ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಗೆ ಬಿಜೆಪಿ ಮತ್ತು ಆರ್ಎಸ್ಎಸ್ ಸಂಚು ಮಾಡಿದೆ. ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮ್ ಅವರು ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹತ್ಯೆಗೆ ಬಿಜೆಪಿ ಮತ್ತು ಆರ್ಎಸ್ಎಸ್ ಸಂಚು ಮಾಡಿದೆ. ಅದರ ಟ್ರಯಲ್ ಗುರುವಾರ ಮಡಿಕೇರಿಯಲ್ಲಿ ನಡೆದಿದೆ. ಗಾಂಧೀಜಿಯ ರೀತಿ ಸಾರ್ವಜನಿಕರ ಮಧ್ಯೆಯೆ ಸಿದ್ದರಾಮಯ್ಯರನ್ನು ಕೊಲ್ಲಲು ಬಿಜೆಪಿ, ಆರ್ಎಸ್ಎಸ್ ಪ್ಲಾನ್ ಮಾಡಿದೆ. ಸಿದ್ದರಾಮಯ್ಯ ಹತ್ಯೆ ಮೂಲಕ ಹಿಂದುಳಿದ ವರ್ಗಗಳ ಮಹಾನ್ ನಾಯಕನ ಯುಗಾಂತ್ಯ ಮಾಡಲು ಬಿಜೆಪಿ ಸಂಚು ಮಾಡಿದೆ. ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊಡಗು ಎಸ್ಪಿಗೆ ಯಾವ ರೋಗ ಬಂದಿತ್ತು: ಸಿದ್ದರಾಮಯ್ಯ ವಾಗ್ದಾಳಿ
ಮತ್ತೊಂದೆಡೆ ಯತೀಂದ್ರ, ಸಾವರ್ಕರ್ ಬಗ್ಗೆ ಮಾತನಾಡಿದ್ದಕ್ಕೆ ನಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಜೀವಬೆದರಿಕೆಯಿದೆ. ಹಿಂದೂ ಸಂಘಟನೆಗಳಿಂದಲೇ ಬೆದರಿಕೆಗಳು ಬಂದಿವೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ತಂದೆಗೆ ಹಿಂದೂ ಸಂಘಟನೆಗಳಿಂದ ಜೀವ ಬೆದರಿಕೆಯಿದೆ: ಯತೀಂದ್ರ ಸಿದ್ದರಾಮಯ್ಯ
ಗುರುವಾರ ಮಡಿಕೇರಿ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಹಿಂದೂ ಸಂಘಟನೆಯವರು ಮೊಟ್ಟೆ ಒಡೆದು ಅಗೌರವ ತೋರಿದ್ದರು. ಈ ಘಟನೆಗೆ ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿ, ಜೆಡಿಎಸ್ ಕೂಡಾ ಅಸಮಾಧಾನ ವ್ಯಕ್ತಪಡಿಸಿತ್ತು.