ಧಾರವಾಡ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾಜಿ ಶಾಸಕ ಸಂಜಯ್ ಪಾಟೀಲ್ ರಾತ್ರಿ ಕೆಲಸ ಮಾಡುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಸಚಿವ ಬಿ.ಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಇನ್ಸ್ಪೆಕ್ಟರ್ ಮೃತಪಟ್ಟಾಗ ಸೋನಿಯಾ ಅತ್ತಿರಲಿಲ್ಲ, ಟೆರರಿಸ್ಟ್ ಸತ್ತಾಗ ಅತ್ತಿದ್ದರು: ಪ್ರಹ್ಲಾದ್ ಜೋಶಿ
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಜಯ ಪಾಟೀಲ್ ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ, ನಾನು ಯಾಕೆ ಪ್ರತಿಕ್ರಿಯೆ ಕೊಡಲಿ, ಯಾರೇ ಇರಲಿ ಮಹಿಳೆಯರ ಬಗ್ಗೆ ಗೌರವ ಇಟ್ಟು ಮಾತನಾಡಬೇಕು. ಅದನ್ನು ಪಾಲಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಇಡಿ ದಾಳಿ ಪ್ರಕರಣ- ದೆಹಲಿಯಲ್ಲಿ ಮೊದಲ ಬಾರಿ ವಿಚಾರಣೆಗೆ ಹಾಜರಾದ ಜಮೀರ್
ಗೋಹತ್ಯೆ ಬಗ್ಗೆ ಮಾತನಾಡಿದ ಅವರು, ಯಾವುದೇ ಕಾಯ್ದೆ ಜಾರಿಗೆ ತರುವುದು ಬಹಳ ಮುಖ್ಯ, ಗೋಹತ್ಯೆ ಇವತ್ತು ನಿನ್ನೆ ಬಂದಿದ್ದಲ್ಲ, 1965 ರಲ್ಲಿ ಬಂದಿದೆ. ಎಲ್ಲಿ ಅಕ್ರಮ ಸಾಗಾಣಿಕೆ ಇರುತ್ತದೆ. ಅಲ್ಲಿ ಹಿಡಿಯುವ ಕೆಲಸ ಮಾಡುತ್ತಾರೆ. ಅದನ್ನು ಹುಡುಕಿಕೊಂಡು ಹೋಗಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿನ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಸಂಜೆ ಹಾನಗಲ್ ನಲ್ಲಿ ಸಭೆ ಕರೆದಿದ್ದೇವೆ. ಯಾರು, ಯಾರು ಆಕಾಂಕ್ಷಿ ಇದ್ದಾರೆ. ಅವರ ಪಟ್ಟಿ ಹೈಕಮಾಂಡ್ಗೆ ಕಳುಹಿಸುತ್ತೇವೆ. ಸೂಕ್ತ ವ್ಯಕ್ತಿಗೆ ಟಿಕೆಟ್ ಕೊಡುತ್ತೇವೆ. ಹಾನಗಲ್ ಹಾಗೂ ಸಿಂದಗಿಯಲ್ಲಿ ನಾವೇ ಗೆಲ್ಲುತ್ತೇವೆ. ಯಾರು ಗೆಲ್ಲುತ್ತಾರೆ ಹಾಗೂ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ಕೊಡುತ್ತಾರೆ. ಅವರಿಗೆ ನನ್ನ ಒಲವು ಎಂದಿದ್ದಾರೆ. ಇದನ್ನೂ ಓದಿ: ಕೊಲೆ ಯತ್ನ- ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಂಧನ