– ಇನ್ಮುಂದೆ ಪ್ರತಿ ವರ್ಷ ಸುಲಭವಾಗಿ ನಡೆಯಲಿದೆ ಹುಲಿ ಗಣತಿ, ಕ್ಯಾಪ್ಚರ್ ಕಾರ್ಯ
ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಬಂಡೀಪುರದ ಪ್ರಾಕೃತಿಕ ಸೌಂದರ್ಯಕ್ಕೆ ಮನ ಸೋಲದವರೇ ಇಲ್ಲ. ಇಂತಹ ಹುಲಿ ಸಂರಕ್ಷಿತ ಅರಣ್ಯದಲ್ಲಿ ಹುಲಿಗಳ ಕುರಿತು ರಿಸರ್ಚ್ ನಡೆಸಬೇಕಿದರೆ ಅರಣ್ಯಾಧಿಕಾರಿಗಳು ಪಡಬಾರದ ಪರಿಪಾಟಿಲು ಪಡುತ್ತಿದ್ದರು. ಆದರೆ, ಆ ಸಂಕಷ್ಟಕ್ಕೆ ಈಗ ಬ್ರೇಕ್ ಬಿದ್ದಿದೆ.
ಬಂಡೀಪುರ ಈ ಹೆಸರು ಕೇಳಿದ್ರೆ ಸಾಕು ಪ್ರಾಣಿ ಪ್ರಿಯರು ಹಾಗೂ ಪರಿಸರವಾದಿಗಳ ಮೊಗದಲ್ಲಿ ಮಂದಹಾಸ ಮೂಡುತ್ತದೆ. ಯಾಕಂದ್ರೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಈ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ನ ಪ್ರಕೃತಿಯ ಸೌಂದರ್ಯದ ವರ್ಚಸ್ಸೆ ಅಂತಹದ್ದು. ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ರಾಜ್ಯದಲ್ಲೇ ಅತಿ ಹೆಚ್ಚು ಆನೆ ಮತ್ತು ಚಿರತೆಗಳನ್ನ ಹೊಂದಿರುವ ಟೈಗರ್ ರಿಸರ್ವ್ ಫಾರೆಸ್ಟ್ ಇದು. ಇಂತಹ ಖ್ಯಾತಿ ಪಡೆದ ಬಂಡೀಪುರದಲ್ಲಿ ಹುಲಿಯ ಗಣತಿ ಕಾರ್ಯ ಅಥವಾ ಯಾವುದಾದ್ರು ವ್ಯಾಘ್ರದ ಕುರಿತು ರಿಸರ್ಚ್ ಮಾಡ್ಬೇಕಿದ್ರೆ ದೂರದ ಬೆಂಗಳೂರಿನ ಕೇಂದ್ರ ಕಚೇರಿಗೆ ತೆರಳಬೇಕಿತ್ತು. ಇದರಿಂದ ಅರಣ್ಯಾಧಿಕಾರಿಗಳಿಗೆ ಭಾರೀ ಸಂಕಷ್ಟ ಎದುರಾಗುತ್ತಿತ್ತು. ಈಗ ಇದಕ್ಕೊಂದು ಪರಿಹಾರ ಸಿಕ್ಕಿದೆ. ಇನ್ನು ಕೆಲವೇ ದಿನಗಳಲ್ಲಿ ಬಂಡೀಪುರದ ಮೇಲುಕಾಮನಹಳ್ಳಿಯಲ್ಲಿ ಟೈಗರ್ ರಿಸರ್ಚ್ ಸೆಲ್ ಆರಂಭಗೊಳ್ಳಲಿದೆ.
ಬಂಡೀಪುರ ಸೇರಿದಂತೆ ರಾಜ್ಯದಲ್ಲಿ ಬಿಳಿಗಿರಿ ಟೈಗರ್ ರಿಸರ್ವ್, ಭದ್ರ ಟೈಗರ್ ರಿಸರ್ವ್ ನಾಗರಹೊಳೆ ಟೈಗರ್ ರಿಸರ್ವ್ ಫಾರೆಸ್ಟ್ಗಳಿವೆ. ರಾಜ್ಯ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದು ಟೈಗರ್ ರಿಸರ್ಚ್ ಎಂಡ್ ಮಾನಿಟರಿಂಗ್ ಸೆಲ್ನ ಅನಿವಾರ್ಯತೆ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ವರದಿ ನೀಡಲಾಗಿತ್ತು. ಈ ವರದಿ ಆಧಾರದ ಮೇಲೆ ರಾಜ್ಯದ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಟೈಗರ್ ಸೆಲ್ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದರ ಮೊದಲ ಹಂತವಾಗಿ ಬಂಡೀಪುರದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ. ಇನ್ನು ಕೆಲ ದಿನಗಳಲ್ಲೇ ನೂತನ ಟೈಗರ್ ರಿಸರ್ಚ್ ಎಂಡ್ ಮಾನಿಟರಿಂಗ್ ಸೆಲ್ ಲೋಕಾರ್ಪಣೆಗೊಳ್ಳಲಿದೆ. ಇದರಿಂದ ಬಂಡೀಪುರದಲ್ಲಿ ಪ್ರತಿಯೊಂದು ಹುಲಿಯ ಮಾನಿಟರಿಂಗ್ ಮಾಡಬಹುದು. ವರ್ಷದಿಂದ ವರ್ಷಕ್ಕೆ ಎಷ್ಟು ಹುಲಿಗಳ ಸಂಖ್ಯೆ ಹೆಚ್ಚಾಗಿದೀಯಾ ಅಥವಾ ಕಡಿಮೆ ಆಗಿದ್ಯಾ ಎಂಬುದರ ನಿಖರ ಮಾಹಿತಿ ದೊರೆಯಲಿದೆ. ಇದರ ಜೊತೆಗೆ ಕ್ಯಾಪ್ಚರಿಂಗ್ ಕಾರ್ಯ ಹಾಗೂ ಯಾವುದಾದ್ರು ಹುಲಿಯ ಮೇಲೆ ರಿಸರ್ಚ್ ಅನ್ನು ಸಹ ಇಲ್ಲೇ ಮಾಡಬಹುದಾಗಿದೆ.
ಸದ್ಯ ರಾಜ್ಯ ಸರ್ಕಾರದ ಈ ನಡೆಯಿಂದ ಮುಂಬರುವ ಕಾಡುಪ್ರಾಣಿಗಳ ಕುರಿತಾದ ನಿಖರ ಹಾಗೂ ಸ್ಪಷ್ಟ ಮಾಹಿತಿ ಸಿಗಲಿದೆ, ಇದರ ಜೊತೆಗೆ ಇನ್ನೂ ಅಧಿಕವಾಗಿ ವನ್ಯಮೃಗಗಳನ್ನ ಅಧ್ಯಯನ ಮಾಡಬಹುದಾಗಿದೆ.