ಕಾರವಾರ: ಪಹಲ್ಗಾಮ್ ಉಗ್ರರ ನರಮೇಧದ ನಂತರ ಪಾಕ್ ವಿರುದ್ಧ ಭಾರತ ಹಲವು ರೀತಿಯ ಕ್ರಮಗಳನ್ನು ಜರುಗಿಸಿದೆ. ಪಾಕ್ ಧ್ವಜ, ಸರಕುಗಳ ಮಾರಾಟ ನಿಲ್ಲಿಸುವಂತೆ ಇ-ಕಾಮರ್ಸ್ ಕಂಪನಿಗಳಿಗೆ ವಾರ್ನಿಂಗ್ ಸಹ ಕೊಟ್ಟಿದೆ. ಈ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರೈತರು (Farmers) ಪಾಕಿಸ್ತಾನಕ್ಕೆ ರಫ್ತಾಗುತಿದ್ದ ವೀಳ್ಯದೆಲೆ (Betel) ಉತ್ಪನ್ನಕ್ಕೆ ಶಾಶ್ವತವಾಗಿ ನಿರ್ಬಂಧ ಹೇರಲು ನಿರ್ಧರಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ನದಿ ಪಾತ್ರದ ರೈತರಿಂದ ದೆಹಲಿ ವರ್ತಕರು ವೀಳ್ಯದೆಲೆ ಖರೀದಿಸಿ ಪಾಕಿಸ್ತಾನಕ್ಕೆ (Pakistan) ರಫ್ತು ಮಾಡುತಿದ್ದರು. ಆದರೀಗ ನಮಗೆ ನಷ್ಟವಾದರೂ ಪರ್ವಾಗಿಲ್ಲ ಪಾಕಿಸ್ತಾನಕ್ಕೆ ವೀಳ್ಯದೆಲೆ ಕಳುಹಿಸುವುದನ್ನ ನಿರ್ಬಂಧ ಮಾಡ್ತೀವಿ ಅಂತ ಒಕ್ಕೊರಲಿನಿಂದ ಹೇಳ್ತಿದ್ದಾರೆ. ಇದನ್ನೂ ಓದಿ: ಕೊನೆಗೂ ಭಾರತದ ಮುಂದೆ ಮಂಡಿಯೂರಿದ ಪಾಕ್ – ಶಾಂತಿ ಮಾತುಕತೆಗೆ ಪಾಕ್ ಪ್ರಧಾನಿ ಆಹ್ವಾನ
ಹೊನ್ನಾವರದ (Honnavar) ಶರಾವತಿ ನದಿ ತೀರ ಭಾಗದಲ್ಲಿ ಬೆಳೆಯುವ ವೀಳ್ಯದೆಲೆ ದೇಶ-ವಿದೇಶಗಳಲ್ಲೂ ಹೆಸರುವಾಸಿ. ʻರಾಣಿ ವೀಳ್ಯದೆಲೆʼ ಎಂದೇ ಪ್ರಸಿದ್ಧಿ ಪಡೆದಿರುವ ಇಲ್ಲಿನ ವೀಳ್ಯದೆಲೆ ಹೆಚ್ಚು ಕಾಲ ಬಾಳಿಕೆ, ವಿಶೇಷ ಕಾರ ಮತ್ತು ಸ್ವಾದ ಹೊಂದಿದೆ. ಈ ವೀಳ್ಯೆದೆಲೆಗೆ ಪಾಕಿಸ್ತಾನವೇ ದೊಡ್ಡ ಮಾರುಕಟ್ಟೆಯಾಗಿದೆ. ಇದನ್ನೂ ಓದಿ: Namma Metro: ಹಳದಿ ಮಾರ್ಗಕ್ಕೆ 3ನೇ ರೈಲು – ಜೂನ್ನಲ್ಲಿ ಸಂಚಾರ ಆರಂಭ ಸಾಧ್ಯತೆ
ಈ ಮೊದಲು ಮುಂಬೈ ಮಾರುಕಟ್ಟೆ ಮೂಲಕ ಪಾಕಿಸ್ತಾನಕ್ಕೆ ವೀಳ್ಯದೆಲೆ ರಫ್ತಾಗುತಿತ್ತು. ನಂತರ ದೆಹಲಿ ಮಾರುಕಟ್ಟೆ ಮೂಲಕ ಪಾಕಿಸ್ತಾನಕ್ಕೆ ರಫ್ತಾಗುತಿತ್ತು. ಐತಿಹಾಸಿಕ ರಫ್ತು ವಹಿವಾಟು ಹೊಂದಿದ್ದ ಈ ವೀಳ್ಯದೆಲೆ ಪಾಕಿಸ್ತಾನಿಯರ ಅಚ್ಚುಮೆಚ್ಚು ಕೂಡ ಆಗಿತ್ತು. ಹಾಗಾಗಿಯೇ ಇಲ್ಲಿನ ರೈತರು ಪ್ರತಿ ಎಕರೆಗೆ ಕನಿಷ್ಠ 3 ಲಕ್ಷ ರೂ.ನಷ್ಟು ಲಾಭ ಗಳಿಸುತ್ತಿದ್ದರು. ಇದೀಗ ರೈತರ ಈ ನಿರ್ಧಾರದಿಂದ ಒಂದು ಎಲೆ 3 ರೂ. 30 ಪೈಸೆಗೆ ಕುಸಿದಿದೆ. ಇದನ್ನೂ ಓದಿ: ಡಮ್ಮಿ ಜೆಟ್, 15 ಬ್ರಹ್ಮೋಸ್ ಕ್ಷಿಪಣಿ ದಾಳಿ, 11 ಏರ್ಬೇಸ್ ಧ್ವಂಸ – ಪಾಕ್ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ
ಸದ್ಯ ಕೋಲ್ಕತ್ತಾ, ಉತ್ತರ ಪ್ರದೇಶ ಮಾರುಕಟ್ಟೆಗಳಿಗೆ ಮಾತ್ರ ಎಲೆಯನ್ನ ಸರಬರಾಜು ಮಾಡಲಾಗುತ್ತಿದೆ. ಇತ್ತ ದೆಹಲಿ ವರ್ತಕರ ಜೊತೆಗೆ ಪಾಕಿಸ್ತಾನಕ್ಕೆ ರಪ್ತು ಮಾಡುವ ದಳ್ಳಾಳಿಗಳಿಗೂ ಶಾಶ್ವತ ನಿರ್ಬಂಧ ಹೇರಿದ್ದಾರೆ. ಇದನ್ನೂ ಓದಿ: ‘ಆಂಧ್ರ ಕಿಂಗ್’ ಆದ ಉಪೇಂದ್ರ ಕಟೌಟ್ ಮುಂದೆ ರಾಮ್ ಪೋತಿನೇನಿ ಸಂಭ್ರಮ- ಟೀಸರ್ ಔಟ್