Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ‘ಬಿಸಿನೆಸ್ ಪಾರ್ಕ್’ ತೆರೆಯಲು ಮೊದಲ ಹೆಜ್ಜೆ ಇಟ್ಟ BACL
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ‘ಬಿಸಿನೆಸ್ ಪಾರ್ಕ್’ ತೆರೆಯಲು ಮೊದಲ ಹೆಜ್ಜೆ ಇಟ್ಟ BACL

Bengaluru City

ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ ‘ಬಿಸಿನೆಸ್ ಪಾರ್ಕ್’ ತೆರೆಯಲು ಮೊದಲ ಹೆಜ್ಜೆ ಇಟ್ಟ BACL

Public TV
Last updated: October 16, 2024 9:08 pm
Public TV
Share
4 Min Read
BACL BUSINESS PARK
SHARE

ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್‌ನ (BACL) ಮಹತ್ವಾಕಾಂಕ್ಷಿ ಯೋಜನೆಯಾದ ‘ಬಿಸಿನೆಸ್ ಪಾರ್ಕ್’ ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲೇ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್ ಬಿಸಿನೆಸ್ ಪಾರ್ಕ್ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್ ಕೊಡುಗೆ ನೀಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದಲ್ಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್&ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

ಈ ಬಿಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್ ಕ್ಷೇತ್ರದಲ್ಲಿ ಶೇ.36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (ಜಿಸಿಸಿಎಸ್) ಬೆಂಗಳೂರು ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹಕೊಡಲಿದೆ. ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್‌ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3ಡಿ ಮುದ್ರಣ ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪ್ರಪ್ರಥಮ ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್ ಆವರಣದಲ್ಲಿರುವ ಹೋಟೆಲ್ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ&ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್ ಆತಿಥ್ಯ ತಾಣವಾಗಿ ಹೊರಹೊಮ್ಮಲಿದೆ.

ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿಯ ಗ್ರೀನ್ ಸಿಟಿಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ ಬೃಹತ್ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು, ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ. ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ ಧ್ಯೇಯದೊಂದಿಗೆ ಹೊಂದಿಸಲಾಗಿದೆ.

ಇನ್ನು ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ. ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. ಬಿಐಎಎಲ್ ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ಕಳೆದ ವರ್ಷ 37.5 ದಶಲಕ್ಷ ಜನರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವು ಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

TAGGED:BACLbengaluruBIALBusiness Parkಬಿಎಸಿಎಲ್ಬಿಐಎಎಲ್ಬಿಸಿನೆಸ್ ಪಾರ್ಕ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
34 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
45 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
1 hour ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?