ರಾಮನಗರ: ಮಾಗಡಿ (Magadi) ತಾಲೂಕಿನ ಬಂಡೆ ಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Shree) ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಯುವತಿ ಎಂಜಿನಿಯರಿಂಗ್ ಓದುತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರ ಮೂಲದ ನೀಲಾಂಬಿಕಾ ಅಲಿಯಾಸ್ ಚಂದು ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು ರಜೆಯಲ್ಲಿ ತುಮಕೂರಿನಲ್ಲಿರುವ ಅಜ್ಜಿಯ ಮನೆಗೆ ಬರುತ್ತಿದ್ದಳು. ಈ ಸಂದರ್ಭದಲ್ಲಿ ಕಣ್ಣೂರು ಮೃತ್ಯಂಜಯ ಶ್ರೀಗಳ ಸಂಪರ್ಕಕ್ಕೆ ಯುವತಿ ಬಂದಿದ್ದಾಳೆ. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್ – ಕಣ್ಣೂರು ಶ್ರೀ, ಯುವತಿ ಅರೆಸ್ಟ್
ಈಕೆ ತಾನು ಹೇಳಿದಂತೆ ಕೇಳುತ್ತಾಳೆ ಎನ್ನುವುದು ತಿಳಿಯುತ್ತಿದ್ದಂತೆ ಬಂಡೇ ಮಠದ ಶ್ರೀಗಳನ್ನು ಸಿಕ್ಕಿ ಹಾಕಿಸಲು ಕಣ್ಣೂರು ಶ್ರೀ ತಂತ್ರ ಹೂಡಿದ್ದಾರೆ. ಇದಾದ ಬಳಿಕ ಯುವತಿ ಬಂಡೇ ಮಠದ ಶ್ರೀಗಳ ಪರಿಚಯ ಮಾಡಿಕೊಂಡಿದ್ದಾಳೆ.
ಸಲುಗೆ ಜಾಸ್ತಿ ಆಗುತ್ತಿದ್ದಂತೆ ಬಂಡೇ ಮಠದ ಶ್ರೀಗಳನ್ನು ತನ್ನ ತಾಳಕ್ಕೆ ತಕ್ಕಂತೆ ನೀಲಾಂಬಿಕಾ ಕುಣಿಸಿದ್ದಾಳೆ. ವೀಡಿಯೋ ಚಾಟ್ ಆರಂಭಿಸಿದ್ದು ಅಲ್ಲದೇ ಚಾಟಿಂಗ್ ವೇಳೆ ನಗ್ನವಾಗುವಂತೆ ಹೇಳಿದ್ದಾಳೆ. ಆಕೆಯ ವೈಯ್ಯಾರದ ಮಾತಿಗೆ ಮರುಳಾದ ಶ್ರೀ ನಗ್ನವಾಗಿದ್ದಾರೆ. ಈ ಸಂದರ್ಭದಲ್ಲಿ ವೀಡಿಯೋ ಕರೆಗಳನ್ನು ಆಕೆ ರೆಕಾರ್ಡ್ ಮಾಡುತ್ತಿದ್ದಳು. ಆ ವೀಡಿಯೋ ಚಾಟಿಂಗ್ ರೆಕಾರ್ಡ್ ಅನ್ನು ಯುವತಿ ಮಹಾದೇವಯ್ಯನಿಗೆ ನೀಡುತ್ತಾಳೆ. ಮಹಾದೇವಯ್ಯ ಆ ವೀಡಿಯೋವನ್ನು ಸಿಡಿ ಮಾಡಿ ಮುಖಂಡರಿಗೆ ಹಂಚಿದ್ದ ವಿಚಾರ ಈಗ ಪೊಲೀಸ್ ತನಿಖೆಯಿಂದ ಬಳಕಿಗೆ ಬಂದಿದೆ.