Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೀದಿ ಬದಿ ವ್ಯಾಪಾರಿಗಳಿಗೆ ಇನ್ಮುಂದೆ ಸಿಗಲಿದೆ ಬಡ್ಡಿಯೇ ಇಲ್ಲದ ದಿನದ ಸಾಲ: ಏನಿದು ಬಡವರ ಬಂಧು ಯೋಜನೆ? ಯಾರು ಅರ್ಹರು?

Public TV
Last updated: November 5, 2018 9:01 pm
Public TV
Share
3 Min Read
badavara bandhu scheme copy
SHARE

ಬೆಂಗಳೂರು: ಮೀಟರ್ ಬಡ್ಡಿ ದಂಧೆಗೆ ಶಾಶ್ವತ ಪರಿಹಾರ ನೀಡುವ ಕ್ರಮಕ್ಕೆ ಮುಂದಾಗಿರುವ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ, ಬಡ್ಡಿ, ಸಾಲದ ಶೂಲಕ್ಕೆ ಸಿಲುಕಿರುವ ಜನರ ನೆರವಿಗೆ ಬರಲು `ಬಡವರ ಬಂಧು’ ಯೋಜನೆ ಶೀಘ್ರವೇ ಜಾರಿ ಮಾಡಲು ಸಿದ್ಧತೆ ನಡೆಸಿದೆ.

ಸರ್ಕಾರದ ಈ ಯೋಜನೆ ಇಂದ ಬೀದಿ ಬದಿ ವ್ಯಾಪಾರಿಗಳಿಗೆ ಇನ್ನು ಮುಂದೆ ಬಡ್ಡಿಯೇ ಇಲ್ಲದ ದಿನದ ಸಾಲ ಲಭ್ಯವಾಗಲಿದೆ. ಬಡವರ ಬಂಧು ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 53 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

badavara bandhu scheme from karnataka government 1

ಎಲ್ಲಿ, ಎಷ್ಟು ಮಂದಿಗೆ ಸಾಲ?
ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯ 10 ಮಹಾನಗರ ಪಾಲಿಕೆಗಳು ಹಾಗೂ ಜಿಲ್ಲಾ ಕೇಂದ್ರದ ಪ್ರಮುಖ ನಗರಗಳಲ್ಲಿ ಸಾಲ ಸೌಲಭ್ಯ ಸಿಗಲಿದೆ. ಪ್ರಮುಖವಾಗಿ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ 5 ಸಾವಿರ ರೂ., 10 ಮಹಾನಗರ ಪಾಲಿಕೆಗಳಲ್ಲಿ 3 ಸಾವಿರ ರೂ., ಜಿಲ್ಲಾ ನಗರ ಪ್ರದೇಶ 1 ಸಾವಿರ ರೂ. ಸಾಲ ಸೌಲಭ್ಯ ಲಭ್ಯವಾಗಲಿದೆ.

ರಾಜ್ಯ ಪ್ರಮುಖ ಮಹಾನಗರ ಪಾಲಿಕೆಗಳಾದ ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ನಗರಗಳಲ್ಲಿ 3 ಸಾವಿರ ರೂ. ಸಾಲ ಸೌಲಭ್ಯವಾಗಲಿದೆ. ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದೊಡ್ಡಬಳ್ಳಾಪುರ, ಹಾಸನ, ಹಾವೇರಿ, ಕಾರವಾರ, ಕೋಲಾರ, ಕೊಪ್ಪಳ, ಮಡಿಕೇರಿ, ಮಂಡ್ಯ, ರಾಯಚೂರು, ರಾಮನಗರ, ಉಡುಪಿ, ಯಾದಗಿರಿ ಜಿಲ್ಲಾ ಕೇಂದ್ರಗಳ ನಗರಗಳಲ್ಲಿ 1 ಸಾವಿರ ರೂ. ಸಾಲ ಸೌಲಭ್ಯ ಪಡೆಯಬಹುದಾಗಿದೆ.

badavara bandhu scheme from karnataka government 2

ಯಾರಿಗೆ ಅನ್ವಯ.?
ತಳ್ಳುಬಂಡಿ ಹಾಗೂ ಮೋಟಾರು ವಾಹನಗಳಲ್ಲಿ ಪಾನೀಯ, ತಿಂಡಿ, ಊಟ ಮಾರಾಟ ಮಾಡುವವರು, ಮನೆ ಮನೆಗೆ ತೆರಳಿ ಹೂವು, ಹಣ್ಣ, ತರಕಾರಿ ವಿತರಿಸುವವರು ಹಾಗೂ ಬುಟ್ಟಿಯಲ್ಲಿ ವಸ್ತುಗಳನ್ನು ಮಾರಾಟ ಮಾಡುವವರು, ಪಾದರಕ್ಷೆ, ಚರ್ಮ ಉತ್ಪನ್ನ ರಿಪೇರಿ ಮತ್ತು ಮಾರಾಟ ಮಾಡುವವರು, ಆಟದ ಸಾಮಾನು, ಗೃಹೋಪಯೋಗಿ ವಸ್ತು ಮಾರಾಟ ಮಾಡುವವರು ಈ ಯೋಜನೆ ವ್ಯಾಪ್ತಿಯಲ್ಲಿ ಬರುತ್ತಾರೆ.

badavara bandhu scheme from karnataka government 3

ಯಾರಿಗೆ ಅನ್ವಯಿಸಲ್ಲ?
ದುಡಿಯುವ ಕೈಗಳಿಗೆ ಹಣ ನೀಡುವುದು ಮಾತ್ರವಲ್ಲದೇ ಯೋಜನೆಯಲ್ಲಿ ಕೆಲ ನಿಯಮಗಳನ್ನ ಅಳವಡಿಸಿದ್ದು, ರಸ್ತೆ ಬದಿ ಸ್ವಚ್ಛತೆ ಹಾಳು ಮಾಡುವವರಿಗೆ ಹಾಗೂ ಪರಿಸರಕ್ಕೆ ಹಾನಿಯುಂಟು ಮಾಡುವ ವಸ್ತುಗಳನ್ನು ಮಾರಾಟ ಮಾಡುವವರಿಗೆ ಯೋಜನೆ ಅನ್ವಯಿಸುವುದಿಲ್ಲ ಎಂಬ ನಿಯಮ ರೂಪಿಸಲಾಗಿದೆ.

ಸಾಲ ವಿತರಣೆ ಹೇಗೆ?
ಮಹತ್ವದ ಯೋಜನೆಯನ್ನು ಜಾರಿ ಮಾಡಲು ಈಗಾಗಲೇ ಸಿದ್ಧತೆಯನ್ನು ನಡೆಸಿರುವ ಸರ್ಕಾರ ಸಾಲ ವಿತರಣೆಯನ್ನು ಸಹಕಾರಿ ಬ್ಯಾಂಕ್ ಗಳ ಮೂಲಕ ಮಾಡಲು ನಿರ್ಧರಿಸಿದೆ. ಪ್ರಮುಖವಾಗಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕುಗಳು, ಮಹಿಳಾ ಸಹಕಾರಿ ಬ್ಯಾಂಕುಗಳು, ಪಟ್ಟಣ ಸಹಕಾರ ಬ್ಯಾಂಕು ಇದರಲ್ಲಿ ಸೇರಿದೆ.

badavara bandhu scheme from karnataka government 4

ಸರ್ಕಾರದ ನೀಡುವ ಹಣಕ್ಕೆ ಸಮಯ ಮೀತಿಯಲ್ಲಿ ಬಡ್ಡಿಯನ್ನು ವಿಧಿಸಲು ತೀರ್ಮಾನ ಮಾಡಲಾಗಿದ್ದು, 2 ಸಾವಿರದಿಂದ 10 ಸಾವಿರ ಸಾಲ ಪಡೆದರೆ 3 ತಿಂಗಳ ಅವಧಿಗೆ ಶೇ.4ರಷ್ಟು ಬಡ್ಡಿ ವಿಧಿಸಲಿದೆ. ಸಾಲ ವಿತರಣೆ ಪ್ರತ್ಯೇಕ 8 ರೂಪೇ ಕಾರ್ಡ್ ನೀಡಲಿದೆ. ಯೋಜನೆ ಲಾಭ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯ ಮಾಡಿದ್ದು, ಗುರುತಿನಚೀಟಿ ಇಲ್ಲದವರಿಗೆ ಸಾಲ ವಿತರಿಸಲು ಅವಕಾಶ ನೀಡಿಲ್ಲ.

ಫಲಾನುಭವಿಗಳ ಶೂನ್ಯ ಬಾಲೆನ್ಸ್ ಉಳಿತಾಯ ಖಾತೆ ತೆರೆದು, ಸಾಲ ಅರ್ಜಿಗಳನ್ನು ಸ್ವೀಕಾರ ಮಾಡಲಿದೆ. ಯೋಜನೆ ಅಡಿ ಸಾಲ ಪಡೆದು ಸಮರ್ಪಕವಾಗಿ ಮರುಪಾವತಿಸಿದರೆ, ಸಾಲ ನವೀಕರಿಸಲು ಮತ್ತು ಶೇ.10ರಷ್ಟು ಮಿತಿ ಅಂದರೆ 15 ಸಾವಿರ ರೂ.ಗೆ ಹೆಚ್ಚಿಸಲು ಅವಕಾಶ ನೀಡಲಾಗಿದೆ. ಅಲ್ಲದೇ ಸಾಲ ಸೌಲಭ್ಯ ಹೆಚ್ಚು ಮಂದಿಗೆ ಲಭ್ಯವಾಗುವಂತೆ ಮಾಡಲು ಬೀದಿಬದಿ ವ್ಯಾಪಾರಿಗಳು ಹೆಚ್ಚು ಇರುವ ಮಾರುಕಟ್ಟೆ ಪ್ರದೇಶದಲ್ಲಿ ಮೊಬೈಲ್ ಘಟಕ ಸ್ಥಾಪನೆ ಮಾಡಲು ನಿರ್ಧಾರಿಸಿದೆ. ಉಳಿದಂತೆ ಜಿಲ್ಲಾಮಟ್ಟದ ಸಮಿತಿ ಸಭೆ ಸೇರಿ ನಗರ ಪ್ರದೇಶಕ್ಕೆ ಒಂದು ಬ್ಯಾಂಕ್ ರಚನೆ ಹಾಗೂ ಈ ಬ್ಯಾಂಕ್‍ನವರಿಗೆ ಬೀದಿಬದಿ ವ್ಯಾಪಾರಿಗಳ ಪಟ್ಟಿ ಸಿದ್ಧಪಡಿಸುವ ಹೊಣೆ ನೀಡಲಾಗುತ್ತದೆ. ಸಾಲ ವಾಪಸ್ ಸಂಗ್ರಹಿಸಲು ಪಿಗ್ಮಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯನ್ನು ಮಾಡಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

vlcsnap 2018 11 05 20h50m52s255

TAGGED:badavara bandhu schemebengaluruCM KumaraswamydebtinterestPublic TVState Governmentಪಬ್ಲಿಕ್ ಟಿವಿಬಡವರ ಬಂಧುಬಡ್ಡಿಬೆಂಗಳೂರುರಾಜ್ಯ ಸರ್ಕಾರಸಾಲಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

GOLD SURESH
Bengaluru City

6 ಲಕ್ಷ ಹಣ ನೀಡುವಂತೆ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್‌ಗೆ ಬೆದರಿಕೆ – ಎನ್‌ಸಿಆರ್ ದಾಖಲು

Public TV
By Public TV
6 hours ago
mid day meals
Bengaluru City

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

Public TV
By Public TV
6 hours ago
Gopi Chandh Padalkar
Latest

ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ – ಮಹಾರಾಷ್ಟ್ರ ಬಿಜೆಪಿ ಶಾಸಕನ ಪ್ರಚೋದನಕಾರಿ ಹೇಳಿಕೆ

Public TV
By Public TV
7 hours ago
Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
8 hours ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
8 hours ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?