ಬಾಗಲಕೋಟೆ: ಎದುರಿಗೆ ಬರುತ್ತಿದ್ದ ಲಾರಿ ತಪ್ಪಿಸಲು ಹೋಗಿ ಸಾರಿಗೆ ಬಸ್ಸೊಂದು ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗಾ ಕ್ರಾಸ್ ಬಳಿಯ ಹುಬ್ಬಳ್ಳಿ-ವಿಜಯಪುರ ರಸ್ತೆಯಲ್ಲಿ ನಡೆದಿದೆ.
ಬಸ್ ಹುಬ್ಬಳ್ಳಿಯಿಂದ ವಿಜಯಪುರದ ಕಡೆಗೆ ಹೊರಟಿತ್ತು. ಈ ವೇಳೆ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಪಕ್ಕದ ಹೊಲಕ್ಕೆ ನುಗ್ಗಿಸಿದ ಪರಿಣಾಮ ಬಾರಿ ಅನಾಹುತ ತಪ್ಪಿದಂತಾಗಿದೆ.
ಇನ್ನು ಹೊಲಕ್ಕೆ ನುಗ್ಗುವ ಮುಂಚೆ ಬೈಕ್ ವೊಂದಕ್ಕೆ ಬಸ್ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಬೀಳಗಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.