Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತ್ಯಾಗದ ಪ್ರತೀಕ ʻಬಕ್ರೀದ್‌ʼ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತ್ಯಾಗದ ಪ್ರತೀಕ ʻಬಕ್ರೀದ್‌ʼ

Bengaluru City

ತ್ಯಾಗದ ಪ್ರತೀಕ ʻಬಕ್ರೀದ್‌ʼ

Public TV
Last updated: June 7, 2025 7:18 am
Public TV
Share
2 Min Read
Bakrid
SHARE

ಮುಸ್ಲಿಂ ಬಾಂಧವರು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ, ಅಚಲ ದೈವ ಭಕ್ತಿ ಹಾಗೂ ಅವರ ಪುತ್ರ ಹಜರತ್‌ ಇಸ್ಮಾಯಿಲ್‌ ಅವರ ದೈಬ ಭಕ್ತಿಯನ್ನು ಸಂಕೇತಿಸುವ ಹಬ್ಬವೇ ‘ಈದುಲ್ ಅದ್‌ಹಾʼ. ಭಾರತದಲ್ಲಿ ಈ ಹಬ್ಬವನ್ನು ಮುಸ್ಲಿಂ (Muslims) ಬಾಂಧವರ ಪವಿತ್ರ ಬಕ್ರೀದ್‌ (Bakrid Festival) ಎಂದು ಆಚರಿಸುತ್ತಾರೆ. ಈ ಬಾರಿ ಜೂನ್‌ 07 ರಂದು (ಇಂದು) ದೇಶದಾದ್ಯಂತ ಮುಸ್ಲಿಮರು ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಪುಣ್ಯ ಸಂಪಾದಿರುವ ರಂಜಾನ್‌ (Ramdhan) ತಿಂಗಳ ಉಪವಾಸದ ಬಳಿಕ ‘ಈದ್‌ ಉಲ್‌ ಫಿತ್ರ್‌’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್‌ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ‘ಬಕ್ರೀದ್‌’ನ ಮುಖ್ಯ ಆಶಯ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಎರಡೂವರೆ ಸಾವಿರ ವರ್ಷಗಳ ಹಿಂದೆ ಹುಟ್ಟಿದ್ದರು ಎಂದು ಮುಸ್ಲಿಂ ಬಾಂಧವರ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.

ramzan

ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್‌ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ.

ಮನೆ ಮನೆಗಳಲ್ಲಿ ಹಬ್ಬದೂಟ:
ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ.

ಜಾನುವಾರು ಬಲಿ ನೀಡುವ ಆಚರಣೆ:
ಜಾನುವಾರುಗಳನ್ನು ಬಲಿ ಕೊಡುವುದು ಸಹ ‘ಬಕ್ರೀದ್‌’ನ ಪ್ರಮುಖ ಆಚರಣೆಯಾಗಿದೆ. ಪ್ರವಾದಿ ಇಬ್ರಾಹಿಂ ಅವರ ಜೀವನದಲ್ಲಿ ನಡೆದಿದ್ದ ಘಟನೆಯೊಂದರ ನೆನಪಿನಲ್ಲಿ ಜಾನುವಾರು ಬಲಿ ನೀಡಲಾಗುತ್ತದೆ. ಇದಕ್ಕೆ ಒಂದು ಹಿನ್ನೆಲೆಯೂ ಇದೆ.

Bakrid

ಅಲ್ಲಾಹುನ ಆದೇಶದಂತೆ ಇಬ್ರಾಹಿಂ, ತಮ್ಮ ಪುತ್ರ ಇಸ್ಮಾಯಿಲ್ ಅವರನ್ನು ಬಲಿಯರ್ಪಿಸಲು ಮುಂದಾಗುವರು. ತಮ್ಮ ಮಗನನ್ನೇ ಬಲಿ ನೀಡಲು ಸಿದ್ಧವಾಗಿದ್ದ ಇಬ್ರಾಹಿಂ ಅವರ ಭಕ್ತಿಯನ್ನು ಅಲ್ಲಾಹನು ಮೆಚ್ಚಿ ಪುತ್ರನ ಬದಲು ಒಂದು ಟಗರನ್ನು ಬಲಿಯರ್ಪಿಸುವಂತೆ ಸೂಚಿಸುತ್ತಾರೆ. ಇದು ತಮ್ಮ ಧರ್ಮಗ್ರಂಥಗಳಲ್ಲೂ ಉಲ್ಲೇಖವಾಗಿದೆ ಎಂದು ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.

ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಜಾನುವಾರು ಬಲಿ ಅರ್ಪಿಸಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಪ್ರಾಣಿಬಲಿ ನೀಡಬೇಕು. ಪ್ರಾಣಿಯಿಂದ ಲಭಿಸಿದ ಮಾಂಸವನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚಬೇಕು.

Bakrid

ಹಜ್ ಯಾತ್ರೆ:
ಸೌದಿ ಅರೇಬಿಯಾದ ಮಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುವ ಸಮಯದಲ್ಲೇ ಈ ಹಬ್ಬ ಆಚರಿಸಲಾಗುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ 9ರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ. ಪುಣ್ಯ ಸಂಪಾದಿಸುವ ರಂಜಾನ್‌ ಮಾಸದಲ್ಲೂ ಮುಸ್ಲಿಂ ಬಾಂಧವರು ಮಕ್ಕಾ, ಮದೀನಕ್ಕೆ ಭೇಟಿ ನೀಡುತ್ತಾರೆ.

TAGGED:BakridBakrid 2025Bakrid Festivalkarnatakamuslimsಕರ್ನಾಟಕಬಕ್ರೀದ್ಬಕ್ರೀದ್ ಹಬ್ಬಬೆಂಗಳೂರುಮುಸ್ಲಿಮರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Murshidabad
Latest

West Bengal elections 2026 | ಮತದಾನದ ಹೊತ್ತಲ್ಲೇ ಬಂಗಾಳದಲ್ಲಿ ಕಚ್ಚಾ ಬಾಂಬ್ ದಾಳಿ; ಹಲವರು ಗಂಭೀರ

Public TV
By Public TV
4 minutes ago
John Phelan
Latest

ಹಾರ್ಮುಜ್‌ಗೆ ದಿಗ್ಬಂಧನ ವಿಧಿಸಿರೋ ಅಮೆರಿಕ ಸೇನೆಗೆ ದೊಡ್ಡ ಹೊಡೆತ – ನೌಕಾಪಡೆ ಕಾರ್ಯದರ್ಶಿ ರಾಜೀನಾಮೆ

Public TV
By Public TV
26 minutes ago
sslc result
Bengaluru City

ಇಂದು SSLC ಪರೀಕ್ಷೆ- 1ರ ಫಲಿತಾಂಶ ಪ್ರಕಟ

Public TV
By Public TV
49 minutes ago
Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
2 hours ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
2 hours ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?