲ್ಲಿ ವಿವರಿಸಿತ್ತು.

Lord Rama statue in Ayodhya 1 768x576 1

ಸುಪ್ರೀಂ ತೀರ್ಪಿನ ಮುಖ್ಯಾಂಶಗಳು:
ರಾಮ ಜನಿಸಿದ್ದು ಅಯೋಧ್ಯೆಯಲ್ಲೇ ಅನ್ನೋ ನಂಬಿಕೆ ಇದ್ದು ವಿವಾದಿತ 2.77 ಎಕರೆ ರಾಮಲಲ್ಲಾಗೆ ಸೇರಿದ್ದಾಗಿದೆ. ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸಬೇಕು. 3 ತಿಂಗಳಲ್ಲಿ ಟ್ರಸ್ಟ್ ಮೂಲಕವೇ ನಿರ್ಮಿಸಬೇಕು. ಸರ್ಕಾರವೇ ರಾಮಮಂದಿರದ ಹೊಣೆ ಹೊರಬೇಕು.

ಮಸೀದಿಯನ್ನು ಕೆಡವಿದ್ದು ಕಾನೂನು ಉಲ್ಲಂಘನೆಯಾಗಿದೆ. ಸುನ್ನಿ ವಕ್ಫ್ ಬೋರ್ಡಿಗೆ ಅಯೋಧ್ಯೆಯಲ್ಲೇ 5 ಎಕ್ರೆ ಪರ್ಯಾಯ ಭೂಮಿಯನ್ನು ನೀಡಬೇಕು. ವಿಶೇಷಾಧಿಕಾರ ಬಳಸಿ ನೀಡುವ ಪರ್ಯಾಯ ಭೂಮಿ 3 ತಿಂಗಳಲ್ಲಿ ನಿರ್ಧರಿಸಬೇಕು. ಇದನ್ನೂ ಓದಿ:ಅಯೋಧ್ಯೆ ತೀರ್ಪು ಸಮಾಧಾನ ತಂದಿಲ್ಲ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ವಿವಾದಿತ ಭೂಮಿಯನ್ನು ಮೂರು ಭಾಗಗಳಾಗಿ ಮಾಡಿದ ಅಲಹಾಬಾದ್ ಹೈಕೋರ್ಟ್ ತೀರ್ಪು ನ್ಯಾಯ ಸಮ್ಮತವಲ್ಲ. ಯಾತ್ರಿಗಳ ಅಭಿಪ್ರಾಯ, ಪುರಾತತ್ವ ಸಾಕ್ಷ್ಯ ಹಿಂದೂಗಳ ಪರವಾಗಿದೆ. ಮಸೀದಿಯ ಒಳಭಾಗದಲ್ಲಿ ಹಿಂದೂಗಳ ಪೂಜೆ ನಡೆಯುತಿತ್ತು. ಬ್ರಿಟಿಷರಿಂದಾಗಿ ಹಿಂದೂಗಳಿಗೆ ಪೂಜೆ ಕೈತಪ್ಪಿತ್ತು. 1856-1857ರವರೆಗೆ ನಮಾಜ್ ಬಗ್ಗೆ ದಾಖಲೆ ಇಲ್ಲ.

ರಾಮಲಲ್ಲಾ ಅಸ್ತಿತ್ವದ ಬಗ್ಗೆ ಹೇಳಿದ್ದೇನು?
ಮಸೀದಿ ಮುಖ್ಯ ಗುಂಬಜ್‍ನ ಕೆಳಭಾಗದಲ್ಲಿ ಗರ್ಭಗುಡಿಯಿತ್ತು ಎಂದು ನಂಬಲಾಗುತ್ತಿದೆ. ಮಸೀದಿಯ ಒಳಭಾಗದಲ್ಲಿ ಹಿಂದುಗಳು ಕೂಡ ಪೂಜೆ ಮಾಡುತ್ತಿದ್ದರು. ಬ್ರಿಟಿಷರು ಒಳಭಾಗವನ್ನು ಮುಸ್ಲಿಮರಿಗೆ, ಹೊರಭಾಗವನ್ನು ಹಿಂದುಗಳಿಗೆ ಎಂದು ಪ್ರತ್ಯೇಕಿಸಿದರು. ಇದರಿಂದಾಗಿ ಹಿಂದುಗಳಿಗೆ ಪೂಜೆಯ ಅವಕಾಶ ಕೈತಪ್ಪಿತ್ತು. ಮಸೀದಿಯ ಗುಂಬಜನ್ನು ರಾಮಜನ್ಮ ಭೂಮಿಯ ಸ್ಥಳ ಎಂದು ಜನ ನಂಬುತ್ತಾರೆ. ಪುರಾಣಗಳಲ್ಲೂ ಸಹ ರಾಮಲಲ್ಲಾ ಬಗ್ಗೆ ಉಲ್ಲೇಖವಿದೆ. ಈ ಪ್ರದೇಶವನ್ನು ಹಿಂದೂಗಳ ಪರಿಕ್ರಮ ಮಾಡುತ್ತಿದ್ದರು. ಮಸೀದಿ ಅಡಿಪಾಯದ ಕೆಳಗೆ ವಿಶಾಲ ರಚನೆ ಇತ್ತು, ಇದು ಇಸ್ಲಾಂ ರಚನೆಯಾಗಿರಲಿಲ್ಲ.

ಮಂದಿರ ಒಡೆದು ಮಸೀದಿ ಕಟ್ಟಲಾಗಿದೆ ಎನ್ನುವ ಅಂಶದ ಕುರಿತು ಖಚಿತತೆ ಇಲ್ಲ. ಉತ್ಖನನದ ವೇಳೆ ಸಿಕ್ಕ ಕುರುಹುಗಳು ಇಸ್ಲಾಂ ರಚನೆಯಾಗಿರಲಿಲ್ಲ. ರಾಮ ಅಯೋಧ್ಯೆಯಲ್ಲೇ ಹುಟ್ಟಿದ ಎಂಬ ಬಗ್ಗೆ ವಿವಾದವಿಲ್ಲ. ಕೇವಲ ನಂಬಿಕೆಯಿಂದ ಹಕ್ಕನ್ನು ಸಾಬೀತು ಮಾಡಲು ಸಾಧ್ಯವಿಲ್ಲ. ಕಾನೂನಿನ ಆಧಾರದ ಮೇಲೆ ಭೂಮಿಯ ಹಕ್ಕನ್ನು ನಿರ್ಧರಿಸಲಾಗುತ್ತದೆ.

* ಸೀತಾ ರಸೋಯಿ – ಮೊದಲ ಬಾರಿಗೆ ಸೀತೆ ಅಡುಗೆ ಮಾಡಿದ್ದ ಸ್ಥಳ, ಕುಟುಂಬ ಸದಸ್ಯರಿಗಾಗಿ ಸಿಹಿ ಅಡುಗೆ ತಯಾರಿಸಿದ್ದ ಸೀತೆ
* ರಾಮ್ ಭಂಡಾರ್ – ಭಗವಾನ್ ಶ್ರೀರಾಮನ ಭೋಜನ ಗೃಹ, ಸೀತಾ ರಸೋಯಿಯಲ್ಲಿ ಅಡುಗೆ ಮಾಡಿ ಇಲ್ಲಿ ಭೋಜನ
* ರಾಮ್ ಚಬೂತರ್ – ಇದು ಭಗವಾನ್ ಶ್ರೀರಾಮ ಹುಟ್ಟಿದ ಸ್ಥಳ, ಇದೇ ಜಾಗದಲ್ಲಿ ಶ್ರೀರಾಮ ಬೆಳೆದ ಜಾಗ

ಕೇಳಿದವರಿಗೆ ಏನು ಸಿಕ್ಕಿತು?
ಸುನ್ನಿ ವಕ್ಫ್ ಬೋರ್ಡ್ ಜಮೀನಿನಿಂದ ನಮ್ಮನ್ನು ಹೊರಗಡೆ ಇಡಬೇಡಿ ಎಂದು ಕೇಳಿಕೊಂಡಿತ್ತು. ಕೋರ್ಟ್ ವಿವಾದಿತ ಜಮೀನಿನಲ್ಲಿ ಜಾಗ ನೀಡದೇ ಅಯೋಧ್ಯೆಯಲ್ಲಿ ಪ್ರತ್ಯೇಕವಾಗಿ 5 ಎಕ್ರೆ ಜಾಗ ನೀಡುವಂತೆ ಆದೇಶಿಸಿದೆ.

ನಿರ್ಮೋಹಿ ಅಖಾಡ ವಿವಾದಿತ ಜಾಗದ ಮೇಲೆ ನಮಗೆ ನಿಯಂತ್ರಣ ನೀಡಬೇಕು ಎಂದು ಕೇಳಿಕೊಂಡಿತ್ತು. ಆದರೆ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ. ರಾಮಜನ್ಮಭೂಮಿ ನ್ಯಾಸ್ ವಿವಾದಿತ ಜಾಗದ ಮೇಲೆ ಪೂರ್ಣ ನಿಯಂತ್ರಣ ಸಿಗಬೇಕು ಎಂದು ಕೇಳಿತ್ತು. ಕೋರ್ಟ್ ಭೂಮಿಯ ಸಂಪೂರ್ಣ ಹಕ್ಕನ್ನು ನೀಡಿದೆ.

Share This Article
Facebook Whatsapp Whatsapp Telegram
Previous Article Rebel MLAs Sofitel 0 ಬುಧವಾರ ಅನರ್ಹ ಶಾಸಕರ ಭವಿಷ್ಯ ನಿರ್ಧಾರ
Next Article Ram Mandir 1 e1570442071862 ಅಯೋಧ್ಯೆ ರಾಮ ಮಂದಿರದಲ್ಲಿ ವಿಶೇಷತೆ ಏನು? ಹೇಗಿರಲಿದೆ ದೇವಾಲಯ?

Latest Cinema News

bigg boss 12 kannada contestants
ಬಿಗ್‌ಬಾಸ್ ಮನೆಗೆ ಈ ಬಾರಿ ಯಾರು ಹೋಗ್ತಾರೆ? ಹರಿದಾಡುತ್ತಿದೆ ಹಲವು ಹೆಸರುಗಳು
Cinema Latest Main Post Sandalwood
Megha Shetty
BBK 12 | ದೊಡ್ಮನೆಗೆ ಹೋಗ್ತಾರಾ ನಟಿ ಮೇಘಾ ಶೆಟ್ಟಿ?
Cinema Latest Sandalwood Top Stories
Ramya Ravichandran
ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್
Cinema Districts Karnataka Latest Sandalwood Top Stories Tumakuru
Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories

You Might Also Like

Abhishek Sharma 3
Cricket

Ind vs Pak | ಕಿರಿಕ್‌ ತೆಗೆದ ಹ್ಯಾರಿಸ್‌ ರೌಫ್‌ಗೆ ತಕ್ಕ ಉತ್ತರ ಕೊಟ್ಟ ಅಭಿಷೇಕ್ ಶರ್ಮಾ

1 hour ago
Fakhar Zaman
Cricket

Asia Cup 2025 | ಔಟ್‌ ಅಲ್ಲ ನಾಟೌಟ್‌ – ಅಂಪೈರ್‌ ತೀರ್ಪಿನ ವಿರುದ್ಧ ಸಿಡಿದ ಫಖರ್‌ ಝಮಾನ್‌

1 hour ago
Sahibzada Farhan 1
Cricket

ಫಿಫ್ಟಿ ಬಾರಿಸಿ ಫರ್ಹಾನ್‌ ಗನ್‌ ಸೆಲೆಬ್ರೇಷನ್ – ಪೆಹಲ್ಗಾಮ್ ದಾಳಿಯ ಉಗ್ರರಿಗೆ ಹೋಲಿಸಿದ ನೆಟ್ಟಿಗರು

2 hours ago
Abhishek Sharma 2
Cricket

Asia Cup 2025 | ಭಾರತದ ಬೆಂಕಿ ಆಟಕ್ಕೆ ಪಾಕ್‌ ಧೂಳಿಪಟ – ಸೂಪರ್‌ ಫೋರ್‌ನಲ್ಲಿ 6 ವಿಕೆಟ್‌ಗಳ ಅಮೋಘ ಜಯ

2 hours ago
Veerendra Heggade
Dakshina Kannada

ಎತ್ತರದ ಬೆಟ್ಟದಲ್ಲಿ ನೀರು ನಿಲ್ಲೋದಿಲ್ಲ, ಹಾಗೆ ಎಲ್ಲಾ ಕಷ್ಟಗಳೂ ಜಾರಿ ಹೋಗುತ್ತವೆ: ವೀರೇಂದ್ರ ಹೆಗ್ಗಡೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?