Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಹಿತಿ ನೀಡದೇ ಅಯೋಧ್ಯೆ ಕೇಸ್‍ನಿಂದ ಮುಸ್ಲಿಂ ಪರ ವಕೀಲ ಧವನ್ ವಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಾಹಿತಿ ನೀಡದೇ ಅಯೋಧ್ಯೆ ಕೇಸ್‍ನಿಂದ ಮುಸ್ಲಿಂ ಪರ ವಕೀಲ ಧವನ್ ವಜಾ

Latest

ಮಾಹಿತಿ ನೀಡದೇ ಅಯೋಧ್ಯೆ ಕೇಸ್‍ನಿಂದ ಮುಸ್ಲಿಂ ಪರ ವಕೀಲ ಧವನ್ ವಜಾ

Public TV
Last updated: December 3, 2019 3:23 pm
Public TV
Share
2 Min Read
rajeev dhavan
SHARE

– ಉದ್ದೇಶಪೂರ್ವಕವಾಗಿ ತೆಗೆದು ಹಾಕಲಾಗಿದೆ
– ತಂಡದಿಂದ ತೆಗೆದು ಹಾಕಿದ್ದಕ್ಕೆ ಧವನ್ ಕೆಂಡಾಮಂಡಲ

ನವದೆಹಲಿ: ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನ್ನಿ ವಕ್ಫ್ ಬೋರ್ಡ್ ಹಾಗೂ ಇತರ ಮುಸ್ಲಿಂ ಸಂಘಟನೆಗಳ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ರಾಜೀವ್ ಧವನ್ ಅವರನ್ನು ಕಾನೂನು ತಂಡದಿಂದ ವಜಾಗೊಳಿಸಿದೆ.

ಈ ಕುರಿತು ರಾಜೀವ್ ಧವನ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಎಓಆರ್(ಅಡ್ವಕೇಟ್ ಆನ್ ರೆಕಾರ್ಡ್) ಪ್ರಕಾರ ಬಾಬ್ರಿ ಮಸೀದಿ ಪ್ರಕರಣದ ವಾದ ಮಂಡನೆಯಿಂದ ನನ್ನನ್ನು ತೆಗದು ಹಾಕಲಾಗಿದೆ. ಜಮಿಯತ್ ಉಲೇಮಾ ಹಿಂದ್(ಜೆಯುಎಚ್) ಪರ ವಕೀಲ ಇಜಾಝ್ ಮಕ್ಬುಲ್ ನನ್ನನ್ನು ವಜಾಗೊಳಿಸಿದ್ದಾರೆ. ಮುನ್ಸೂಚನೆ ಇಲ್ಲದೆ ನನ್ನನ್ನು ತೆಗೆದು ಹಾಕಿದ್ದಕ್ಕೆ ಔಪಚಾರಿಕ ಪತ್ರವನ್ನು ನಾನು ಕಳುಹಿಸಿದ್ದೇನೆ. ಇನ್ನು ಮುಂದೆ ನಾನು ಪ್ರಕರಣದಲ್ಲಿ ನಾನು ವಾದ ಮಂಡಿಸುವುದಿಲ್ಲ ಧವನ್ ಹೇಳಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ನನ್ನನ್ನು ತೆಗೆಯಲಾಗಿದೆ ಎಂಬ ವಿಚಾರ ನನಗೆ ಗೊತ್ತಾಯಿತು. ಆದರೆ ಇದು ಸುಳ್ಳು. ಪ್ರಕರಣದಲ್ಲಿ ವಾದ ಮಾಡಲು ಯಾರನ್ನು ಸೇರಿಸಬೇಕು ಎಂಬ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಎಓಆರ್ ಅವರಿಗೆ ಇರುತ್ತದೆ. ಆದರೆ ಇಲ್ಲಿ ಉದ್ದೇಶಪೂರ್ವಕವಾಗಿ ಇಜಾಝ್ ಮಕ್ಬುಲ್ ಅವರ ಸೂಚನೆಯ ಮೇರೆಗೆ ನನ್ನನ್ನು ತೆಗೆದುಹಾಕಲಾಗಿದೆ ಎಂದು ಧವನ್ ಫೇಸ್‍ಬುಕ್‍ನಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಕೇಸ್ – 92 ವರ್ಷದ ‘ತರುಣ’ ವಕೀಲನ ಸಾಧನೆಗೆ ಪ್ರಶಂಸೆಯ ಸುರಿಮಳೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಸೋಮವಾರ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ. ಜಮಿಯತ್- ಉಲಮಾ-ಎ ಹಿಂದ್ ಪರವಾಗಿ ಮೌಲಾನಾ ಸಯ್ಯದ್ ಅಶಾದ್ ರಶಿದಿ ಅವರು ಪರು ಮರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದು, ಬಾಬ್ರಿ ಮಸೀದಿಯನ್ನು ನಿರ್ಮಿಸಲು ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶ ನೀಡುವ ಮೂಲಕ ಸಂಪೂರ್ಣ ನ್ಯಾಯ ಒದಗಿಸುವಂತೆ ಕೋರಲಾಗಿದೆ ಎಂದು ತಿಳಿಸಿದ್ದಾರೆ. ಅಯೋಧ್ಯೆ ಪ್ರಕರಣದ ಕುರಿತು ಇದು ಮೊದಲ ಮರುಪರಿಶೀಲನಾ ಅರ್ಜಿಯಾಗಿದ್ದು, ಈ ಹಿಂದೆ ಸುನ್ನಿ ವಕ್ಫ್ ಮಂಡಳಿ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಅಯೋಧ್ಯೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಜಮಿಯತ್- ಉಲಮಾ-ಎ ಹಿಂದ್ 217 ಪುಟಗಳ ಮೇಲ್ಮನವಿ ಸಲ್ಲಿಸಿದೆ.

ಸೋಮವಾರ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಜಮಿಯತ್-ಉಲಮಾ-ಎ ಹಿಂದ್ ಪರ ವಕೀಲರೊಬ್ಬರು, ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿದ್ದೇವೆ ಹಾಗೂ ಅರ್ಥ ಮಾಡಿಕೊಂಡಿದ್ದೇವೆ. ದೇಶದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

Ayodhya ram mandir Babri Masjid

ಸುಪ್ರೀಂಕೋರ್ಟ್ ಬಾಬ್ರಿ ಮಸೀದಿಯ ನಾಶಕ್ಕೆ ಅವಕಾಶ ನೀಡಿದೆ. ಮುಸ್ಲಿಮರಿಗೆ 5 ಎಕರೆ ಜಾಗವನ್ನು ನೀಡುವ ನಿಟ್ಟಿನಲ್ಲಿ ಸಂವಿಧಾನದ 142 ವಿಧಿಯನ್ನು ತಪ್ಪಾಗಿ ಬಳಸಲಾಗಿದೆ. ಹೀಗೆ ಅನೇಕ ವಿಚಾರವಾಗಿ ಒಟ್ಟು 217 ಪುಟಗಳ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

TAGGED:AyodhyaBabri MasjidPublic TVRam MandirSupreme Courtಅಯೋಧ್ಯೆಪಬ್ಲಿಕ್ ಟಿವಿಬಾಬ್ರಿ ಮಸೀದಿರಾಮ ಮಂದಿರಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

DK Shivakumar 1 1
Bengaluru City

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗ್ತಿದೆ: ಡಿಕೆಶಿ

Public TV
By Public TV
17 minutes ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
20 minutes ago
Ballari Kanaka Durgamma Sidi Bandi Rathotsava 1
Bellary

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
41 minutes ago
Modi In Israel
Latest

9 ವರ್ಷಗಳ ಬಳಿಕ ಇಸ್ರೇಲ್‌ಗೆ ಭೇಟಿ, ಇಂದಿನಿಂದ 2 ದಿನಗಳ ಪ್ರವಾಸ – ಭೇಟಿಗೂ ಮುನ್ನ ಮೋದಿ ಹೇಳಿದ್ದೇನು?

Public TV
By Public TV
1 hour ago
CRIME
Bengaluru City

ಬುಲೆಟ್ ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿ – ಇಬ್ಬರು ಸಾವು

Public TV
By Public TV
2 hours ago
Bengaluru
Bengaluru City

ಯುವಕರಿಗೆ ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್ – ರಾಜ್ಯ ರಾಜಧಾನಿಯಲ್ಲಿ ಇದೆಂಥಾ ಕ್ರೌರ್ಯ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?