ಬೆಂಗಳೂರು: ಭಾನುವಾರ (ಜೂ.21) ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ (BK Hariprasad) ಪದಗ್ರಹಣ ಮಾಡಲಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಪ್ಯಾಲೆಸ್ ಗ್ರೌಂಡ್ನಲ್ಲಿ ಸಮಾರಂಭ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸೇರಿದಂತೆ ಎಐಸಿಸಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಹೆಚ್ಡಿಕೆ ಆರಂಭಿಸಿ, ಬಿಎಸ್ವೈ ಮುಂದುವರಿಸಿದ್ದ ಬಿಡದಿ ಯೋಜನೆ: ಡಿಕೆಶಿ ವಾಗ್ದಾಳಿ
ನಿರ್ಗಮಿತ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ಹಸ್ತಾಂತರ ಮಾಡುವ ಮೂಲಕ ಅಧಿಕೃತವಾಗಿ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಅಂದಾಜು 1 ಲಕ್ಷ ಜನ ಸೇರಬಹುದು ಎನ್ನಲಾಗಿದೆ. 300 ಜನ ಗಣ್ಯರಿಗೆ ವೇದಿಕೆ ಮೇಲೆ ಆಸನ ವ್ಯವಸ್ಥೆ ಮಾಡಲಾಗಿದ್ದು, 4000 ಬ್ಲಾಕ್ ಕಾಂಗ್ರೆಸ್ನ ಪ್ರತಿನಿಧಿಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.
70 ಊಟದ ಕೌಂಟರ್ಗಳನ್ನು ಮಾಡಲಾಗಿದ್ದು, ನಾಯಕರಿಗೆ ಎರಡು ಪ್ರತ್ಯೇಕ ವೇದಿಕೆ ಸಹ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸುವ ಕಾರಣ ನಾಳೆ ಬೆಳಗ್ಗೆ 7 ಗಂಟೆಯಿAದ ಸಂಜೆ 4 ಗಂಟೆವರೆಗೆ ಅರಮನೆ ಮೈದಾನದ ಸುತ್ತಮುತ್ತಲ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಲಿದೆ. ಹಾಗಾಗಿ, ಸಂಚಾರಿ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ.ಇದನ್ನೂ ಓದಿ: ಕೇರಳದ ಕಡಲಲ್ಲಿ ಮುಳುಗಿ ನೆಲಮಂಗಲದ ಯುವಕ ಸಾವು – ಮೊಬೈಲ್ನಲ್ಲಿ ದೃಶ್ಯ ಸೆರೆ
