Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ತ್ಯಾಗ ಬಲಿದಾನದ ಸಂಕೇತ ಬಕ್ರೀದ್: ಈ ಹಬ್ಬದ ವಿಶೇಷತೆ ಏನು? ಇಲ್ಲಿದೆ ವಿವರ

Public TV
Last updated: July 21, 2021 7:56 am
Public TV
Share
2 Min Read
Bakrid 5 copy
SHARE

ಮುಸ್ಲಿಮ್ ಬಾಂಧವರಿಗೆ ಹಬ್ಬಗಳು ಅಂದರೆ ಎರಡೇ. ಒಂದು ಈದ್ ಉಲ್ ಫಿತ್ರ್ ಅಥವಾ ರಂಜಾನ್ ಹಬ್ಬ ಹಾಗೂ ಈದ್ ಅಲ್ ಅಧಾ (ಈದ್ ಉಲ್ ಧುಹಾ) ಅಥವಾ ಬಕ್ರೀದ್ ಹಬ್ಬ. ಇಸ್ಲಾಮಿಕ್ ಕ್ಯಾಲೆಂಡರ್‍ ನ ಒಂಬತ್ತನೆಯ ತಿಂಗಳಲ್ಲಿ ಒಂದು ತಿಂಗಳ ಉಪವಾಸ ಆಚರಣೆಯ ಬಳಿಕ ರಂಜಾನ್ ರಬ್ಬ ಆಚರಿಸಿದರೆ ಕಡೆಯ ತಿಂಗಳಾದ ದುಲ್ ಹಜ್ ನ ಹತ್ತನೆಯ ದಿನದಂದು (ಚಂದ್ರದರ್ಶನವಾದ ಹತ್ತನೆಯ ದಿನ) ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ.

ಇತಿಹಾಸ: ಬಕ್ರೀದ್ ಆಚರಣೆಗೆ ಕಾರಣವಾದ ಕಥೆಗೆ ನಾಲ್ಕು ಸಾವಿರ ವರ್ಷ ಹಿಂದಿನ ಇತಿಹಾಸವಿದೆ. ಆ ಸಮಯದಲ್ಲಿ ಮೆಕ್ಕಾ ನಗರದಲ್ಲಿ ವಾಸವಾಗಿದ್ದ ಪ್ರವಾದಿ ಇಬ್ರಾಹಿಂ(ಸ) ರವರ ಭಕ್ತಿ ಮತ್ತು ನಿಷ್ಠೆಯನ್ನು ಪರೀಕ್ಷಿಸಲು ಅಲ್ಲಾಹ ಮುಂದಾಗುತ್ತಾರೆ. ಕನಸಿನಲ್ಲಿ ಬರುವ ಅಲ್ಲಾಹ ಜಗತ್ತಿನಲ್ಲಿ ನಿಮಗೆ ಅತ್ಯಂತ ಪ್ರಿಯರು ಯಾರು ಎಂದು ಕೇಳಿದಾಗ, ನನ್ನ ಪುತ್ರ ನನಗೆ ಅತ್ಯಂತ ಪ್ರಿಯವಾದ ವ್ಯಕ್ತಿಯೆಂದು ಇಬ್ರಾಹಿಂ(ಸ) ಹೇಳ್ತಾರೆ. ಹಾಗಾದರೆ ಓರ್ವನೇ ಮಗನಾದ ಇಸ್ಮಾಯಿಲ್ ರನ್ನು ಬಲಿ ನೀಡಬೇಕೆಂದು ಕನಸಿನಲ್ಲಿ ಆಜ್ಞೆಯಾಗುತ್ತದೆ.

Bakrid 4 copy

ಅಲ್ಲಾಹನ ಆಜ್ಞೆಯಂತೆ ಇಬ್ರಾಹಿಂ(ಸ) ಮಗನನ್ನು ಬಲಿ ನೀಡಲು ಮುಂದಾಗುತ್ತಾರೆ. ತಂದೆಯ ಮಾತನ್ನು ಇಸ್ಮಾಯಿಲ್ ಸಹ ಒಪ್ಪಿಕೊಂಡು ಬಲಿಗೆ ನಗುಮೊಗದಲ್ಲಿಯೇ ಸಿದ್ಧಗೊಳ್ಳುತ್ತಾನೆ. ಆದರೆ ಇಬ್ರಾಹಿಂ(ಸ) ಅವರಿಗೆ ಮಗನನ್ನು ಬಲಿ ಕೊಡಲು ಪುತ್ರ ವಾತ್ಸಲ್ಯ ಅಡ್ಡಿಯಾಗುತ್ತದೆ. ಈ ಸದರ್ಭದಲ್ಲಿ ಕಣ್ಣಿಗೆ ಕಪ್ಪು ಪಟ್ಟಿಕೊಂಡ ಅವರು ಮಗನ ಕುತ್ತಿಗೆಗೆ ಕತ್ತಿ ಬೀಸಲು ಸಿದ್ಧರಾಗುತ್ತಾರೆ.

ಆ ವೇಳೆ, ಪ್ರತ್ಯಕ್ಷರಾದ ದೇವದೂತ ಜಿಬ್ರಾಯಿಲ್, ಇಸ್ಮಾಯಿಲ್‍ರನ್ನು ಬದಿಗೆ ಸರಿಸಿ ಅವರ ಬದಲಿಗೆ ಒಂದು ಕುರಿಯನ್ನು ಬಲಿಕೊಡುವಂತೆ ಆಜ್ಞಾಪಿಸುತ್ತಾರೆ. ಕುರಿಯ ಕುತ್ತಿಗೆಯ ಮೇಲೆ ಹರಿಸಿದ ಕತ್ತಿ ಸಫಲವಾಗುತ್ತದೆ. ದೇವನಲ್ಲಿ ತಮಗಿರುವ ಸತ್ಯನಿಷ್ಠೆಯ ಸಂಕೇತವಾಗಿ ವಿಶ್ವದಾದ್ಯಂತ ಮುಸ್ಲಿಮರಿಂದ ಬಕ್ರೀದ್ ಹಬ್ಬ ಆಚರಿಸಲಾಗುತ್ತಿದೆ. ಇದೇ ಕಥೆಯನ್ನು ಹಲವರು ತಮ್ಮದೇ ಶೈಲಿಯಲ್ಲಿ ಭಿನ್ನ ಭಿನ್ನವಾಗಿ ಹೇಳುತ್ತಾರೆ.

Bakrid 2 copy

ಈದ್ ನಮಾಜ್: ಮುಂಜಾನೆಯ ಪ್ರಾರ್ಥನೆ ಬಕ್ರೀದ್ ಹಬ್ಬದ ಬೆಳಗ್ಗೆ ಊರಿನ ಜನರೆಲ್ಲರೂ ಹೊಸ ಬಟ್ಟೆ ಧರಿಸಿ ಈದ್ಗಾ ಮೈದಾನಕ್ಕೆ ತೆರಳುತ್ತಾರೆ. ಈದ್ಗಾ ವ್ಯವಸ್ಥೆ ಇಲ್ಲದ ಊರಿನಲ್ಲಿ ಪ್ರಮುಖ ಮಸೀದಿಗಳಲ್ಲಿಯೇ ಈದ್ ಪ್ರಾರ್ಥನೆಯನ್ನು ಮಾಡುತ್ತಾರೆ. ತೆರೆದ ಮೈದಾನದಲ್ಲಿ ಊರಿನ ಅಷ್ಟೂ ಜನರು ಒಂದಾಗಿ ಈದ್ ನಮಾಜ್ ನಿರ್ವಹಿಸುವ ಕ್ರಿಯೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಮಸೀದಿಯಲ್ಲಿ ಮೊದಲೇ ನಿರ್ಣಯಿಸಿದ ಸಮಯಕ್ಕೆ ಎಲ್ಲರೂ ಸಾಮೂಹಿಕ ಪ್ರಾರ್ಥನೆಗೆ ಒಂದೆಡೆ ಸೇರುತ್ತಾರೆ. ನಮಾಜ್ ಬಳಿಕ ಎಲ್ಲರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ.

ಕುರ್ಬಾನಿ: ಈದ್ ನಮಾಜ್ ಬಳಿಕ ನಾಲ್ಕು ಕಾಲುಗಳ್ಳ ಪ್ರಾಣಿಯೊಂದನ್ನು ಬಲಿ ನೀಡಲಾಗುತ್ತದೆ. ಆದ್ರೆ ಕುರ್ಬಾನಿಗೆ ಪ್ರಾಣಿಗಳನ್ನು ಬಳಸುವಾಗ ಕೆಲವು ಮಾನದಂಡಗಳನ್ನು ಎಲ್ಲರೂ ಪಾಲಿಸಬೇಕಾಗುತ್ತದೆ. ಬಲಿ ನೀಡುವ ಪ್ರಾಣಿಗೆ ಯಾವುದೇ ರೀತಿಯಲ್ಲಿ ಗಾಯಗೊಂಡಿರಬಾರದು ಅಥವಾ ಸಾವಿನ ಸ್ಥಿತಿಯಲ್ಲಿರಬಾರದು ಎಂಬಿತ್ಯಾದಿ ಮಾನದಂಡಗಳನ್ನು ಅವಶ್ಯಕವಾಗಿ ಕುರ್ಬಾನಿ ನೀಡುವವರು ಪಾಲಿಸಬೇಕಾಗುತ್ತದೆ.

Bakrid 6 copy

ಕುರ್ಬಾನಿಯ ಬಳಿಕ ದೊರಕುವ ಮಾಂಸದಲ್ಲಿ ಮೂರು ಪಾಲು ಮಾಡಲಾಗುತ್ತದೆ. ಒಂದು ಪಾಲು ಬಡವರಿಗೆ, ಇನ್ನೊಂದು ಸಂಬಂಧಿಕರಿಗೆ ಮತ್ತು ಮೂರನೆಯ ಪಾಲನ್ನು ಸ್ವಂತಕ್ಕಾಗಿ ಎಂದು ವಿಂಗಡಿಸಲಾಗುತ್ತದೆ. ಕುರ್ಬಾನಿ ಮಾಡಲು ಅನುಕೂಲತೆ ಇಲ್ಲದವರು ಅಥವಾ ಊರಿನಿಂದ ದೂರವಿರುವ ಅಥವಾ ಬೇರಾವುದೋ ಕಾರಣದಿಂದ ನೀಡಲು ಸಾಧ್ಯವಾಗದಿರುವವರು ಇದೇ ಕಾರ್ಯಕ್ಕಾಗಿ ನಿಯೋಜಿಸಿರುವ ಸಂಸ್ಥೆಗಳಿಗೆ ದಾನದ ರೂಪದಲ್ಲಿ ಹಣ ನೀಡಬಹುದು. ಹಣ ನೀಡುವುದರಿಂದ ದೇಶದ ಬಡಜನತೆ ಪೌಷ್ಠಿಕವಾದ ಆಹಾರವನ್ನು ಪಡೆಯಲು ಸಾಧ್ಯವಾಗುತ್ತದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Bakrid 3 copy

TAGGED:BakriddonateislamKurbanimuslimNamazPublic TVಇಸ್ಲಾಂಕುರ್ಬಾನಿದಾನನಮಾಜ್ಪಬ್ಲಿಕ್ ಟಿವಿಬಕ್ರೀದ್ಮುಸ್ಲಿಂ
Share This Article
Facebook Whatsapp Whatsapp Telegram

You Might Also Like

Isrel Iran War
Latest

ಇಸ್ರೇಲ್, ಇರಾನ್ ಮೇಲೆ ಪರಮಾಣು ಬಾಂಬ್ ಬಳಸಿದ್ರೆ, ನಾವು ಪರಮಾಣು ದಾಳಿ ಮಾಡಲ್ಲ: ಪಾಕಿಸ್ತಾನ

Public TV
By Public TV
16 minutes ago
Vijayapura bhimatheera
Court

ಭೀಮಾತೀರದ ನಕಲಿ ಎನ್‌ಕೌಂಟರ್ ಕೇಸ್ – ಜು.1ಕ್ಕೆ ವಿಚಾರಣೆ ಮುಂದೂಡಿಕೆ

Public TV
By Public TV
20 minutes ago
Laxman Savadi 1 1
Bengaluru City

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

Public TV
By Public TV
34 minutes ago
Allu Arjun Atlee
Cinema

ಅಲ್ಲು ಹೊಸ ಸಿನಿಮಾ ಡ್ಯೂನ್‌ ಕಾಪಿ? – ಕಿಡಿ ಕಿಡಿ ಕ್ಲಾರಿಟಿ ಕೊಟ್ಟ ಅಟ್ಲೀ

Public TV
By Public TV
42 minutes ago
Laxman Savadi 1
Bengaluru City

ಬಿಜೆಪಿಯವರಿಗೆ ಸಿಎಂ, ಡಿಸಿಎಂ ರಾಜೀನಾಮೆ ಕೇಳೋದು ಬಾಯಿ ಪಾಠ ಆಗಿದೆ: ಲಕ್ಷ್ಮಣ್‌ ಸವದಿ

Public TV
By Public TV
1 hour ago
Lakshman Savadi 1
Bengaluru City

ರಾಜಕೀಯದಲ್ಲಿ ಯಾರು ಸನ್ಯಾಸಿಗಳಲ್ಲ, ಸಚಿವ ಸ್ಥಾನ ಕೊಟ್ರೆ ನಿಭಾಯಿಸುತ್ತೇನೆ: ಲಕ್ಷ್ಮಣ್ ಸವದಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?