ಬೆಂಗಳೂರು: ಕೆಪಿಎಸ್ಸಿ ಲೋಪದೋಷದಿಂದ ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಸಂಬಂಧ ಪರದಾಡುವಂತಾಗಿದೆ. ಇದನ್ನು ಆದಷ್ಟು ಬೇಗ ಪರಿಹರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಒತ್ತಾಯಿಸಿದರು.
ವಿಧಾನಸೌಧದಲ್ಲಿ ಕೆಪಿಎಸ್ಸಿ ಪರೀಕ್ಷೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯನವರು ನೀಡಿದ ಉತ್ತರದ ಸಂಬಂಧ ಅವರು ಮಾತನಾಡಿದರು. ಇವತ್ತು ಪಕ್ಷಾತೀತವಾಗಿ ಎಲ್ಲರೂ ಇದರ ಪರವಾಗಿದ್ದಾರೆ. ಲೋಪದೋಷಗಳು ಆಗಿದ್ದು, ಅದಕ್ಕೆ ಕಾರಣಗಳೇನು ಎಂಬುದನ್ನು ಗಮನಿಸಬೇಕಿದೆ ಎಂದು ನುಡಿದರು. ಇದನ್ನೂ ಓದಿ: ಕಾರ್ತಿಕ್ ಆರ್ಯನ್ ಜೊತೆ ಶ್ರೀಲೀಲಾ ಲವ್ವಿ ಡವ್ವಿ
ಪರೀಕ್ಷೆಗಳಾದರೂ ಫಲಿತಾಂಶ ಬಾರದೆ ಇರುವುದು. ಫಲಿತಾಂಶ ಹೊರಕ್ಕೆ ಬಂದರೂ ಸಂದರ್ಶನ ನಡೆಯದೇ ಇರುವುದು. ಹೀಗೆ ಅನೇಕ ಲೋಪದೋಷಗಳು ಅನೇಕ ವರ್ಷಗಳಿಂದ ನಿರಂತರವಾಗಿ ನಡೆಯುತ್ತಿವೆ ಎಂದು ವಿವರಿಸಿದರು. ಇದನ್ನೂ ಓದಿ: ತಡರಾತ್ರಿ ಮಟನ್ ಸಾರು ಮಾಡಲು ನಿರಾಕರಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ
ಇದು ತಾರ್ಕಿಕ ಅಂತ್ಯಕ್ಕೆ ಹೋಗಲೇಬೇಕಿದೆ. ಮಾನ್ಯ ಮುಖ್ಯಮಂತ್ರಿಗಳೂ ಒಳ್ಳೆಯ ರೀತಿ ಉತ್ತರ ಕೊಟ್ಟಿದ್ದಾರೆ. ವಿಪಕ್ಷ ನಾಯಕರೂ ಸೇರಿ ಎಲ್ಲರೂ ಮಾತನಾಡಿದ್ದಾರೆ. ಇದೊಂದು ತಾರ್ಕಿಕ ಅಂತ್ಯ ಕಾಣಬೇಕಿದೆ ಎಂದರು.
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ವಯೋಮಿತಿಯಲ್ಲಿ ಸಡಿಲಿಕೆ ನೀಡಬೇಕಿದೆ. ಮರುಪರೀಕ್ಷೆಯೂ ನಡೆಯಬೇಕು. ಪದೇಪದೇ ಈ ರೀತಿ ಆಗದ ರೀತಿಯಲ್ಲಿ ಆಗದಂತೆ ಸರಕಾರ ನೋಡಿಕೊಳ್ಳಬೇಕಿದೆ ಎಂದು ಹೇಳಿದರು.