ಬೆಂಗಳೂರು: ನಿನ್ನೆ ನಡೆದ ಘಟನೆಗೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆಯನ್ನು ಹೊರಬೇಕಾಗುತ್ತದೆ. ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ ಆಯ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B.Y.Vijayendra) ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮ್ಯಾಜಿಸ್ಟ್ರೇಟ್ನಿಂದ ಯಾವುದೇ ಕಾರಣಕ್ಕೂ ತನಿಖೆ ಸಾಧ್ಯವಿಲ್ಲ. ಮುಖ್ಯಮಂತ್ರಿಗಳು, ಸಚಿವರೇ ಅಪರಾಧಿ ಸ್ಥಾನದಲ್ಲಿ ಇದ್ದಾರೆ. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…
ಪರಿಹಾರವನ್ನು ಬರೀ ಹತ್ತು ಲಕ್ಷ ಘೋಷಣೆ ಮಾಡಿದ್ದಾರೆ. ಕೇರಳದ ಆನೆ ತುಳಿತಕ್ಕೆ 25 ಲಕ್ಷ ಕೊಡ್ತೀರಾ. ಆದರೆ, ನಮ್ಮ ರಾಜ್ಯದವರಿಗೆ ಸಾವನ್ನಪ್ಪಿದವರಿಗೆ 50 ಲಕ್ಷ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಿದ್ರೆ ದುರ್ಘಟನೆ ತಡೆಯಬಹುದಿತ್ತು. ಅಹಮದಾಬಾದ್ನಲ್ಲಿ ನಡೆದ ಫೈನಲ್ ಮ್ಯಾಚ್ನಲ್ಲಿ 1.5 ಲಕ್ಷ ಜನರು ಸೇರಿದ್ರು. ಆದರೆ ಅಲ್ಲಿ ಯಾವುದೇ ಈ ರೀತಿಯ ದುರ್ಘಟನೆ ಆಗಿಲ್ಲ. ಆದರೆ ಬೆಂಗಳೂರಲ್ಲಿ ತಲೆ ತಗ್ಗಿಸುವಂತಹ ಘಟನೆ ನಡೆದಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ಕಿಡಿ
ರಾಜ್ಯ ಸರ್ಕಾರ ಯಾಕೆ ಉತ್ಸಾಹ ಮತ್ತೆ ತರಾತುರಿಯಾಗಿ ಮಾಡ್ತು? ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಮಾಡೋದಕ್ಕೆ ಏಕೆ ಅವಕಾಶ ಮಾಡಿಕೊಡ್ತು? ವಿಧಾನಸೌಧದ ಮುಂದೆ ಆದರೂ ಸಂಭ್ರಮಾಚರಣೆ ಮಾಡುವ ಅವಶ್ಯಕತೆ ಏನಿತ್ತು? ಉಪ ಮುಖ್ಯಮಂತ್ರಿಗಳು ಮಾಡಿದ್ರೋ, ಮುಖ್ಯಮಂತ್ರಿಗಳು ಮಾಡಿದ್ರೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.
ತಾಜ್ ವೆಸ್ಟೆಂಡ್ ಹೋಟೆಲ್ನಿಂದ ಆಟಗಾರರು ಹೊರಡುವ ಮುನ್ನವೇ, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಘಟನೆ ಸಂಭವಿಸಿತ್ತು. ಈ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಯಾಕೇ ಸಂಭ್ರಮ ಮಾಡುವ ಮನಸ್ಸು ಮಾಡ್ತು? ಸಾವು-ನೋವುಗಳು ಆಗ್ತಿದ್ರು ಕೂಡ ಏಕೆ ಸಂಭ್ರಮ ಮುಂದುವರಿಸಿದ್ರು. ರಾಜ್ಯದ ಉಪಮುಖ್ಯಮಂತ್ರಿಗಳು ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಕಪ್ಗೆ ಮುತ್ತಿಡ್ತಾರೆ. ಆಮೇಲೆ ಸಚಿವರ ಸೆಲ್ಫಿಯ ಭರಾಟೇ ಏನು ಅಂತೀರಾ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ