Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯೋಧ್ಯೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು – ಸುಪ್ರೀಂ ಐತಿಹಾಸಿಕ ತೀರ್ಪು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಯೋಧ್ಯೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು – ಸುಪ್ರೀಂ ಐತಿಹಾಸಿಕ ತೀರ್ಪು

Latest

ಅಯೋಧ್ಯೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು – ಸುಪ್ರೀಂ ಐತಿಹಾಸಿಕ ತೀರ್ಪು

Public TV
Last updated: November 9, 2019 12:30 pm
Public TV
Share
3 Min Read
images
SHARE

ನವದೆಹಲಿ: ಅಯೋಧ್ಯೆಯಲ್ಲಿನ 2.77 ಎಕ್ರೆ  ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು, ಮಸೀದಿ ನಿರ್ಮಾಣಕ್ಕೆ 5 ಎಕ್ರೆ ಪ್ರತ್ಯೇಕ ಜಾಗ ನೀಡಬೇಕೆಂದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ರಂಜನ್ ಗೊಗೋಯ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನಿಕಾ ಪೀಠ ಸರ್ವ ಸಮ್ಮತದ ತೀರ್ಪು ಪ್ರಕಟಿಸಿದೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ ಎಂದು ತಿಳಿಸಿದೆ.

ಆದೇಶದ ಪ್ರಮುಖ ಅಂಶಗಳು
ಮುಸ್ಲಿಮರಿಗೆ 5 ಎಕ್ರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸಬೇಕು. ರಾಮ ಮಂದಿರ ನಿರ್ಮಾಣ ಹೊಣೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್ ಸ್ಥಾಪಿಸಬೇಕು. ವಿವಾದಿತ 2.77 ಎಕರೆಯಲ್ಲಿ ಕೇವಲ ರಾಮಲಲ್ಲಾಗಷ್ಟೇ ಅಧಿಕಾರವಿದೆ.

ಬಾಬ್ರಿ ಮಸೀದಿ ಭೂಮಿ ಮಾಲೀಕತ್ವ ಶಿಯಾ ವಕ್ಫ್ ಬೋರ್ಡಿಗೆ ಒಳಪಟ್ಟಿದ್ದಲ್ಲ ಮತ್ತು ಹಕ್ಕಿಲ್ಲ. ಬಾಬರ್ ಕಮಾಂಡರ್ ಮೀರ್ ಬಾಕಿ ಬಾಬ್ರಿ ಮಸೀದಿ ನಿರ್ಮಿಸಿದ್ದಾನೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ.

Ayodhya Judge

ಹಿಂದೂ ದೇವಾಲಯ ನಾಶದ ಬಗ್ಗೆ ಸಾಕ್ಷ್ಯ ಇಲ್ಲ. 2ನೇ ಶತಮಾನದಲ್ಲಿ ದೇವಸ್ಥಾನ ಇದ್ದ ಬಗ್ಗೆ ಸಾಕ್ಷಿ ಇದೆ. ಕೇವಲ ಪುರಾತತ್ವ ಸಾಕ್ಷ್ಯವನ್ನಷ್ಟೇ ಅವಲಂಬಿಸಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದ ಎನ್ನುವ ನಂಬಿಕೆ ಅವಿವಾದಿತ.

ರಾಮನ ಮೂರ್ತಿ ಇಟ್ಟ ವಿಚಾರದಲ್ಲಿ ಸುನ್ನಿ ವಕ್ಫ್ ಬೋರ್ಡ್ ವಾದವನ್ನು ಮಾನ್ಯ ಮಾಡುತ್ತೇವೆ. 1949ರಲ್ಲಿ ರಾಮನ ಮೂರ್ತಿ ಇಡಲಾಗಿತ್ತು. 1856ರವರೆಗೆ ನಮಾಜ್ ಮಾಡಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ.

ಮಸೀದಿಯ ಕೆಳಗಡೆ ಹಿಂದೂ ರಚನೆ ಇದೆ ಅಂತ ನಂಬಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಹಿಂದೂ-ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಬ್ರಿಟೀಷರು ಆ ಜಾಗವನ್ನು ಪ್ರತ್ಯೇಕಿಸಿ ಬೇಲಿ ಹಾಕಿಸಿದ್ದರು. ಮಸೀದಿಯ ಒಳಗೆ ಮುಸ್ಲಿಮರು, ಆವರಣದಲ್ಲಿ ಹಿಂದೂಗಳು ಪ್ರಾರ್ಥನೆ ಮಾಡುತ್ತಿದ್ದರು.

ಮಸೀದಿಯ ಒಳಭಾಗದ ಬಗ್ಗೆಯೂ ವಿವಾದವಿದೆ. ಭೂ ಮಾಲೀಕತ್ವ ನಂಬಿಕೆ ಮೇಲೆ ಆಗುವುದಿಲ್ಲ. ಬಾಬ್ರಿ ಮಸೀದಿ ಧ್ವಂಸ ಪ್ರಾರ್ಥನೆ ಹಕ್ಕಿನ ಉಲ್ಲಂಘನೆ. ಅಲಹಾಬಾದ್ ಕೋರ್ಟ್ ಮೂವರು ಅರ್ಜಿದಾರರಿಗೆ ಸಮಾನವಾಗಿ ಮೂರು ಭಾಗವಾಗಿ ಹಂಚಿಕೆ ಮಾಡಿ ತೀರ್ಪು ನೀಡಿದ್ದು ತಪ್ಪು. ಸಂವಿಧಾನದ ಮುಂದೆ ಎಲ್ಲಾ ಧರ್ಮಗಳೂ ಒಂದೇ. ಜಡ್ಜ್ ಗಳಿಗೆ ಎಲ್ಲಾ ಧರ್ಮಗಳು ಒಂದೇ.

Kartik Chopra, spokesperson, Nirmohi Akhara: Nirmohi Akhara is grateful that SC has recognised our fight of last 150 years and has given the Nirmohi Akhara adequate representation in the trust to be set up by the Central Government to build & manage the Shri Ram Janmasthan Temple

— ANI (@ANI) November 9, 2019

ನಿರ್ಮೋಹಿ ಅಖಾಡದ ಅರ್ಜಿಯನ್ನು ನಾವು ಪರಿಗಣಿಸುವುದಿಲ್ಲ. ಆದರೆ ಕೇಂದ್ರ ಸರ್ಕಾರ ದೇವಾಲಯ ನಿರ್ಮಾಣ ಮಾಡುವ ಟ್ರಸ್ಟ್ ನಲ್ಲಿ ನಿರ್ಮೋಹಿ ಅಖಾಡಕ್ಕೆ ಪ್ರತಿನಿಧ್ಯ ನೀಡಬೇಕು.

images

ಏನಿದು ಪ್ರಕರಣ?
2010 ರಲ್ಲಿ ಅಲಹಾಬಾದ್ ಹೈಕೋರ್ಟ್ 2.77 ಎಕರೆಗಳ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಜಾಗವನ್ನು ಮೂರು ಭಾಗಗಳಾಗಿ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ, ರಾಮ್‍ಲಲ್ಲಾಗೆ ಸಮಾನ ಹಂಚಿಕೆ ಮಾಡಲಾಗಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ 14 ಮೇಲ್ಮನವಿ ಅರ್ಜಿಗಳು ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಸಂಧಾನ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸೂಚನೆ ನೀಡಿತ್ತು. ಆದರೆ ಈ ಸಂದರ್ಭದಲ್ಲೇ ಹಿಂದೂ ಧರ್ಮದ ಸಂಘಟನೆಗಳು 1950 ರಿಂದಲೂ ತೀರ್ಪಿಗಾಗಿ ಕಾಯುತ್ತಿದ್ದು, ಸಂಧಾನದಿಂದ ಇದರ ಪರಿಹಾರ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದರು. ಅಯೋಧ್ಯೆ ವಿಚಾರ ಬಹಳ ಸೂಕ್ಷ್ಮವಾಗಿರುವ ಕಾರಣ ಸಂವಿಧಾನ ಪೀಠ ಸಂಧಾನದ ಮೂಲಕ ಬಗೆಹರಿಸಲು ಮಧ್ಯಸ್ಥಿಕೆ ತಂಡವನ್ನು ರಚಿಸಿತು. ಈ ತಂಡ ನಡೆಸಿದ ಸಂಧಾನ ಪ್ರಕ್ರಿಯೆ ವಿಫಲವಾದ ಹಿನ್ನೆಲೆಯಲ್ಲಿ ಅಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅಕ್ಟೋಬರ್ 16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿತ್ತು.

TAGGED:Ayodhya verdictBabri MasjidRammandirShia WaqfSupreme Courtಅಯೋಧ್ಯೆ ಕೇಸ್ಬಾಬ್ರಿ ಮಸೀದಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories
Rashmika Mandanna Vijay Deverakonda 1
ರಶ್ಮಿಕಾ ರಿಸೆಪ್ಷನ್ ಸೀರೆಯಲ್ಲಿ ಕನ್ನಡದ ಕಂಪು – ಗಂಡಭೇರುಂಡ, ಕೊಡವರ ಒಡಿಕತ್ತಿ ಕಸೂತಿ
Cinema Latest South cinema

You Might Also Like

ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
14 minutes ago
Nancy Grewal
Crime

ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

Public TV
By Public TV
34 minutes ago
ಕರ್ನಾಟಕ ರಾಜ್ಯ ಬಜೆಟ್‌- 2025
Bengaluru City

ಶುಕ್ರವಾರ ಬೆಳಗ್ಗೆ 10:15ಕ್ಕೆ ಬಜೆಟ್‌: ಪೆಟ್ರೋಲ್, ಡೀಸೆಲ್‌ ಮೇಲೆ 1 ರೂ. ಸೆಸ್?

Public TV
By Public TV
53 minutes ago
murder of woman for gold accused arrested in karwar
Crime

ಚಿನ್ನದ ಆಸೆಗೆ ವೃದ್ಧೆಯ ರುಂಡ ತುಂಡರಿಸಿ ಹತ್ಯೆ, ಶವ ವಿವಸ್ತ್ರಗೊಳಿಸಿ ವಿಕೃತಿ – ಆರೋಪಿ ಅರೆಸ್ಟ್‌

Public TV
By Public TV
58 minutes ago
Siddaramaiah HD Kumaraswamy
Bengaluru City

ಒಳ ಮೀಸಲಾತಿ ಗೊಂದಲ ಇತ್ಯರ್ಥ ಮಾಡೋಕೆ ಎಷ್ಟು ವರ್ಷ ಬೇಕು – ಸಿದ್ದರಾಮಯ್ಯಗೆ ಹೆಚ್‌ಡಿಕೆ ಪ್ರಶ್ನೆ

Public TV
By Public TV
1 hour ago
india condoles death of irans supreme leader ayatollah ali khamenei
Latest

ಖಮೇನಿ ಸಾವು – ಸಂತಾಪ ಸೂಚಿಸಿದ ಭಾರತ ಸರ್ಕಾರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?