Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದತ್ತಪೀಠದ ಹೋಮದ ಜಾಗದಲ್ಲಿ ಮಾಂಸ – ಮುಂದೆ ಅಲ್ಲಿ ಹೋಮ ಮಾಡಲ್ಲ ಅಂದ್ರು, ಮತ್ತೆಲ್ಲಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ದತ್ತಪೀಠದ ಹೋಮದ ಜಾಗದಲ್ಲಿ ಮಾಂಸ – ಮುಂದೆ ಅಲ್ಲಿ ಹೋಮ ಮಾಡಲ್ಲ ಅಂದ್ರು, ಮತ್ತೆಲ್ಲಿ?

Chikkamagaluru

ದತ್ತಪೀಠದ ಹೋಮದ ಜಾಗದಲ್ಲಿ ಮಾಂಸ – ಮುಂದೆ ಅಲ್ಲಿ ಹೋಮ ಮಾಡಲ್ಲ ಅಂದ್ರು, ಮತ್ತೆಲ್ಲಿ?

Public TV
Last updated: May 16, 2022 11:16 pm
Public TV
Share
3 Min Read
ckm duttatreya
SHARE

ಚಿಕ್ಕಮಗಳೂರು: ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಪೀಠದಲ್ಲಿ ಆವರಣದಲ್ಲಿ ಮಾಂಸಹಾರ ಸೇವನೆ ಮಾಡಿದ್ದು, ಹಿಂದೂ ಸಂಘಟನೆಗಳು ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿವೆ.

ದತ್ತಪೀಠದ ಉಮೇದುವಾರಿಕೆಗಾಗಿ ಎರಡು ಸಮುದಾಯಗಳು ದಶಕಗಳಿಂದ ಹೋರಾಟ ಮಾಡುತ್ತಿವೆ. ಹಾಗಾಗಿ ನ್ಯಾಯಾಲಯ ಕೂಡ ದತ್ತಪೀಠದ ಆವರಣದೊಳಗೆ ಕೆಲವೊಂದು ಆಚರಣೆಗೆ ನಿಬರ್ಂಧ ಹೇರಿದೆ. ಆದರೆ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ, ವಿವಾದಿತ ಜಾಗದಲ್ಲಿ ಪೂಜೆ ಮಾಡಿ ಮಾಂಸ ಸೇವನೆ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಇದನ್ನೂ ಓದಿ: ವಿವಾಹಿತೆಯ ಅನುಮಾನಾಸ್ಪದ ಸಾವು

WhatsApp Image 2022 05 16 at 8.53.27 PM

ದತ್ತಪೀಠದಲ್ಲಿನ ಗೋರಿಗಳಿಗೆ ಪೂಜೆ ಮಾಡಲು ಹೇಗೆ ಅವಕಾಶ ಸಿಕ್ಕಿತು ಎಂದು ಬಜರಂಗದಳ ಕಾರ್ಯಕರ್ತರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಿಂದೂಗಳ ಧಾರ್ಮಿಕ ಸಭೆ-ಸಮಾರಂಭದಲ್ಲಿ ಹೋಮ-ಹವನ ನಡೆಯುವ ಜಾಗದಲ್ಲಿ ಬಿರಿಯಾನಿ ಬೇಯಿಸಿ ತಿಂದಿರುವುದು ಇದೀಗ ಮತ್ತೊಂದು ವಿವಾದದ ಕಿಡಿಹೊತ್ತಿಸಿದೆ.

ಸರ್ಕಾರವೇ ನಿರ್ಮಿಸಿರುವ ಶೆಡ್: ನಿನ್ನೆ ದತ್ತಪೀಠದ ಗುಹೆಯ ಪಕ್ಕದಲ್ಲಿನ ತಾತ್ಕಾಲಿಕ ಶೆಡ್‍ನಲ್ಲಿ ಮುಸ್ಲಿಮರು ಮಾಂಸ ಬೇಯಿಸಿಕೊಂಡು ಸೇವನೆ ಮಾಡಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಕಾರರ ಪಿತ್ತ ನೆತ್ತಿಗೇರಿತ್ತು. ದತ್ತ ಜಯಂತಿ, ದತ್ತಮಾಲಾ ಅಭಿಯಾನದ ವೇಳೆ ಇಲ್ಲಿ ಹೋಮ-ಹವನ ನಡೆಸಲು ಸರ್ಕಾರವೇ ತಾತ್ಕಾಲಿಕವಾಗಿ ನಿರ್ಮಿಸಿರುವ ಶೆಡ್ ಇದು. ಈ ಶೆಡ್‍ನಲ್ಲಿ ಅನುಸೂಯ ಜಯಂತಿ, ದತ್ತಜಯಂತಿಯಂತೆ ಲೋಕ ಕಲ್ಯಾಣಾರ್ಥ ವಿವಿಧ ಹೋಮ-ಹವನ ಹಾಗೂ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗುವುದು. ಆದರೆ ಅಂತಹ ಧಾರ್ಮಿಕ ಜಾಗದಲ್ಲೂ ಮಾಂಸ ಬೇಯಿಸಿದ್ದಾರೆ ಎಂದು ಹಿಂದೂ ಸಂಘಟಕರು ಮುಸ್ಲಿಮರ ವಿರುದ್ಧವೂ ಕಿಡಿಕಾರಿದ್ದಾರೆ.

WhatsApp Image 2022 05 16 at 8.53.27 PM 1

ದತ್ತಪೀಠದಲ್ಲೇ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಬಜರಂಗದಳ ಕಾರ್ಯಕರ್ತರು ಮುಜರಾಯಿ ಇಲಾಖೆ ಮಾಂಸಹಾರಕ್ಕೆ ಅವಕಾಶ ನೀಡಿದ್ದಾರೆ ಎಂದು ಹರಿಹಾಯ್ದರು. ಹೋಮದ ಜಾಗದಲ್ಲಿ ಮಾಂಸ ಬೇಯಿಸಿ ಅಪವಿತ್ರಗೊಳಿಸಿದ್ದಾರೆ. ದತ್ತಜಯಂತಿಯಲ್ಲಿ ಹೋಮದ ಹೊಗೆ, ಬೇರೆ ಸಮಯದಲ್ಲಿ ಮಾಂಸದ ಹೊಗೆ ಎಂದು ಬಜರಂಗದಳ ಮುಖಂಡರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ತಮ್ಮನನ್ನೇ ಚಾಕುವಿನಿಂದ ಇರಿದು ಕೊಂದ ಅಣ್ಣ

ಅಲ್ಲಿ ಪೂಜೆ ಮಾಡಲ್ಲ, ಮತ್ತೆಲ್ಲಿ: ದತ್ತಜಯಂತಿಯಲ್ಲಿ ನಾವು ಲೋಕಕಲ್ಯಾಣಾರ್ಥ ಹೋಮ-ಹವನ ನಡೆಸುವ ಜಾಗವನ್ನು ಮುಸ್ಲಿಮರು ಅಪವಿತ್ರಗೊಳಿಸಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಅಲ್ಲಿ ಹೋಮ-ಹವನ, ಪೂಜೆ ಮಾಡುವುದಿಲ್ಲ. ಈ ಹಿಂದೆ ಗುಹೆ ಸಮೀಪದ ತುಳಸಿಕಟ್ಟೆ ಬಳಿ ಹೋಮ ನಡೆಯುತ್ತಿತ್ತು. ಇನ್ನು ಮುಂದೆ ಅದೇ ತುಳಸಿಕಟ್ಟೆ ಬಳಿ ಹೋಮ-ಹವನ ಮಾಡುತ್ತೇವೆ. ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ನಮಗೆ ಯಾವುದೇ ಪ್ರಶ್ನೆ ಮಾಡುವಂತಿಲ್ಲ. ತುಳಸಿಕಟ್ಟೆ ಬಳಿ ಹೋಮ ಮಾಡಲು ಸರ್ಕಾರ ವಿರೋಧ ತೋರಿದರೆ ನಾವು ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

WhatsApp Image 2022 05 16 at 8.53.28 PM 1

ವಿವಾದಿತ ಗೋರಿಗಳಿಗೆ ಪೂಜೆ: ದತ್ತಪೀಠದ ಗುಹೆಯೊಳಗಿನ ಗೋರಿಗಳಿಗೆ ಮುಜಾವರ್ ಮಾತ್ರ ಪೂಜೆ ಮಾಡಬೇಕು. ಬೇರೆ ಯಾರಿಗೂ ಪೂಜೆಗೆ ಅವಕಾಶವಿಲ್ಲ. ಆದರೆ ದರ್ಶನಕ್ಕೆ ಗುಹೆಯೊಳಗೆ ಹೋಗಿದ್ದ ಮುಸ್ಲಿಂ ಭಕ್ತರೇ ಪೂಜೆ ಮಾಡಿದ್ದಾರೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಇದು ಕೋರ್ಟ್ ಆದೇಶವನ್ನು ಉಲ್ಲಂಘಿಸಿದಂತೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿರುವ ಹಿಂದೂ ಸಂಘಟನೆಗಳ ಮುಖಂಡರು ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.

200 ಮೀಟರ್ ಸುತ್ತಳತೆಯಲ್ಲಿ ಮಾಂಸ ನಿಷೇಧ: 2010ರಲ್ಲಿ ಸುಪ್ರೀಂಕೋರ್ಟ್ ಕೂಡ 1999ರ ಪೂಜಾ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋಗಲು ಸೂಚಿಸಿದೆ. ಸರ್ಕಾರ, ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ಮುಜಾವರ್ ಮಾತ್ರ ದತ್ತಗುಹೆ-ಗೋರಿಗಳಿಗೆ ಪೂಜೆ ಸಲ್ಲಿಸಲು ಅವಕಾಶವಿದೆ. ಬೇರೆಯವರಿಗೆ ಪೂಜೆ-ಪುನಸ್ಕಾರಕ್ಕೆ ಅವಕಾಶವಿಲ್ಲ. ದತ್ತಜಯಂತಿ-ದತ್ತಮಾಲಾಧಾರಣೆ ಸಮಯದಲ್ಲಿ ಸ್ವಾಮೀಜಿಗಳಿಂದ ದತ್ತಪಾದುಕೆ ಪೂಜೆಗೆ ಅವಕಾಶಕ್ಕೆ ನೀಡುವಂತೆ ಒತ್ತಾಯಿಸಿರುವ ಹಲವು ನಿದರ್ಶನಗಳಿವೆ. ಜೊತೆಗೆ ದತ್ತಪೀಠದ 200 ಮೀಟರ್ ಸುತ್ತಳತೆಯಲ್ಲಿ ಮುಜರಾಯಿ ಇಲಾಖೆಯ ನಿಯಮ-ನಿರ್ದೇಶನದಂತೆ ಯಾವುದೇ ರೀತಿಯ ಮಾಂಸಾಹಾರ ಮಾಡುವುದಕ್ಕೆ ಸಂಪೂರ್ಣ ನಿಷೇಧವಿದೆ. ಮಾಂಸಹಾರ ನಿಷೇಧ ಜಾರಿಯಲ್ಲಿದ್ದರೂ ಕೂಡ ಬಿರಿಯಾನಿ ಮಾಡಿ ತಿಂದಿರೋದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

WhatsApp Image 2022 05 16 at 8.53.28 PM 1 1

ಜಿಲ್ಲಾಡಳಿತದಿಂದ ತಾತ್ಕಾಲಿಕ ಶೆಡ್ ಕ್ಲೀನ್: ಹೋಮ-ಹವನದ ಜಾಗದಲ್ಲಿ ಬಿರಿಯಾನಿ ತಿಂದ ವಿಷಯ ಹಾಗೂ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಗೊಂಡ ಜಿಲ್ಲಾಡಳಿತ ಮುಸ್ಲಿಮರು ಬಿರಿಯಾನಿ ತಿಂದಿದ್ದ ಹೋಮದ ಜಾಗವನ್ನು ಕ್ಲೀನ್ ಮಾಡಿದೆ. ತಾತ್ಕಾಲಿಕ ಶೆಡ್ ಹಾಗೂ ಅದರ ಸುತ್ತಲೂ ಬ್ಲೀಚಿಂಗ್ ಪೌಡರ್ ಹಾಕಿ ಕ್ಲೀನ್ ಮಾಡಿದ್ದು, ಈಗ ಅಲ್ಲಿಗೆ ಯಾರಿಗೂ ಅವಕಾಶ ನೀಡುತ್ತಿಲ್ಲ. ಈ ಪ್ರಕರಣವನ್ನು ಖಂಡಿಸಿರುವ ವಿ.ಎಚ್.ಪಿ ಹಾಗೂ ಬಜರಂಗದಳ ಕಾರ್ಯಕರ್ತರು ದತ್ತಪೀಠದಲ್ಲಿ ಪ್ರತಿಭಟನೆ ನಡೆಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಸುಂದರ ಪ್ರಕೃತಿ ಹಾಳು, ಪೀಠದಲ್ಲಿ ಕೆಟ್ಟ ವಾಸನೆ: ಇದೆಲ್ಲದರ ಮಧ್ಯೆ ಸಮುದ್ರಮಟ್ಟದಿಂದ ಸುಮಾರು 2,500 ಅಡಿಗೂ ಎತ್ತರದಲ್ಲಿರುವ ಸುಂದರ ಹಾಗೂ ಸ್ವಚ್ಛ ವಾತಾವರಣದಲ್ಲಿ ಬೀರುತ್ತಿರುವ ವಾಸನೆಯನ್ನ ತಡೆಯಲಾಗದಂತಾಗಿದೆ. ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಅಡುಗೆ ಮಾಡುತ್ತಿರುವುದು, ಬಹಿರ್ದೆಸೆಗೆ ಹೋಗುತ್ತಿರುವುದು, ತಿಂದ ಪ್ಲೇಟ್‍ಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದು ಇಲ್ಲಿನ ಸೌಂದರ್ಯ ಹಾಗೂ ಸ್ವಚ್ಛತೆಯನ್ನ ಹಾಳು ಮಾಡುತ್ತಿದ್ದಾರೆ. ಎಷ್ಟರ ಮಟ್ಟಿಗೆ ಅಂದ್ರೆ ಊಹಿಸಲಾಗದಷ್ಟು. ತಣ್ಣನೆಯ ಗಾಳಿ ಬೀಸುವ ದತ್ತಪೀಠದ ಆವರಣದಲ್ಲೇ ಪ್ರವಾಸಿಗರು ಮೂಗು ಮುಚ್ಚಿಕೊಂಡು ಹೋಗುವಷ್ಟು ಹಾಳುಮಾಡಿದ್ದಾರೆ. ಕೂಡಲೇ ಜಿಲ್ಲಾಡಳಿತ ದತ್ತಪೀಠದ ಪರಿಸರ ರಕ್ಷಣೆಗೆ ಸೂಕ್ತ ಕ್ರಮಕೈಗೊಳ್ಳದಿದ್ದರೆ ದತ್ತಪೀಠದ ಸೌಂದರ್ಯ ಹಾಳುಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಪ್ರವಾಸಿಗರೇ ಅಸಮಾಧಾನ ಹೊರಹಾಕಿದ್ದಾರೆ.

TAGGED:Bajrang DalChikmagalurDepartment of MuzaraiDistrict Administrationhomemeatಚಿಕ್ಕಮಗಳೂರುಜಿಲ್ಲಾಡಳಿತಭಜರಂಗ ದಳಮಾಂಸಹಾರಮುಜರಾಯಿ ಇಲಾಖೆಹೋಮ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
3 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
4 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
4 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
4 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
5 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?