ಬಿಜೆಪಿ ಯುವ ಮುಖಂಡನಿಗೆ ಮುಸುಕುಧಾರಿಗಳಿಂದ ಚಾಕು ಇರಿತ

Public TV
1 Min Read
collage bjp leader

ಬೆಂಗಳೂರು: ಸಿವಿ ರಾಮನ್ ಕ್ಷೇತ್ರದ ಶಾಸಕ ರಘು ಆಪ್ತ ಹಾಗೂ ಬಿಜೆಪಿ ಯುವ ಮುಖಂಡ ಲೋಕೇಶ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಮುಸುಕುಧಾರಿಗಳಾಗಿ ಬಂದಿದ್ದ ಮೂವರು ಆರೋಪಿಗಳು ಏಕಾಏಕಿ ಹಲ್ಲೆಗೆ ಮುಂದಾಗಿದ್ದಾರೆ. ಗುರುವಾರ ರಾತ್ರಿ 10:30ರ ಸುಮಾರಿಗೆ ಲೋಕೇಶ್ ರ ಲಕ್ಷ್ಮೀಪುರ ನಿವಾಸದ ಬಳಿ ಕಾರಿಂದ ಕೆಳಗಿಳಿಯೋ ವೇಳೆ ಹಿಂಬದಿಯಿಂದ ಅಟ್ಯಾಕ್ ಮಾಡಿರೋ ಮುಸುಕುಧಾರಿಗಳು ಬೆನ್ನು ಹಾಗೂ ಪಕ್ಕೆಲುಬಿಗೆ ಚಾಕುವಿನಿಂದ ಇರಿದಿದ್ದಾರೆ.

police

ಈ ವೇಳೆ ಲೋಕೇಶ್ ಜೊತೆಯಲ್ಲಿದ್ದ ಆತನ ಸಹೋದರ ಹರೀಶ್ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಹೋದರರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *