ಗುಂಪು ಘರ್ಷಣೆಗೆ ಕಾರಣವಾದ ಯುವಕರಿಬ್ಬರ ಜಗಳ – ಪೊಲೀಸರಿಂದ ಲಘುಲಾಠಿ ಪ್ರಹಾರ

Public TV
1 Min Read
bgk galate

ಬಾಗಲಕೋಟೆ: ಯುವಕರಿಬ್ಬರ ಮಧ್ಯೆ ನಡೆದ ಜಗಳ ಗುಂಪು ಘರ್ಷಣೆಗೆ ಕಾರಣವಾಗಿ ಪೊಲೀಸರು ಲಘುಲಾಠಿ ಪ್ರಹಾರ ಮಾಡಿದ್ದಾರೆ.

ಬಾದಾಮಿ ಪಟ್ಟಣದಲ್ಲಿ ಈ ಘಟನೆ ಜರುಗಿದ್ದು, ಬೈಕ್ ಸೈಡ್ ತೆಗೆದುಕೊಳ್ಳುವ ವಿಚಾರಕ್ಕೆ ಇಬ್ಬರು ಯುವಕರ ಮಧ್ಯೆಗಿನ ಜಗಳ ಗುಂಪು ಘರ್ಷಣೆಗೆ ಕಾರಣವಾಗಿದೆ. ಬಾದಾಮಿ ಪಟ್ಟಣದಲ್ಲಿ ಯುವಕರಿಬ್ಬರು ಬೈಕ್ ಸೈಡ್ ತಗೆದುಕೊಳ್ಳುವ ವಿಚಾರವಾಗಿ ಪ್ರತಿಷ್ಟೆಗೆ ಬಿದ್ದಿದ್ದಾರೆ, ನಂತರ ಜಗಳ ಮಾಡಿಕೊಂಡಿದ್ದಾರೆ.

bgk galate 2

ಇದೇ ವಿಚಾರ ಅವರಿಬ್ಬರ ಏರಿಯಾಗಳ ಜನರ ನಡುವೆ ಘರ್ಷಣೆಗೆ ಕಾರಣವಾಗಿದೆ. ಬಾದಾಮಿ ಪಟ್ಟಣದ ತಟಕೋಟಿಗಲ್ಲಿ ಹಾಗೂ ಕಿಲ್ಲಾ ಗಲ್ಲಿಯ ಜನರೇ ಆ ಯುವಕರಿಂದಾಗಿ ಗುಂಪು ಘರ್ಷಣೆ ಮಾಡಿದ್ದಾರೆ. ಸುದ್ದಿ ತಿಳಿದ ಬಾದಾಮಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪು ಚದುರಿಸಲು ಲಘುಲಾಠಿ ಪ್ರಹಾರ ಸಹ ನಡೆಸಿದ್ದಾರೆ. ಸದ್ಯ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಇದ್ದು ಪೊಲೀಸರು ಅಲ್ಲೇ ಬೀಡು ಬಿಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *