ಬೆಳಗಾವಿ: ಪ್ರಚಾರಕ್ಕೆ ಅಡ್ಡಿ ಮಾಡಿದ ಬಜರಂಗದಳ ಕಾರ್ಯಕರ್ತರ ಎದುರೇ ‘ಬಜರಂಗಬಲಿ ಕೀ ಜೈ’ ಎಂದ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ನಡೆದ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕಾಂಗ್ರೆಸ್ ಪ್ರಣಾಳಿಕೆ (Congress Manifesto) ಯಲ್ಲಿ ಭಜರಂಗದಳ ನಿಷೇಧ ಅಂಶ ಪ್ರಸ್ತಾಪಕ್ಕೆ ಖಂಡನೆ ವ್ಯಕ್ತವಾಗಿತ್ತು. ಹೀಗಾಗಿ ಬೆಳಗಾವಿ ತಾಲೂಕಿನ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚಾರಕ್ಕೆ ಬಜರಂಗದಳ ಕಾರ್ಯಕರ್ತರ ಅಡ್ಡಿಪಡಿಸಿದ್ದಲ್ಲದೇ ಜೈ ಬಜರಂಗಬಲಿ ಎಂದು ಘೋಷಣೆ ಕೂಗಿದರು.
ಇದಕ್ಕೆ ಪ್ರತಿಯಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ರಿಂದಲೂ ಜೈ ಬಜರಂಗ ಬಲಿ ಎಂದು ಘೋಷಣೆ ಕೂಗಿದ್ದು, ಜೈ ಬಜರಂಗಬಲಿ, ಪವನಪುತ್ರ ಹನುಮಾನ್ ಕೀ ಜೈ ಎಂದು ಹೆಬ್ಬಾಳ್ಕರ್ ಘೋಷಣೆ ಕೂಗಿದರು.