ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ಬಕ್ರೀದ್ ಹಬ್ಬ (Bakrid Festival) ಆಚರಣೆ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ (Chamrajpete Eidgah Maidan) ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಸಾಮೂಹಿಕ ಪ್ರಾರ್ಥನೆ ಆರಂಭವಾಗಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಳ್ಳಲಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಮೈದಾನದ ಸುತ್ತ ಬಿಗಿ ಪೊಲೀಸ್ (Police) ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ‘ಲವ್’ ಅಂಗಳದಿಂದ ಬಂತು ಹೊಸದೊಂದು ಪ್ರೇಮಗೀತೆ
ಬಿಗಿ ಬಂದೋಬಸ್ತ್ಗಾಗಿ 300ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಮೈದಾನದ ಸುತ್ತ CCTV ಕ್ಯಾಮೆರಾ ಅಳವಡಿಸಲಾಗಿದೆ. ಬೆಳಗ್ಗೆ 9:30 ಗಂಟೆ ವೇಳೆಗೆ ಪ್ರಾರ್ಥನೆಯಲ್ಲಿ ಸಿಎಂ ಭಾಗಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ತರಕಾರಿ ಖಾಲಿ ಆಗಿದ್ರೆ ಸೇವ್ ಬಳಸಿ ಮಾಡಿ ಸ್ಪೈಸಿ ಪಲ್ಯ
ಮುಸ್ಲಿಂ ಧರ್ಮಗುರುಗಳು ಸೇರಿದಂತೆ ಸ್ಥಳೀಯ ಶಾಸಕ, ಸಚಿವ ಜಮೀರ್ ಅಹಮ್ಮದ್ ಖಾನ್ (Zameer Ahmed Khan) ಹಾಗೂ ಮುಸ್ಲಿಂ ಮುಖಂಡರು ಪ್ರಾರ್ಥನೆಯಲ್ಲಿ ಭಾಗಿಯಾಗಲಿದ್ದಾರೆ. ಮೈದಾನದ ಈದ್ಗಾ ಗೋಡೆ ಮುಂಭಾಗ ಪ್ರಾರ್ಥನೆಗಾಗಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ವೇದಿಕೆ ಸುತ್ತಲೂ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
Web Stories