ನವದೆಹಲಿ: 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಅಜಾದಿ ಗೌರವ್ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಯಾತ್ರೆ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಸದ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಹಲವು ಹಿರಿಯ ನಾಯಕರು ಈ ಯಾತ್ರೆಯಲ್ಲಿ ಭಾಗಿಯಾದರು.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣದ ಬಳಿಕ ಯಾತ್ರೆ ಆರಂಭಿಸಿದ ನಾಯಕರು ರಾಜಘಾಟ್ನಲ್ಲಿರುವ ಗಾಂಧಿ ಸಮಾಧಿಗೆ ತೆರಳಿ ವಿಶೇಷ ಗೌರವ ಸಲ್ಲಿಸಿದರು. ಪಕ್ಷದ ಸದಸ್ಯರಾಗಿ ದೇಶಕ್ಕೆ ಸೇವೆ ಸಲ್ಲಿಸುವುದಾಗಿ ಮತ್ತು ರಾಷ್ಟ್ರದ ಐಕ್ಯತೆಗೆ ಶ್ರಮಿಸುವುದಾಗಿ ನಾಯಕರು ಪ್ರತಿಜ್ಞೆ ಮಾಡಿದರು.
ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ನಮ್ಮ ಹುತಾತ್ಮರು, ನಾಗರಿಕರು ಮತ್ತು ನಾಯಕರನ್ನು ನೆನಪಿಸಿಕೊಳ್ಳಬೇಕು ಮತ್ತು ಅವರ ಕಾರಣದಿಂದಾಗಿ ನಾವು ಇಂದು ಸ್ವತಂತ್ರರಾಗಿದ್ದೇವೆ. ನಾವು ಒಟ್ಟಾಗಿ ನಮ್ಮ ದೇಶಕ್ಕಾಗಿ ನಿರ್ಧಾರವನ್ನು ತೆಗೆದುಕೊಳ್ಳಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಸಿದ್ಧರಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜಕೀಯ ಲಾಭಕ್ಕಾಗಿ ಐತಿಹಾಸಿಕ ಸತ್ಯಗಳನ್ನು ತಿರುಚುತ್ತಿದ್ದಾರೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಹೋರಾಟಗಾರರ ಮಹಾನ್ ತ್ಯಾಗ ಮತ್ತು ದೇಶದ ಅದ್ಭುತ ಸಾಧನೆಗಳನ್ನು ಅತ್ಯಲ್ಪವೆಂದು ಸಾಬೀತುಪಡಿಸಲು ಈಗಿನ ಸ್ವ-ಕೇಂದ್ರಿತ ಸರ್ಕಾರವು ಹಠಮಾರಿಯಾಗಿದೆ ಮತ್ತು ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಆರೋಪಿಸಿದರು. ಇದನ್ನೂ ಓದಿ: ಯೋಧರಿಂದ್ಲೇ ಧ್ವಜಾರೋಹಣ ಮಾಡಿಸಿ ಸಂಭ್ರಮಿಸಿದ ಇಡೀ ಗ್ರಾಮ
ಇನ್ನು ಕುಟುಂಬ ರಾಜಕಾರಣ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ರಾಹುಲ್ ಗಾಂಧಿ ನಿರಾಕರಿಸಿದರು. ಇಂದು ಯಾವುದೇ ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಮಾತ್ರ ಕೋರುತ್ತೇನೆ ಎಂದ ಅವರು ದೇಶದ ಜನರಿಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ಕೋರಿದರು. ಇದನ್ನೂ ಓದಿ: 20 ಲಕ್ಷ ಉದ್ಯೋಗ ಸೃಷ್ಟಿ: ನಿತೀಶ್ ಕುಮಾರ್ ಮಹತ್ವದ ಘೋಷಣೆ
Live Tv
[brid partner=56869869 player=32851 video=960834 autoplay=true]