Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್

Karnataka

ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್

Public TV
Last updated: March 24, 2025 7:34 pm
Public TV
Share
2 Min Read
B K Hariprasad
SHARE

– ತಿದ್ದುಪಡಿಯ ಬದಲು ಬದಲಾವಣೆ ಎಂದು ಹೇಳಿರಬಹುದು ಡಿಕೆಶಿ ಪರ ಬ್ಯಾಟಿಂಗ್
– ಹನಿಟ್ರ್ಯಾಪ್‌ ಮೋದಿ ಗುಜರಾತ್ ಸಿಎಂ ಆಗಿದ್ದಾಗಿನಿಂದಲೂ ಇದೆ

ನವದೆಹಲಿ: ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದ ತಿದ್ದುಪಡಿಯ ಅಗತ್ಯವೂ ಇಲ್ಲ. ಬದಲಾವಣೆಯ ಅನಿವಾರ್ಯತೆಯೂ ಇಲ್ಲ. ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡಿರುವುದು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B K Hariprasad) ಸ್ಪಷ್ಟನೆ ನೀಡಿದರು.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನವನ್ನು ತಿದ್ದುಪಡಿ ತರಲು ಅವಕಾಶವಿದೆಯೇ ಹೊರತು ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬದಲಾವಣೆ ಮಾಡಲು ಬಿಡುವುದೂ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D K Shivakumar) ಅವರು ತಿದ್ದುಪಡಿಯ ಬದಲು ಬದಲಾವಣೆ ಎಂದು ಹೇಳಿರಬಹುದು ಎಂದರು. ಇದನ್ನೂ ಓದಿ: ಹಾಲಿನ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ – ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ಏನಾಯ್ತು?

ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುವುದೇ ಸಂವಿಧಾನದ ಮುಖ್ಯ ಆಶಯ. ಸಂವಿಧಾನದ ಆಶಯದಂತೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದೆ. ಸಂವಿಧಾನ ಅನುಚ್ಛೇದ 14, 15(4), 16(4) ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಲು ಅವಕಾಶವಿದೆ ಎಂದು ಹೇಳಿದರು. ಇದನ್ನೂ ಓದಿ: 3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ 6.6 ಕೋಟಿಗೆ ಮಾರಿದ ಅಕ್ಷಯ್ ಕುಮಾರ್

ಧರ್ಮದ ಆಧಾರದಲ್ಲಿ ಎಲ್ಲಿಯೂ ಕೂಡ ಮೀಸಲಾತಿ ನೀಡಿಲ್ಲ. 1977ರಿಂದ 1993ರವರೆಗೂ 4 ಹಿಂದುಳಿದ ಆಯೋಗಗಳ ವರದಿ ನೀಡಿದೆ. ಹಾವನೂರು ಆಯೋಗ, ಚಿನ್ನಪ್ಪ ರೆಡ್ಡಿ ಆಯೋಗ ಸೇರಿದಂತೆ 4 ಆಯೋಗಗಳು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರೆಲ್ಲರೂ ಹಿಂದುಳಿದ ವರ್ಗಕ್ಕೆ ಸೇರಿಸಬಹುದು ಎಂದು ವರದಿ ನೀಡಿದೆ. ಮುಖ್ಯವಾಗಿ 1993ರ ಇಂದಿರಾ ಸಹಾನಿ ವರ್ಸಸ್ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಪ್ರತಿ ರಾಜ್ಯದಲ್ಲಿ ಹಿಂದುಳಿದವರ ಆಯೋಗ ರಚಿಸಿ, ಕುಲಶಾಸ್ತ್ರ ಅಧ್ಯಯನ (Ethnology Study) ನಡೆಸಿ, ಸಮುದಾಯಗಳ ಸಬಲೀಕರಣಕ್ಕೆ ಮೀಸಲಾತಿ ನೀಡಬಹುದು ಎಂದು ಸ್ಪಷ್ಟಪಡಿಸಿದೆ ಎಂದು ನುಡಿದರು. ಇದನ್ನೂ ಓದಿ: ಪತ್ನಿಗೆ 9 ಕೋಟಿ ಜೀವನಾಂಶ, ತಿಂಗಳಿಗೆ 4 ಲಕ್ಷ – ಭಾರೀ ಸಂಚಲನ ಸೃಷ್ಟಿಸಿದ ಟೆಕ್ಕಿ ಪೋಸ್ಟ್

ಮುಸ್ಲಿಂ ಸಮುದಾಯಗಳಿಗೆ ಮೀಸಲಾತಿ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರವಿಲ್ಲ. ಗುಜರಾತ್‌ನಲ್ಲೂ (Gujarat) ಕೂಡ ಮೀಸಲಾತಿ ನೀಡಿದೆ. ಕೇಂದ್ರ ಸರ್ಕಾರದಲ್ಲಿಯೂ ಕೂಡ 4 ಪಂಗಡಗಳನ್ನು ಹೊರತುಪಡಿಸಿ ಉಳಿದವರಿಗೆ ಮೀಸಲಾತಿ ನೀಡಿದೆ. ಗುಜರಾತ್‌ನಲ್ಲಿ 101 ಸಮುದಾಯಗಳಲ್ಲಿ 23 ಮುಸ್ಲಿಂ ಒಳ ಪಂಗಡಗಳಿಗೆ ಮೀಸಲಾತಿ ನೀಡಲಾಗಿದೆ. ಮುಸ್ಲಿಂ ಸಮುದಾಯಗಳು ಹಿಂದುಳಿದಿವೆ ಎಂದು ಕೆಲವು ಆಯೋಗಗಳು ಕೂಡ ವರದಿ ನೀಡಿದೆ ಎಂದು ಹೇಳಿದರು. ಇದನ್ನೂ ಓದಿ: ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

ಹನಿಟ್ರ್ಯಾಪ್‌ ರಾಜ ಮಹಾರಾಜರ ಕಾಲದಿಂದ ಹಿಡಿದು, ನರೇಂದ್ರ ಮೋದಿ (Narendra Modi) ಅವರು ಗುಜರಾತ್‌ನ ಮುಖ್ಯಮಂತ್ರಿಯಾದ ಕಾಲದಿಂದ ಮಾನ್ಯ ಬಿಜೆಪಿ ಅಧ್ಯಕ್ಷನಿಂದಾಗಿ ಕರ್ನಾಟಕದ ಬಾಂಬೆ ಬಾಯ್ಸ್‌ಗಳು ಕೋರ್ಟ್‌ನಿಂದ ಇಂಜೆಕ್ಷನ್ ಆರ್ಡರ್ ವರೆಗೂ ಬಂದು, ಈಗ ಇಲ್ಲಿಗೆ ಬಂದು ನಿಂತಿದೆ. ಮಾಡುವುದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನದಂತೆ ಬಿಜೆಪಿಯವರು ಮಾತಾನಾಡುವುದು ಬೇಡ. ಹನಿಟ್ರ್ಯಾಪ್‌ ಈಗ ಆಗಿ ಹೋಗಿದೆ. ಅದರ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವರು ಹೇಳಿದ್ದಾರೆ. ಅದರ ಬಗ್ಗೆ ಚರ್ಚೆ ಬೇಡ ವಾಗ್ದಾಳಿ ನಡೆಸಿದರು.

TAGGED:B.K hariprasadd k shivakumarHanitrapnewdelhiಡಿ.ಕೆ.ಶಿವಕುಮಾರ್ನವದೆಹಲಿಬಿ.ಕೆ ಹರಿಪ್ರಸಾದ್ಹನಿಟ್ರ್ಯಾಪ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
7 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
8 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
8 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
9 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
10 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?