ಅಯೋಧ್ಯೆ (ರಾಮಮಂದಿರ): ರಾಮಮಂದಿರದಲ್ಲಿ (Ram Mandir) ರಾಮಲಲ್ಲಾ (Ram Lalla) ಪ್ರಾಣ ಪ್ರತಿಷ್ಠಾಪನೆ ವಿಧಿವಿಧಾನಗಳು ನಡೆಯುತ್ತಿವೆ. ಇಂದು (ಗುರುವಾರ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ.
150-200 ಕೆಜಿ ತೂಕದ ವಿಗ್ರಹವನ್ನು ಕ್ರೇನ್ ಸಹಾಯದಿಂದ ಒಳಗೆ ತರುವ ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ರಾಮಮಂದಿರ ಪ್ರವೇಶಿಸಿದ ರಾಮಲಲ್ಲಾ ಮೂರ್ತಿ
- Advertisement 2
- Advertisement 3
ರಾಮಲಲ್ಲಾನ ವಿಗ್ರಹವನ್ನು ಬುಧವಾರ ಸಂಜೆ ಅಯೋಧ್ಯೆ ದೇವಸ್ಥಾನಕ್ಕೆ ತರಲಾಗಿತ್ತು. ಅದನ್ನು ಗರ್ಭಗುಡಿಯಲ್ಲಿ ಇರಿಸಲು ಕ್ರೇನ್ ಬಳಸಿ ಮೇಲೆತ್ತಲಾಯಿತು. ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೂ ಮೊದಲು ಗರ್ಭಗುಡಿಯಲ್ಲಿ ವಿಗ್ರಹವನ್ನು ಸ್ಥಾಪಿಸಲಾಗುವುದು.
- Advertisement 4
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಲ್ಲಿ ಕೆತ್ತಿದ ಸುಮಾರು 150-200 ಕೆಜಿ ತೂಕದ ವಿಗ್ರಹವನ್ನು ಬುಧವಾರ ಸಂಜೆ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ಮೂರ್ತಿಯನ್ನು ಒಳಗೆ ತರುವ ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ನಡೆಯಿತು. ಇದನ್ನೂ ಓದಿ: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ಮೂರ್ತಿ ಇಂದು ರಾಮಮಂದಿರ ಪ್ರವೇಶ – ದೇವಾಲಯದ ಸುತ್ತ ಪ್ರದಕ್ಷಿಣೆ
ನಿನ್ನೆ ಸಂಜೆ ರಾಮಲಲ್ಲಾ ಅವರ ಬೆಳ್ಳಿಯ ವಿಗ್ರಹವನ್ನು ಗುಲಾಬಿ ಮತ್ತು ಚೆಂಡು ಹೂಗಳಿಂದ ಅಲಂಕರಿಸಲಾಗಿತ್ತು. ಸಂಜೆ ರಾಮಮಂದಿರದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. ಜನವರಿ 22 ರ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಚರಣೆಯ ಅಂಗವಾಗಿ ‘ಕಲಶ ಪೂಜೆ’ ನಡೆಯಿತು.