Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರಿದ್ರ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ: ಬಿ.ವೈ.ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದರಿದ್ರ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ: ಬಿ.ವೈ.ವಿಜಯೇಂದ್ರ

Latest

ದರಿದ್ರ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ: ಬಿ.ವೈ.ವಿಜಯೇಂದ್ರ

Public TV
Last updated: September 8, 2025 8:02 pm
Public TV
Share
3 Min Read
Vijayendra
SHARE

ನವದೆಹಲಿ: ಈ ಬಿಜೆಪಿಯವರಿಂದ ರಾಜ್ಯದಲ್ಲಿ ನೆಮ್ಮದಿ ಹಾಳಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ. ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ ಆಗುತ್ತಿದೆ. ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಆಕ್ಷೇಪಿಸಿದ್ದಾರೆ.

ಸಂಸದ ಬಿ.ವೈ. ರಾಘವೇಂದ್ರ ಅವರ ದೆಹಲಿಯ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸಣ್ಣ ಘಟನೆ ಎಂದು ಗೃಹ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಅನಿಸುವುದಾದರೆ, ಲಜ್ಜೆಗೆಟ್ಟ ವರ್ತನೆ ರಾಜ್ಯ ಸರ್ಕಾರದ್ದು ಎಂದು ಖಂಡಿಸಿದರು.

ಮದ್ದೂರಿನಲ್ಲಿ ಇವತ್ತು ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ದೇಶಾದ್ಯಂತ ಗಣೇಶ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಗಣೇಶ ಹಬ್ಬ, ವಿಗ್ರಹ ವಿಸರ್ಜನೆ ವಿಜೃಂಭಣೆಯಿಂದ ನಡೆಯುತ್ತದೆ. ಕರ್ನಾಟಕದಲ್ಲಿ ಯಾಕೆ ಗಲಾಟೆ ಆಗುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಈದ್ ಮಿಲಾದ್ ನಡೆದಾಗ ಎಲ್ಲಾದರೂ ಗಲಾಟೆ ಆಗಿದೆಯೇ ಎಂದು ಕೇಳಿದರು. ಇದನ್ನೂ ಓದಿ: ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

Maddur Stone Pelting

ಕರ್ನಾಟಕದಲ್ಲೂ ಹಿಂದೂಗಳು ಶಾಂತಿಪ್ರಿಯರು. ಎಲ್ಲ ಧರ್ಮ, ಎಲ್ಲ ಸಮುದಾಯಗಳನ್ನು ಪ್ರೀತಿಸುವ ಕೆಲಸವನ್ನು ಹಿಂದೂ ಸಮಾಜ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ನಡೆಸುವ ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ಮದ್ದೂರಿನದ್ದು ಸಣ್ಣಪುಟ್ಟ ಘಟನೆ ಎಂದು ಗೃಹ ಸಚಿವರು ಹೇಳಿದ್ದಾರೆ. ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡಿದ್ದು, ಸಣ್ಣಪುಟ್ಟ ಘಟನೆ ಆಗಲು ಸಾಧ್ಯವೇ ಎಂದು ಕೇಳಿದರು. ನಿಮ್ಮ ಮನೆಯ ಹೆಣ್ಮಕ್ಕಳ ಮೇಲೆ ಕಲ್ಲೆಸೆದರೆ, ಲಾಠಿ ಚಾರ್ಜ್ ಮಾಡಿದರೆ ಯಾವ ಪರಿಸ್ಥಿತಿ ಆಗಲಿದೆ ಎಂದು ಪ್ರಶ್ನಿಸಿದರು.

ಕೇಸರಿ ಕಂಡರೆ ಆಗದ ಮುಖ್ಯಮಂತ್ರಿ
ಸಿದ್ದರಾಮಯ್ಯನವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಕೇಸರಿ ಪೇಟ ತೊಡಿಸಿದರೆ ಕಿತ್ತು ಬಿಸಾಡುತ್ತಾರೆ. ಆದರೆ, ಮೊನ್ನೆ ಈದ್ ಮಿಲಾದ್‍ನಲ್ಲಿ ಇಡೀ ದಿನ ಆ ಟೊಪ್ಪಿ ಹಾಕಿಕೊಂಡು ಆನಂದವಾಗಿ ಕುಳಿತಿದ್ದರು. ಕಾಂಗ್ರೆಸ್ ಸರ್ಕಾರದ ಧೋರಣೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅವರಿಗೆ ಹಿಂದೂಗಳ ಮತ ಸಿಕ್ಕಿಲ್ಲವೇ? ಕಾಂಗ್ರೆಸ್ಸಿನವರಿಗೆ ಹಿಂದೂಗಳ ಬಗ್ಗೆ ಇಷ್ಟೊಂದು ದ್ವೇಷ ಏಕೆ ಎಂದು ಅವರು ಕೇಳಿದರು. ಹಿಂದೂಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಸಡ್ಡೆ ಏಕೆ ಎಂದು ಪ್ರಶ್ನೆಯನ್ನೂ ಮುಂದಿಟ್ಟರು.

ಸರ್ಕಾರದ ಹಿಂದೂ ವಿರೋಧಿ, ಅಲ್ಪಸಂಖ್ಯಾತರ ಪರ ನೀತಿಯಿಂದ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆದಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷದ, ಸರ್ಕಾರದ ಪಾಪದ ಕೊಡ ತುಂಬಿದೆ. ಇದೇ ರೀತಿ ಸರ್ಕಾರ ಮುಂದುವರೆದರೆ ಮುಂದೆ ಬೀದಿಯಲ್ಲಿ ನಡೆದು ಹೋಗಲು ಕಾಂಗ್ರೆಸ್ ಕಾರ್ಯಕರ್ತರಿಗೆ ಕಷ್ಟ ಆಗಲಿದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮದ್ದೂರು ಗಲಭೆಕೋರರನ್ನು ಬಂಧಿಸಲಿ, ಸ್ವಯಂಪ್ರೇರಿತ ಬಂದ್‌ಗೆ ನಮ್ಮ ಬೆಂಬಲ: ಎನ್.ರವಿಕುಮಾರ್

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರವನ್ನು ಗಮನಿಸಿ ಈ ಸರ್ಕಾರ ಕೈಕಟ್ಟಿ ಕೂತಿತ್ತು. ಕೊಪ್ಪಳದಲ್ಲಿ ಈಚೆಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಬ್ಬ ಹಿಂದೂ ಕಾರ್ಯಕರ್ತ ಗವಿಸಿದ್ದಪ್ಪರ ಬರ್ಬರ ಹತ್ಯೆ ನಡೆದಿತ್ತು. ಮಸೀದಿ ಎದುರು ಅವರನ್ನು ಕೊಚ್ಚಿ ಹಾಕಿದ್ದರು. ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯೂ ದೇಶಾದ್ಯಂತ ಚರ್ಚೆಯಾಗಿದೆ ಎಂದು ಗಮನ ಸೆಳೆದರು.

ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ, ಹಿಂದೂಗಳಿಗೆ ಪದೇಪದೇ ಅಪಮಾನ ಆಗುತ್ತಿದೆ. ಹಿಂದೂಗಳು ಗೌರವದಿಂದ ತಲೆ ಎತ್ತಿಕೊಂಡು ಓಡಾಡಲು ಆಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಹಿಂದೂಗಳ ಮೇಲೆ ಕೇಸುಗಳನ್ನು ದಾಖಲಿಸುತ್ತಿದೆ ಎಂದು ಆಕ್ಷೇಪಿಸಿದರು.

ಸಮಾಜಘಾತುಕ ಶಕ್ತಿಗಳ ವಿರುದ್ಧ ದಾಖಲಿಸಿದ್ದ ಮೊಕದ್ದಮೆಗಳನ್ನು ಹಿಂಪಡೆದಿದ್ದಾರೆ. ಮದ್ದೂರಿನಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ ಆಗಿದ್ದು, ಆ ದೇಶದ್ರೋಹಿಗಳು, ಸಮಾಜಘಾತುಕ ಶಕ್ತಿಗಳಿಗೆ ರಾಜ್ಯ ಸರ್ಕಾರದ ಎಲ್ಲ ತೀರ್ಮಾನಗಳಿಂದ ಧೈರ್ಯ ಬಂದಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯನವರೇ ಸಚಿವ ಸಂಪುಟ ಸಭೆಯಲ್ಲಿ ಕೇಸು ಹಿಂಪಡೆಯುತ್ತೀರಾ ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಮತ್ತು ಪ್ರಮುಖರು ಉಪಸ್ಥಿತರಿದ್ದರು.

TAGGED:B.Y vijayendrabjpcongressMaddur Stone Peltingಕಾಂಗ್ರೆಸ್ಬಿ.ವೈ.ವಿಜಯೇಂದ್ರಬಿಜೆಪಿಮದ್ದೂರು ಕಲ್ಲು ತೂರಾಟ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
25 minutes ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
38 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
1 hour ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
1 hour ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
2 hours ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?