Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೀದಿ ಬದಿ ವ್ಯಾಪಾರಿಗಳಿಗೆ ಇನ್ಮುಂದೆ ಸಿಗಲಿದೆ ಬಡ್ಡಿಯೇ ಇಲ್ಲದ ದಿನದ ಸಾಲ: ಏನಿದು ಬಡವರ ಬಂಧು ಯೋಜನೆ? ಯಾರು ಅರ್ಹರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೀದಿ ಬದಿ ವ್ಯಾಪಾರಿಗಳಿಗೆ ಇನ್ಮುಂದೆ ಸಿಗಲಿದೆ ಬಡ್ಡಿಯೇ ಇಲ್ಲದ ದಿನದ ಸಾಲ: ಏನಿದು ಬಡವರ ಬಂಧು ಯೋಜನೆ? ಯಾರು ಅರ್ಹರು?

Bengaluru City

ಬೀದಿ ಬದಿ ವ್ಯಾಪಾರಿಗಳಿಗೆ ಇನ್ಮುಂದೆ ಸಿಗಲಿದೆ ಬಡ್ಡಿಯೇ ಇಲ್ಲದ ದಿನದ ಸಾಲ: ಏನಿದು ಬಡವರ ಬಂಧು ಯೋಜನೆ? ಯಾರು ಅರ್ಹರು?

Public TV
Last updated: November 5, 2018 9:01 pm
Public TV
Share
3 Min Read
badavara bandhu scheme copy
SHARE

ಬೆಂಗಳೂರು: ಮೀಟರ್ ಬಡ್ಡಿ ದಂಧೆಗೆ ಶಾಶ್ವತ ಪರಿಹಾರ ನೀಡುವ ಕ್ರಮಕ್ಕೆ ಮುಂದಾಗಿರುವ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ, ಬಡ್ಡಿ, ಸಾಲದ ಶೂಲಕ್ಕೆ ಸಿಲುಕಿರುವ ಜನರ ನೆರವಿಗೆ ಬರಲು `ಬಡವರ ಬಂಧು’ ಯೋಜನೆ ಶೀಘ್ರವೇ ಜಾರಿ ಮಾಡಲು ಸಿದ್ಧತೆ ನಡೆಸಿದೆ.

ಸರ್ಕಾರದ ಈ ಯೋಜನೆ ಇಂದ ಬೀದಿ ಬದಿ ವ್ಯಾಪಾರಿಗಳಿಗೆ ಇನ್ನು ಮುಂದೆ ಬಡ್ಡಿಯೇ ಇಲ್ಲದ ದಿನದ ಸಾಲ ಲಭ್ಯವಾಗಲಿದೆ. ಬಡವರ ಬಂಧು ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 53 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

badavara bandhu scheme from karnataka government 1

ಎಲ್ಲಿ, ಎಷ್ಟು ಮಂದಿಗೆ ಸಾಲ?
ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯ 10 ಮಹಾನಗರ ಪಾಲಿಕೆಗಳು ಹಾಗೂ ಜಿಲ್ಲಾ ಕೇಂದ್ರದ ಪ್ರಮುಖ ನಗರಗಳಲ್ಲಿ ಸಾಲ ಸೌಲಭ್ಯ ಸಿಗಲಿದೆ. ಪ್ರಮುಖವಾಗಿ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ 5 ಸಾವಿರ ರೂ., 10 ಮಹಾನಗರ ಪಾಲಿಕೆಗಳಲ್ಲಿ 3 ಸಾವಿರ ರೂ., ಜಿಲ್ಲಾ ನಗರ ಪ್ರದೇಶ 1 ಸಾವಿರ ರೂ. ಸಾಲ ಸೌಲಭ್ಯ ಲಭ್ಯವಾಗಲಿದೆ.

ರಾಜ್ಯ ಪ್ರಮುಖ ಮಹಾನಗರ ಪಾಲಿಕೆಗಳಾದ ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ನಗರಗಳಲ್ಲಿ 3 ಸಾವಿರ ರೂ. ಸಾಲ ಸೌಲಭ್ಯವಾಗಲಿದೆ. ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದೊಡ್ಡಬಳ್ಳಾಪುರ, ಹಾಸನ, ಹಾವೇರಿ, ಕಾರವಾರ, ಕೋಲಾರ, ಕೊಪ್ಪಳ, ಮಡಿಕೇರಿ, ಮಂಡ್ಯ, ರಾಯಚೂರು, ರಾಮನಗರ, ಉಡುಪಿ, ಯಾದಗಿರಿ ಜಿಲ್ಲಾ ಕೇಂದ್ರಗಳ ನಗರಗಳಲ್ಲಿ 1 ಸಾವಿರ ರೂ. ಸಾಲ ಸೌಲಭ್ಯ ಪಡೆಯಬಹುದಾಗಿದೆ.

badavara bandhu scheme from karnataka government 2

ಯಾರಿಗೆ ಅನ್ವಯ.?
ತಳ್ಳುಬಂಡಿ ಹಾಗೂ ಮೋಟಾರು ವಾಹನಗಳಲ್ಲಿ ಪಾನೀಯ, ತಿಂಡಿ, ಊಟ ಮಾರಾಟ ಮಾಡುವವರು, ಮನೆ ಮನೆಗೆ ತೆರಳಿ ಹೂವು, ಹಣ್ಣ, ತರಕಾರಿ ವಿತರಿಸುವವರು ಹಾಗೂ ಬುಟ್ಟಿಯಲ್ಲಿ ವಸ್ತುಗಳನ್ನು ಮಾರಾಟ ಮಾಡುವವರು, ಪಾದರಕ್ಷೆ, ಚರ್ಮ ಉತ್ಪನ್ನ ರಿಪೇರಿ ಮತ್ತು ಮಾರಾಟ ಮಾಡುವವರು, ಆಟದ ಸಾಮಾನು, ಗೃಹೋಪಯೋಗಿ ವಸ್ತು ಮಾರಾಟ ಮಾಡುವವರು ಈ ಯೋಜನೆ ವ್ಯಾಪ್ತಿಯಲ್ಲಿ ಬರುತ್ತಾರೆ.

badavara bandhu scheme from karnataka government 3

ಯಾರಿಗೆ ಅನ್ವಯಿಸಲ್ಲ?
ದುಡಿಯುವ ಕೈಗಳಿಗೆ ಹಣ ನೀಡುವುದು ಮಾತ್ರವಲ್ಲದೇ ಯೋಜನೆಯಲ್ಲಿ ಕೆಲ ನಿಯಮಗಳನ್ನ ಅಳವಡಿಸಿದ್ದು, ರಸ್ತೆ ಬದಿ ಸ್ವಚ್ಛತೆ ಹಾಳು ಮಾಡುವವರಿಗೆ ಹಾಗೂ ಪರಿಸರಕ್ಕೆ ಹಾನಿಯುಂಟು ಮಾಡುವ ವಸ್ತುಗಳನ್ನು ಮಾರಾಟ ಮಾಡುವವರಿಗೆ ಯೋಜನೆ ಅನ್ವಯಿಸುವುದಿಲ್ಲ ಎಂಬ ನಿಯಮ ರೂಪಿಸಲಾಗಿದೆ.

ಸಾಲ ವಿತರಣೆ ಹೇಗೆ?
ಮಹತ್ವದ ಯೋಜನೆಯನ್ನು ಜಾರಿ ಮಾಡಲು ಈಗಾಗಲೇ ಸಿದ್ಧತೆಯನ್ನು ನಡೆಸಿರುವ ಸರ್ಕಾರ ಸಾಲ ವಿತರಣೆಯನ್ನು ಸಹಕಾರಿ ಬ್ಯಾಂಕ್ ಗಳ ಮೂಲಕ ಮಾಡಲು ನಿರ್ಧರಿಸಿದೆ. ಪ್ರಮುಖವಾಗಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕುಗಳು, ಮಹಿಳಾ ಸಹಕಾರಿ ಬ್ಯಾಂಕುಗಳು, ಪಟ್ಟಣ ಸಹಕಾರ ಬ್ಯಾಂಕು ಇದರಲ್ಲಿ ಸೇರಿದೆ.

badavara bandhu scheme from karnataka government 4

ಸರ್ಕಾರದ ನೀಡುವ ಹಣಕ್ಕೆ ಸಮಯ ಮೀತಿಯಲ್ಲಿ ಬಡ್ಡಿಯನ್ನು ವಿಧಿಸಲು ತೀರ್ಮಾನ ಮಾಡಲಾಗಿದ್ದು, 2 ಸಾವಿರದಿಂದ 10 ಸಾವಿರ ಸಾಲ ಪಡೆದರೆ 3 ತಿಂಗಳ ಅವಧಿಗೆ ಶೇ.4ರಷ್ಟು ಬಡ್ಡಿ ವಿಧಿಸಲಿದೆ. ಸಾಲ ವಿತರಣೆ ಪ್ರತ್ಯೇಕ 8 ರೂಪೇ ಕಾರ್ಡ್ ನೀಡಲಿದೆ. ಯೋಜನೆ ಲಾಭ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯ ಮಾಡಿದ್ದು, ಗುರುತಿನಚೀಟಿ ಇಲ್ಲದವರಿಗೆ ಸಾಲ ವಿತರಿಸಲು ಅವಕಾಶ ನೀಡಿಲ್ಲ.

ಫಲಾನುಭವಿಗಳ ಶೂನ್ಯ ಬಾಲೆನ್ಸ್ ಉಳಿತಾಯ ಖಾತೆ ತೆರೆದು, ಸಾಲ ಅರ್ಜಿಗಳನ್ನು ಸ್ವೀಕಾರ ಮಾಡಲಿದೆ. ಯೋಜನೆ ಅಡಿ ಸಾಲ ಪಡೆದು ಸಮರ್ಪಕವಾಗಿ ಮರುಪಾವತಿಸಿದರೆ, ಸಾಲ ನವೀಕರಿಸಲು ಮತ್ತು ಶೇ.10ರಷ್ಟು ಮಿತಿ ಅಂದರೆ 15 ಸಾವಿರ ರೂ.ಗೆ ಹೆಚ್ಚಿಸಲು ಅವಕಾಶ ನೀಡಲಾಗಿದೆ. ಅಲ್ಲದೇ ಸಾಲ ಸೌಲಭ್ಯ ಹೆಚ್ಚು ಮಂದಿಗೆ ಲಭ್ಯವಾಗುವಂತೆ ಮಾಡಲು ಬೀದಿಬದಿ ವ್ಯಾಪಾರಿಗಳು ಹೆಚ್ಚು ಇರುವ ಮಾರುಕಟ್ಟೆ ಪ್ರದೇಶದಲ್ಲಿ ಮೊಬೈಲ್ ಘಟಕ ಸ್ಥಾಪನೆ ಮಾಡಲು ನಿರ್ಧಾರಿಸಿದೆ. ಉಳಿದಂತೆ ಜಿಲ್ಲಾಮಟ್ಟದ ಸಮಿತಿ ಸಭೆ ಸೇರಿ ನಗರ ಪ್ರದೇಶಕ್ಕೆ ಒಂದು ಬ್ಯಾಂಕ್ ರಚನೆ ಹಾಗೂ ಈ ಬ್ಯಾಂಕ್‍ನವರಿಗೆ ಬೀದಿಬದಿ ವ್ಯಾಪಾರಿಗಳ ಪಟ್ಟಿ ಸಿದ್ಧಪಡಿಸುವ ಹೊಣೆ ನೀಡಲಾಗುತ್ತದೆ. ಸಾಲ ವಾಪಸ್ ಸಂಗ್ರಹಿಸಲು ಪಿಗ್ಮಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯನ್ನು ಮಾಡಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

vlcsnap 2018 11 05 20h50m52s255

TAGGED:badavara bandhu schemebengaluruCM KumaraswamydebtinterestPublic TVState Governmentಪಬ್ಲಿಕ್ ಟಿವಿಬಡವರ ಬಂಧುಬಡ್ಡಿಬೆಂಗಳೂರುರಾಜ್ಯ ಸರ್ಕಾರಸಾಲಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood
Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories
Daali Dhananjaya 1
ನನ್ನ ಆಹಾರ ನನ್ನ ಚಾಯ್ಸ್, ಸಮುದಾಯ ಎಳೆದು ತಂದಿದ್ದು ಬಹಳ ಬೇಜಾರಾಯ್ತು: ಡಾಲಿ ಧನಂಜಯ್
Bengaluru City Cinema Districts Karnataka Latest Main Post Sandalwood

You Might Also Like

Zameers comment on Kumaraswamy wrong says Priyank Kharge
Bengaluru City

ಕೇಂದ್ರದ ಮಾತು ಕೇಳದ ಉದ್ಯಮಿಗಳಿಗೆ ಇಡಿ, ಐಟಿ ಬಳಸಿಕೊಂಡು ಕಿರುಕುಳ: ಪ್ರಿಯಾಂಕ್ ಖರ್ಗೆ ಕಿಡಿ

Public TV
By Public TV
10 minutes ago
M.P Renukacharya
Davanagere

ತನ್ನ ಪಾಲಿನ ಹಣ ಕೊಡೋಕಾಗದೆ ವಿಬಿ-ಜಿ ರಾಮ್-ಜಿ ವಿರುದ್ಧ ಕಾಂಗ್ರೆಸ್‌ ಅಪಪ್ರಚಾರ: ರೇಣುಕಾಚಾರ್ಯ

Public TV
By Public TV
24 minutes ago
Kanakapura Kanakotsava DK Shivakumar 1
Districts

ಕನಕೋತ್ಸವದ ಹೆಸರಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ್ರಾ ಡಿಕೆಶಿ?

Public TV
By Public TV
40 minutes ago
Shehbaz Sharif
Latest

ನಾವು ಬೇರೆ ದೇಶಗಳಿಂದ ಭಿಕ್ಷೆ ಬೇಡುತ್ತೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ: ಪಾಕ್ ಪ್ರಧಾನಿ ನೋವಿನ ಮಾತು

Public TV
By Public TV
59 minutes ago
Eshwara Khandre 1
Bidar

ಹುಮ್ನಾಬಾದ್ ಸ್ಫೋಟ ಪ್ರಕರಣ – ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
2 hours ago
CJ Roy 5
Bengaluru City

ಎದೆಯ ಮೇಲೆ ಗನ್‌ ಇಟ್ಟು ಟ್ರಿಗರ್ ಪಾಯಿಂಟ್ ಒತ್ತಿ ರಾಯ್ ಆತ್ಮಹತ್ಯೆ – ಮರಣೋತ್ತರ ಪರೀಕ್ಷೆಯಲ್ಲಿ ದೃಢ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?