ಮೈಸೂರು: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಾ ಚರ್ಚೆಯ ಬಗ್ಗೆ ಮೈಸೂರಿನಲ್ಲಿ (Mysuru) ನಡೆಸ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸವಿದೆ. ನನ್ನ ಹೋರಾಟದ ಬಗ್ಗೆ ನಮ್ಮ ಕಾರ್ಯಕರ್ತರು ಮತ್ತು ಹೈಕಮಾಂಡ್ಗೆ ತೃಪ್ತಿಯಿದೆ. ಅಂತಿಮವಾಗಿ ನಮ್ಮ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಯಾಣ ಪ್ರವಾಸಿ ಸ್ಥಳಕ್ಕೆ ನಿರ್ಬಂಧದ ನಡುವೆಯೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ
ನನ್ನ ನಗು ಮುಖ ನೋಡಿದರೆ ನಿಮಗೆ ನಾನು ಬದಲಾಗುತ್ತೇನೆ ಎಂದು ಅನ್ನಿಸುತ್ತದಾ? ನಾನು ಬದಲಾಗಬೇಕಾ? ಮುಂದುವರಿಯಬೇಕಾ? ಮಾಧ್ಯಮದವರೇ ಹೇಳಿ ಎಂದು ನಗುತ್ತಲೇ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 25 ವರ್ಷದ ಬಳಿಕ ಪಾಕ್ ತೊರೆದ ಮೈಕ್ರೋಸಾಫ್ಟ್
ಜೇಬಿಗೆ ಕನ್ನ
ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿದೆ. ಇ-ಖಾತಾ ಪಡೆಯಲು ಜನ ತಿಂಗಳುಗಟ್ಟಲೇ ಪರದಾಡುತ್ತಿದ್ದಾರೆ. ಗ್ರಾಮೀಣ ಭಾಗದಲ್ಲೂ ಆಸ್ತಿ ತೆರಿಗೆ ಹೆಚ್ಚಿಸಲು ಸರ್ಕಾರ ಚಿಂತನೆ ಆರಂಭಿಸಿದೆ. ಬಿಜೆಪಿ ಹೋರಾಟದ ಫಲವಾಗಿ ವಾಲ್ಮೀಕಿ ಹಗರಣ ಸಿಬಿಐ ತನಿಖೆಗೆ ಹೋಗಿದೆ. ಸಿದ್ದರಾಮಯ್ಯ (Siddaramaiah) ಸರ್ಕಾರ ಭಂಡ ಸರ್ಕಾರ. ಭಂಡತನದಿಂದ ಸರ್ಕಾರ ಮುಂದುವರಿಯುತ್ತಿದೆ. ಕಾಂತರಾಜ್ ವರದಿಯನ್ನು ಸಿಎಂ ರಾಜಕೀಯ ಅಸ್ತ್ರವಾಗಿ ಬಳಕೆ ಮಾಡುತ್ತಿದ್ದಾರೆ. ಕುರ್ಚಿ ಚರ್ಚೆ ಶುರುವಾದಾಗ ಕಾಂತರಾಜ್ ವರದಿಯನ್ನು ಸಿಎಂ ಮುನ್ನೆಲೆಗೆ ತರುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮದುವೆ ವಿಚಾರಕ್ಕೆ ಪ್ರಭು ಚೌಹಾಣ್ ಸಂಬಂಧಿಕರು, ಭಾವಿ ಬೀಗರ ನಡುವೆ ಮಾರಾಮಾರಿ!
ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ
ಸುರ್ಜೆವಾಲ ಅವರು ಸಿಎಂ ರಾಜೀನಾಮೆ ಪಡೆಯಲು ಭೂಮಿಕೆ ಸಜ್ಜು ಮಾಡ್ತಿದ್ದಾರೆ. ಸಿದ್ದರಾಮಯ್ಯರನ್ನು ದೆಹಲಿಗೆ ಕಳುಹಿಸಲು ಕಾಂಗ್ರೆಸ್ನಲ್ಲಿ ವೇದಿಕೆ ಸಿದ್ಧವಾಗಿದೆ. ಸಿದ್ದರಾಮಯ್ಯ ಅವರು ಅತಿ ಶೀಘ್ರದಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ. ಸಿಎಂ ಸ್ಥಾನ ಪಲ್ಲಟ ಆಗುತ್ತದೆ. ಇದಕ್ಕಾಗಿ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಓಬಿಸಿ ಸಮಿತಿಗೆ ಅಧ್ಯಕ್ಷರಾಗಿ ಮಾಡಿದ್ದಾರೆ. ಇದರ ಅರ್ಥ ಸಿದ್ದರಾಮಯ್ಯ ದೆಹಲಿಗೆ ಶಿಫ್ಟ್ ಖಚಿತ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?
ಗ್ಯಾರಂಟಿ ಯೋಜನೆ ಬಗ್ಗೆ ರಾಯರೆಡ್ಡಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಯರೆಡ್ಡಿ ಹೇಳಿಕೆಯು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ದುರಹಂಕಾರದಿಂದ ರಾಯರೆಡ್ಡಿ ಮಾತಾಡಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಈಗ ಗ್ಯಾರಂಟಿ ಬೇಕೋ, ರಸ್ತೆ ಬೇಕೋ ಎಂದು ಕೇಳಿದರೆ ಅದರಲ್ಲಿ ಅರ್ಥ ಇದೆಯಾ? ಸಿಎಂ ಸಿದ್ದರಾಮಯ್ಯ ಅವರೇ ರಾಯರೆಡ್ಡಿ ಮೂಲಕ ಇಂತಹ ಮಾತು ಹೇಳಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.