Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ

Cinema

ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ

Public TV
Last updated: September 27, 2021 11:39 am
Public TV
Share
2 Min Read
Bahukrita Vesham
SHARE

ಬೆಂಗಳೂರು: ಕಿರುತೆರೆಯ ನಟ-ನಟಿಯರು ಚಂದನವನದತ್ತ ಮುಖ ಮಾಡೋದು ಕಾಮನ್. ಆದರೆ ಇತ್ತೀಚಿನ ದಿನಗಳಲ್ಲಿ ಇದರ ಸಂಖ್ಯೆ ಬಹುಪಾಲು ಹೆಚ್ಚಾಗಿದೆ. ಕಿರುತೆರೆಯಲ್ಲಿ ಜನರ ಮನೆ ಮನಸ್ಸುಗಳಲ್ಲಿ ಬೇರೂರುವ ಮೂಲಕ ಬೆಳ್ಳಿ ಪರೆದೆ ಮೇಲೆ ಪ್ರಯೋಗಕ್ಕೆ ಮುಂದಾಗಿಗುತ್ತಿದ್ದಾರೆ. ಆ ಸಾಲಿಗೆ ಮತ್ತೊಬ್ಬ ನಟ ಸೇಪರ್ಡೆಯಾಗಿದ್ದಾರೆ. ಅವರೇ ಕುಲವಧು ಧಾರಾವಾಹಿ ಖ್ಯಾತಿಯ ಖಳನಟ ಶಶಿಕಾಂತ್.

Bahukrita Vesham 1

‘ಬಹುಕೃತ ವೇಷಂ’ ಸಿನಿಮಾ ಮೂಲಕ ನಾಯಕ ನಟನಾಗಿ ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆಯ ಖಡಕ್ ಖಳನಟ ಶಶಿಕಾಂತ್. ಖಾಸಗಿ ವಾಹಿನಿಯ ಕುಲವಧು ಧಾರಾವಾಹಿಯಲ್ಲಿ ವಿಲನ್ ರೋಲ್ ನಲ್ಲಿ ಜನಮನ್ನಣೆ ಪಡೆದ ಶಶಿಕಾಂತ್ ನಾಯಕನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಹಾಗಂತ ಇದೇನು ಇವರ ಮೊದಲ ಸಿನಿಮಾವಲ್ಲ. ಇದಕ್ಕೂ ಮುನ್ನ ರಣರಣಕ, ಗೌಡ್ರು ಸೈಕಲ್ ಸಿನಿಮಾಗಳಲ್ಲಿ ನಟನಾಗಿ ಭರವಸೆ ಮೂಡಿಸಿದ್ದಾರೆ. ಇದೀಗ ‘ಬಹುಕೃತ ವೇಷಂ’ ಸಿನಿಮಾ ಮೂಲಕ ಮತ್ತೊಮ್ಮೆ ಸೌಂಡ್ ಮಾಡಲು ಸಜ್ಜಾಗಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಲುಕ್, ಟೀಸರ್ ಹಾಗೂ ಒಂದು ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿ ಗಮನ ಸೆಳೆಯುತ್ತಿದೆ. ಬಿಡುಗಡೆಯ ಅಂಚಿನಲ್ಲಿರುವ ಈ ಚಿತ್ರ ಸೆನ್ಸಾರ್ ಅಂಗಳದಲ್ಲಿದೆ.

Bahukrita Vesham 4

ಎಲ್ಲರೂ ಜೀವನದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಮುಖವಾಡ ಹಾಕುತ್ತಾರೆ. ಹಾಗೆಯೇ ಪ್ರೀತಿಯನ್ನು ಪಡೆಯಲು ಮುಖವಾಡ ಹಾಕಬೇಕಾಗುತ್ತೆ. ಇದನ್ನೇ ಚಿತ್ರದ ಎಳೆಯಾಗಿಟ್ಟುಕೊಂಡು ಚೆಂದದ ಪ್ರೇಮ್ ಕಹಾನಿ ಹೆಣೆದಿದ್ದಾರೆ ಅಧ್ಯಾಯ್ ತೇಜ್. ಚಿತ್ರಕಥೆ ಕೂಡ ಇವರದ್ದೇ. ಕ್ಯೂಟ್ ಲವ್ ಸ್ಟೋರಿ ಜೊತೆಗೆ ಸೈಕಲಾಜಿಕಲ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರಕ್ಕೆ ಪ್ರಶಾಂತ್ ಯಲ್ಲಂಪಳ್ಳಿ ಆಕ್ಷನ್ ಕಟ್ ಹೇಳಿದ್ದಾರೆ. ನಾಯಕ ನಟಿಯಾಗಿ ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ನಟಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ಸ್ಥಳ ಹುಡುಕುತ್ತ ಜೈಪುರಗೆ ಬಂದ್ರು ಲವ್ ಬರ್ಡ್ಸ್

Bahukrita Vesham 5

ಕಿರುತೆರೆಯಿಂದ ಹಿರಿತೆರೆಗೆ ಕಾಲಿಟ್ಟಿರುವ ಶಶಿಕಾಂತ್ ಬೆಳ್ಳಿಪರದೆ ಮೇಲೆ ತಮ್ಮದೇ ಛಾಪನ್ನು ಒತ್ತಬೇಕೆಂಬ ಮಹದಾಸೆಯನ್ನು ಹೊಂದಿದ್ದಾರೆ. ಹಾಗಂತ ಇಲ್ಲಿವರೆಗೆ ನಡೆದುಬಂದ ಸುಲಭದಲ್ಲ. ಮೂಲತಃ ಮಂಡ್ಯದವರಾದ ಶಶಿಕಾಂತ್ ರೈತ ಕುಟುಂಬದವರು. ಬಿಎಸ್ಸಿ ಓದಿಕೊಂಡಿರುವ ಶಶಿಕಾಂತ್ ಗೆ ಕಾಲೇಜು ದಿನಗಳಿಂದ ರಂಗಭೂಮಿ ನಂಟು. ಆಗಲೇ ನಟನಾಗಬೇಕು ಎಂದು ಕನಸು ಕಂಡವರು. ಬಿಎಸ್‍ಸಿ ಮುಗಿಯುತ್ತಿದ್ದಂತೆ ಉದ್ಯೋಗ ಅರಸಿ ಬಂದ ಶಶಿಕಾಂತ್ ಪ್ರೊಫೇಶನ್ ಬಿಟ್ಟು ಆಯ್ಕೆ ಮಾಡಿಕೊಂಡಿದ್ದು ಫ್ಯಾಶನ್. ಬೆಂಗಳೂರಿಗೆ ಬಂದವರೇ ಸೀದಾ ರಂಗಭೂಮಿ ತಂಡ ಸೇರಿ ನಟನೆಗೆ ಬೇಕಾದ ಕಸರತ್ತುಗಳನ್ನು ಕಲಿತುಕೊಂಡ್ರು. ಬಣ್ಣದ ಲೋಕದಲ್ಲಿ ಅವಕಾಶ ಪಡೆಯಲು ಅಲೆದಾಟ ನಡೆಸುತ್ತಿರುವಾಗ ಸಿಕ್ಕಿದ್ದು ಕಿರುತೆರೆಯ ಅವಕಾಶ. ಮೀರಾ ಮಾಧವ, ಖುಷಿ, ಮಿಸ್ಟರ್ ಅಂಡ್ ಮಿಸಸ್ ರಂಗೇಗೌಡ, ಕುಲವಧು ಮುಂತಾದ ಧಾರಾವಾಹಿಗಳಲ್ಲಿ ಶಶಿಕಾಂತ್ ನಟಿಸಿದ್ದಾರೆ. ಇದನ್ನೂ ಓದಿ: ನಾಗಚೈತನ್ಯ ‘ಲವ್ ಸ್ಟೋರಿ’ ಲೀಕ್ ಆಯ್ತು

ನಟಿಸಿದ ಎಲ್ಲಾ ಧಾರಾವಾಹಿಗಳಲ್ಲಿ ರಗಡ್ ವಿಲನ್ ಪಾತ್ರಗಳಲ್ಲೇ ಮಿಂಚಿದ ಶಶಿಕಾಂತ್ ರಣರಣಕ ಚಿತ್ರದ ಮೂಲಕ ನಾಯಕ ನಟನಾಗಿ ಸ್ಯಾಂಡಲ್‍ವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ರು. ಇದೀಗ ಬಣ್ಣದ ಲೋಕದಲ್ಲೇ ಬದುಕುಕಟ್ಟಿಕೊಳ್ಳಲು ಮುಂದಾಗಿರುವ ಶಶಿಕಾಂತ್ ಗೆ ಹಲವು ಸಿನಿಮಾ ಆಫರ್ ಗಳು ಒಲಿದು ಬರುತ್ತಿದೆ. ಇದನ್ನೂ ಓದಿ: ಒಳ ಉಡುಪು ಜಾಹೀರಾತಿನಲ್ಲಿ ಅಭಿನಯ – ಟ್ರೋಲ್ ಕೆಂಗಣ್ಣಿಗೆ ಗುರಿಯಾದ ರಶ್ಮಿಕಾ ಮಂದಣ್ಣ

TAGGED:Bahukrita VeshamBhargavPrashantha K YallampalliPublic TVsandalwoodShashikanthvaishnaviVyshak Vಚಿತ್ರಪಬ್ಲಿಕ್ ಟಿವಿಬಹುಕೃತಂ ವೇಷಂವೈಷ್ಣವಿಶಶಿಕಾಂತ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
27 minutes ago
mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
50 minutes ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
55 minutes ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
57 minutes ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
1 hour ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?