7.5 ಲಕ್ಷ ಕಿ.ಮೀ. ಓಡಿರುವ ಬಸ್‍ಗಳನ್ನು ಬದಲಿಸುತ್ತೇವೆ: ಶ್ರೀರಾಮುಲು

Public TV
1 Min Read
B Sriramulu

ಬೆಂಗಳೂರು: ಗ್ರಾಮಾಂತರ ಕ್ಷೇತ್ರದಲ್ಲಿ ಇರುವ ಸಾರಿಗೆ ಸಮಸ್ಯೆಯ ಕುರಿತಾಗಿ ಸದನ ಕಲಾಪದಲ್ಲಿ ಪ್ರಸ್ತಾಪವಾದಾಗ ಸಾರಿಗೆ ಸಚಿವ ಶ್ರೀರಾಮುಲು 7.5 ಲಕ್ಷ ಕಿ.ಮೀ. ಓಡಿರುವ ಬಸ್‍ಗಳನ್ನು ಬದಲಿಸುತ್ತೇವೆ ಎಂದಿದ್ದಾರೆ.

ವಿಧಾನಸಭೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಕೊರತೆ ಇದೆ. ಶಾಲಾ- ಕಾಲೇಜು ಶುರುವಾಗಿದೆ, ಬಸ್ ಗಳ ಕೊರತೆ ಇದೆ. ಗ್ರಾಮೀಣ ಪ್ರದೇಶದಲ್ಲಿ ಕೊರತೆ ಇದೆ ಎಂದು ಶಾಸಕ ಬಸನಗೌಡ ದದ್ದಲ್ ಪ್ರಸ್ತಾಪ ಮಾಡಿದ್ದಾರೆ. ಈ ವೇಳೆ ಸಾರಿಗೆ ಸಚಿವ ಶ್ರೀರಾಮುಲು ಮಾತನಾಡಿ ಬಸ್‍ಗಳನ್ನ ಹಾಕಿದ್ದೇವೆ, ಕೆಲ ಗ್ರಾಮಗಳಿಗೆ ಸಮಸ್ಯೆ ಆಗುತ್ತಿದೆ, ಸರಿಪಡಿಸುತ್ತೇವೆ. ಶಾಲಾ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಿಕೊಡುತ್ತೇವೆ. ಬಹಳಷ್ಟು ಕಡೆಗಳಲ್ಲಿ ಈ ಬಗ್ಗೆ ಮನವಿ ಮಾಡಿದಾಗ ಬಸ್ ಸೌಲಭ್ಯ ಕಲ್ಪಿಸಿದ್ದೇವೆ. ಅಗತ್ಯ ಇರುವ ಕಡೆ ಬಸ್‍ಗಳನ್ನ ಹಾಕುತ್ತೇವೆ ಎಂದಿದ್ದಾರೆ. ಇದನ್ನೂ ಓದಿ:  ಮಸೀದಿಗಳಿಗಾಗಿ ಕೆಡವಿದ ದೇವಸ್ಥಾನಗಳ ಮರು ನಿರ್ಮಾಣ: ಸಂಗೀತ್ ಸೋಮ್

SESSION

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ರಾಜ್ಯದ ಎಲ್ಲಾ ಕಡೆ ಬೇಡಿಕೆಗೆ ಅನುಗುಣವಾಗಿ ಬಸ್‍ಗಳ ಸಂಚಾರ ವ್ಯವಸ್ಥೆ ಮಾಡಿದ್ದೇವೆ. ಆದ್ಯತೆ ಮೇರೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇವೆ. 7.5 ಲಕ್ಷ ಕಿ.ಮೀ. ಓಡಿರುವ ಬಸ್‍ಗಳನ್ನು ಬದಲಿಸುತ್ತೇವೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *