ರಾಜಮೌಳಿ ನಿರ್ದೇಶನದ ‘ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪ (Kattappa) ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿ, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದ ನಟ ಸತ್ಯರಾಜ್ (Sathyaraj) ಅವರ ತಾಯಿ ನಾಥಂಬಳ್ ಕಾಳಿಂಗರಾಯರ್ (Nanthabal) ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.
ನಿನ್ನೆ ಸಂಜೆ 4 ಗಂಟೆಯ ಹೊತ್ತಿಗೆ ನಾಥಂಬಳ್ ಅವರು ಕೊಯಮತ್ತೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ (Passed Away) ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇಂದು ಅವರ ಅಂತ್ಯ ಸಂಸ್ಕಾರ ಕೊಯಮತ್ತೂರಿನಲ್ಲೇ (Coimbatore) ನಡೆಯಲಿದೆ. ನಾಥಂಬಳ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗನಿದ್ದಾನೆ.
ತಾಯಿ ನಿಧನರಾದಾಗ ಸತ್ಯರಾಜ್ ಅವರು ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಶೂಟಿಂಗ್ ನಿಲ್ಲಿಸಿ ತೆರಳಿದ್ದಾರೆ. ಸತ್ಯರಾಜ್ ಅವರ ತಾಯಿಯ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ಸತ್ಯರಾಜ್ ಬಹುಭಾಷಾ ನಟನಾಗಿದ್ದರಿಂದ ನಾನಾ ಚಿತ್ರರಂಗಗಳು ಶೋಕ ವ್ಯಕ್ತ ಪಡಿಸಿವೆ.
Web Stories