– ಸಿಎಂಗೆ ಶೃಂಗಾರ ಸಿರಿ, ಬರಗಾಲದಲ್ಲಿ ಜನರಿಗೆ ಸಂಕಟದ ಕಹಿ
ಬೆಂಗಳೂರು: ಸಿಎಂ ಕಾವೇರಿ ನಿವಾಸದ ನವೀಕರಣಕ್ಕೆ ಕೋಟಿ ಕೋಟಿ ರೂ. ಹಣ ವೆಚ್ಚ ಮಾಡುತ್ತಿರುವುದನ್ನು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ತೀವ್ರವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿಗಳಿಗೆ ಶೃಂಗಾರ ಸಿರಿ ಬರಗಾಲದಲ್ಲಿ ಜನರಿಗೆ ಸಂಕಟದ ಕಹಿ ಎಂದು ತಿವಿದಿದ್ದಾರೆ.
ರಾಜ್ಯದಲ್ಲಿ ಜನ ಜಾನುವಾರುಗಳಿಗೆ ನೀರು, ಮೇವಿಗೆ ಹಾಹಾಕಾರ ಉಂಟಾಗಿದೆ. ನಾಡಿನೆಲ್ಲೆಡೆ ತೀವ್ರ ಬರ ಎದುರಿಸುತ್ತಿರುವ ಹೊತ್ತಲ್ಲಿ ತಮ್ಮ ಮನೆಯ ಶೃಂಗಾರಕ್ಕೆ ಬರೋಬ್ಬರಿ 9 ಕೋಟಿ ರೂ. ದುಂದು ವೆಚ್ಚ ಮಾಡುವ ಜರೂರು ಮುಖ್ಯಮಂತ್ರಿಗಳಿಗಿತ್ತೆ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಾನು ರಾಜಕಾರಣಿಯಾಗಿ ಹುಟ್ಟಿಲ್ಲ, ರಾಜಕಾರಣಿಯಾಗಿ ಸಾಯಲ್ಲ: ಅನಂತ್ ಕುಮಾರ್ ಹೆಗಡೆ
ಹೀನಾಯ ಆರ್ಥಿಕ ಪರಿಸ್ಥಿತಿಯ ಕಾರಣಕ್ಕೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ. ಸಂಕಷ್ಟದ ಕಾಲದ ಪರಿಹಾರ ಕಾರ್ಯವೂ ಸ್ಥಗಿತಗೊಂಡಿದೆ. ಇಂಥಹ ಪರಿಸ್ಥಿತಿಯಲ್ಲೂ ಮನೆ ಶೃಂಗಾರದ ಆದ್ಯತೆ ಮೇಲೆ 9 ಕೋಟಿ ರೂ. ನುಂಗಿದರೆ `ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು’ ಎಂಬ ಗಾದೆ ಮಾತು ನೆನಪಿಗೆ ಬರುತ್ತದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈತ್ರಿ ಟಿಕೆಟ್ ಸ್ಪರ್ಧೆ- ಭಾನುವಾರ ಬೆಂಗಳೂರು ನಿವಾಸದಲ್ಲಿ ಸುಮಲತಾ ಸಭೆ