– ಅಧಿಕಾರ ಕೈ ತಪ್ಪಿದ್ದಕ್ಕೆ ಎಂಟು ತಿಂಗಳಿಂದ ಕಾರ್ಯಕರ್ತರು ದುಃಖದಲ್ಲಿದ್ದಾರೆ
ಗದಗ: ಕೆಲವೇ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದು ಗ್ಯಾರೆಂಟಿ ಎಂದು ಶಾಸಕ ಬಸವರಾಜ್ ಬೊಮ್ಮಾಯಿ ಅವರು, ಸಮ್ಮಿಶ್ರ ಸರ್ಕಾರವನ್ನು ಮತ್ತೆ ಕೆಣಕಿದ್ದಾರೆ.
ನಗರದಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಶಾಸಕರು, ಬಿ.ಎಸ್.ಯಡಿಯೂರಪ್ಪ ಅವರ ಹೇಗೆ ಸಿಎಂ ಅಂತ ಕೇಳಬೇಡಿ. ಅದನ್ನು ಹೇಳುವುದಕ್ಕೆ ಆಗಲ್ಲ ಎಂದು ಹೇಳುವ ಮೂಲಕ ಸಮ್ಮಿಶ್ರ ಸರ್ಕಾರದ ನಿದ್ದೆಗೆಡುವಂತೆ ಮಾಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಅಂತ ವಿಶ್ವಾಸವಿತ್ತು. ಕೇವಲ ಎಂಟು ಸ್ಥಾನ ಕಡಿಮೆ ಬಂದಿದ್ದರಿಂದ ಸರ್ಕಾರ ರಚನೆ ಆಗಲಿಲ್ಲ. ಇದರಿಂದ ಎಲ್ಲರಿಗೂ ನಿರಾಸೆಯಾಗಿದೆ. ಎಂಟು ತಿಂಗಳಿಂದ ನೀವು ದುಃಖದಲ್ಲಿ ಇದ್ದೀರಿ. ಚಿಂತೆ ಮಾಡಬೇಡಿ ಕೆಲವೇ ದಿನದಲ್ಲಿ ಮತ್ತೆ ಬಿ.ಎಸ್.ಯಡಿಯೂರಪ್ಪ ಸಿಎಂ ಆಗುತ್ತಾರೆ ಎಂದು ಕಾರ್ಯಕರ್ತರಿಗೆ ಬೊಮ್ಮಾಯಿ ಹೇಳಿದರು.
ಲೋಕಸಭಾ ಚುನಾವಣೆಗೆ ಭಾರೀ ಸಿದ್ಧತೆ ನಡೆದಿದೆ. ನಿಮ್ಮ ಶ್ರಮ ವ್ಯರ್ಥವಾಗಬಾರದು. ಆಶಾವಾದಿಗಳಾಗಿ ಇರಬೇಕಾಗಿದ್ದು, ರಾಜಕೀಯ ನಿಂತ ನೀರಲ್ಲ. ರಾಜಕಾರಣದಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಮುಂದಿನ ದಿನಗಳಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗುತ್ತಾರೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv