Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ರೌಂಡಪ್ – ದಕ್ಷಿಣ, ಉತ್ತರ, ಕೇಂದ್ರದಲ್ಲಿ ಯಾರಿಗೆ ಜಯಮಾಲೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ರೌಂಡಪ್ – ದಕ್ಷಿಣ, ಉತ್ತರ, ಕೇಂದ್ರದಲ್ಲಿ ಯಾರಿಗೆ ಜಯಮಾಲೆ?

Bengaluru City

ಬೆಂಗಳೂರು ರೌಂಡಪ್ – ದಕ್ಷಿಣ, ಉತ್ತರ, ಕೇಂದ್ರದಲ್ಲಿ ಯಾರಿಗೆ ಜಯಮಾಲೆ?

Public TV
Last updated: April 16, 2019 3:10 pm
Public TV
Share
5 Min Read
BENGALURU 01
SHARE

ಬೆಂಗಳೂರು ಮಹಾನಗರವನ್ನು ದಕ್ಷಿಣ, ಉತ್ತರ ಮತ್ತು ಕೇಂದ್ರ ಎಂದು ಮೂರು ಲೋಕಸಭಾ ಕ್ಷೇತ್ರಗಳನ್ನು ವಿಭಾಗಿಸಲಾಗಿದೆ. ಈ ಮೂರು ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆಗಳೆಂದು ಬಿಂಬಿತವಾಗಿದ್ದು, ಅನಂತ್‍ಕುಮಾರ್ ನಿಧನದ ಬಳಿಕ ಬೆಂಗಳೂರು ದಕ್ಷಿಣದಿಂದ ಬಿಜೆಪಿಯಿಂದ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದಾರೆ. ಇತ್ತ ಉತ್ತರದಲ್ಲಿ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ಸ್ಪರ್ಧಿಸಿದ್ದಾರೆ. ಕೇಂದ್ರದಿಂದ ಪಿ.ಸಿ.ಮೋಹನ್ ಕಣದಲ್ಲಿದ್ದಾರೆ.

Contents
  • 1. ಬೆಂಗಳೂರು ಉತ್ತರ ಕದನ:
  • 2. ಬೆಂಗಳೂರು ದಕ್ಷಿಣ
  • 3. ಬೆಂಗಳೂರು ಸೆಂಟ್ರಲ್

ಇತ್ತ ಕಾಂಗ್ರೆಸ್‍ನಿಂದ ಬೆಂಗಳೂರು ಕೇಂದ್ರ ರಿಜ್ವಾನ್ ಅರ್ಷದ್, ಉತ್ತರದಲ್ಲಿ ಕೃಷ್ಣ ಬೈರೇಗೌಡ ಮತ್ತು ದಕ್ಷಿಣದಲ್ಲಿ ಬಿ.ಕೆ.ಹರಿಪ್ರಸಾದ್ ಕಣದಲ್ಲಿದ್ದಾರೆ. ಮೊದಲ ಬಾರಿಗೆ ನಟ ಪ್ರಕಾಶ್ ರೈ ಬೆಂಗಳೂರು ಕೇಂದ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ.

BENGALURU 04

1. ಬೆಂಗಳೂರು ಉತ್ತರ ಕದನ:

ಕಾಂಗ್ರೆಸ್‍ನ ಭದ್ರಕೋಟೆಯನ್ನು ಛಿದ್ರ ಮಾಡಿದ್ದು ಬಿಜೆಪಿ. 2004ರಿಂದಲೇ ಬೆಂಗಳೂರು ಉತ್ತರ ಕ್ಷೇತ್ರವನ್ನು ಕೈ ತೆಕ್ಕೆಯಿಂದ ಬಿಜೆಪಿ ಕಿತ್ತುಕೊಂಡಿತ್ತು. 2004ರಲ್ಲಿ ಸಾಂಗ್ಲಿಯಾನ ಬಿಜೆಪಿಯಿಂದ ಗೆಲ್ಲುವ ಮೂಲಕ 2009ರಕಲ್ಲಿ ಡಿ.ಬಿ.ಚಂದ್ರೇಗೌಡ, 2014ರಲ್ಲಿ ಡಿ.ವಿ.ಸದಾನಂದಗೌಡ ಬಿಜೆಪಿಯಿಂದ ಗೆದ್ದಿದ್ರು. ಬೆಂಗಳೂರು ಉತ್ತರದಿಂದ 7 ಬಾರಿ ಗೆದ್ದಿದ್ದ ಕಾಂಗ್ರೆಸ್‍ನ ನಾಯಕ ದಿವಂಗತ ಜಾಫರ್ ಷರೀಫ್ ಅವರು ಸಾಂಗ್ಲಿಯಾನ, ಚಂದ್ರೇಗೌಡ ಅವರ ಎದುರು ಸೋತಿದ್ದರು.

ಅಂದಿನಿಂದ ಬೆಂಗಳೂರು ಉತ್ತರ ಬಿಜೆಪಿ ಭದ್ರಕೋಟೆಯಾಗಿ ಬದಲಾಯ್ತು. ಮಿನಿ ಭಾರತದಂತಿರುವ ಈ ಕ್ಷೇತ್ರದಲ್ಲಿ ಎಲ್ಲ ಧರ್ಮ, ಜಾತಿ, ಒಳಗಿನವರು, ಹೊರಗಿನವರು ಎಲ್ಲರನ್ನೂ ಒಳಗೊಂಡಿರುವ ಕ್ಷೇತ್ರ. ಈಗ ಇದೇ ಕ್ಷೇತ್ರದಲ್ಲಿ ಒಂದೇ ಸಮುದಾಯದ ಇಬ್ಬರು ಅಖಾಡದಲ್ಲಿ ಇದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ ಡಿ.ವಿ.ಸದಾನಂದಗೌಡ, ಸಚಿವ ಕೃಷ್ಣಬೈರೇಗೌಡ ಕಣದಲ್ಲಿದ್ದು, ಕದನ ಕಣ ರಂಗೇರಿದೆ.

ಒಟ್ಟು ಮತದಾರರು: ಬೆಂಗಳೂರು ಉತ್ತರ ಕ್ಷೇತ್ರ 28,48,705 ಮತದಾರರನ್ನು ಒಳಗೊಂಡಿದೆ. 14,81,456 ಪುರುಷ ಮತದಾರರು ಮತ್ತು 13,66,753 ಮಹಿಳಾ ಮತದಾರರನ್ನು ಹೊಂದಿದೆ. ಒಕ್ಕಲಿಗ 8 ಲಕ್ಷ, ಎಸ್‍ಸಿ-ಎಸ್‍ಟಿ 5 ಲಕ್ಷ, ಮುಸ್ಲಿಂ 3 ಲಕ್ಷ, ಕುರುಬ 3 ಲಕ್ಷ, ಲಿಂಗಾಯತರು 2 ಲಕ್ಷ, ಇತರೆ ಹಿಂದುಳಿದ ವರ್ಗ 3 ಲಕ್ಷ ಮತದಾರರಿದ್ದಾರೆ. ಒಕ್ಕಲಿಗರ ಮತಗಳ ನಿರ್ಣಾಯಕ ಸ್ಥಾನದಲ್ಲಿವೆ.

Bengaluru North

2014ರ ಫಲಿತಾಂಶ: 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಿ.ವಿ.ಸದಾನಂದಗೌಡರು 2,29,764 (16.91%) ಮತಗಳ ಅಂತರದಿಂದ ಕಾಂಗ್ರೆಸ್‍ನ ಸಿ.ನಾರಾಯಣಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. ಡಿ.ವಿ.ಸದಾನಂದಗೌಡ (ಬಿಜೆಪಿ) 7,18,326 (52.91%), ಸಿ.ನಾರಾಯಣಸ್ವಾಮಿ(ಕಾಂಗ್ರೆಸ್) 4,88,562 (35.99%) ಅಬ್ದುಲ್ ಅಜೀಂ (ಜೆಡಿಎಸ್)-92,681 (6.83%) ಮತಗಳನ್ನು ಪಡೆದಿದ್ದರು.

ವಿಧಾನಸಭಾ ಚುನಾವಣೆಯ ಫಲಿತಾಂಶ: ಬೆಂಗಳೂರು ಉತ್ತರ ಲೋಕ ಅಖಾಡ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನದಲ್ಲಿ ಗೆಲುವು ಕಂಡಿವೆ. ಬ್ಯಾಟರಾಯನಪುರ – ಕೃಷ್ಣ ಭೈರೇಗೌಡ(ಕಾಂಗ್ರೆಸ್), ಯಶವಂತಪುರ – ಎಸ್.ಟಿ.ಸೋಮಶೇಖರ್(ಕಾಂಗ್ರೆಸ್), ಹೆಬ್ಬಾಳ – ಭೈರತಿ ಸುರೇಶ್ (ಕಾಂಗ್ರೆಸ್), ಕೆ.ಆರ್.ಪುರಂ- ಭೈರತಿ ಬಸವರಾಜು (ಕಾಂಗ್ರೆಸ್), ಪುಲಿಕೇಶಿನನಗರ – ಅಖಂಡ ಶ್ರೀನಿವಾಸಮೂರ್ತಿ (ಕಾಂಗ್ರೆಸ್), ಮಹಾಲಕ್ಷ್ಮೀ ಲೇಔಟ್- ಗೋಪಾಲಯ್ಯ (ಜೆಡಿಎಸ್), ದಾಸರಹಳ್ಳಿ – ಮಂಜುನಾಥ್ (ಜೆಡಿಎಸ್) ಮತ್ತು ಮಲ್ಲೇಶ್ವರಂ- ಅಶ್ವಥ್‍ನಾರಾಯಣ್ (ಬಿಜೆಪಿ) ಶಾಸಕರಾಗಿದ್ದಾರೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
1. ಡಿ.ವಿ.ಸದಾನಂದಗೌಡ- ಬಿಜೆಪಿ
2. ಕೃಷ್ಣಬೈರೇಗೌಡ- ಕಾಂಗ್ರೆಸ್

2. ಬೆಂಗಳೂರು ದಕ್ಷಿಣ

BENGALURU 02

ಬೆಂಗಳೂರು ದಕ್ಷಿಣ ಬಿಜೆಪಿಯ ಭದ್ರಕೋಟೆ. ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಅವರ ಭದ್ರಕೋಟೆಯಾಗಿತ್ತು. ಜನತಾ ಪಾರ್ಟಿಯ ಭದ್ರಕೋಟೆಯಾಗಿದ್ದ ಬೆಂಗಳೂರು ದಕ್ಷಿಣವನ್ನು ಛಿದ್ರ ಮಾಡಿದ್ದು ದಿವಂಗತ ಮಾಜಿ ಸಿಎಂ ಆರ್.ಗುಂಡೂರಾವ್. 1989ರಲ್ಲಿ ಜನತಾ ಪಾರ್ಟಿಯ ಛಿದ್ರಗೊಳಿಸಿದ ನಂತರ ಬಿಜೆಪಿಗೆ ವರವಾಯ್ತು. 1991ರಲ್ಲಿ ಕೆ.ವಿ.ಗೌಡ ಬಿಜೆಪಿಯಿಂದ ಗೆದ್ದರೆ ಆ ನಂತರ ಸತತ 6 ಬಾರಿ ಅನಂತಕುಮಾರ್ ಈ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. ಒಕ್ಕಲಿಗ, ಬ್ರಾಹ್ಮಣ, ಮುಸ್ಲಿಂ ಸಮುದಾಯ ಪ್ರಾಬಲ್ಯ ಇರುವ ಈ ಕ್ಷೇತ್ರದಲ್ಲಿ ಉತ್ತರ ಭಾರತೀಯರು ನಿರ್ಣಾಯಕರಾಗಿದ್ದಾರೆ. ತೇಜಸ್ವಿನಿ ಅನಂತಕುಮಾರ್ ಅವರನ್ನು ರಾಜ್ಯ ಬಿಜೆಪಿ ಅಭ್ಯರ್ಥಿಯನ್ನಾಗಿ ಬಿಂಬಿಸಿ ಕೊನೆಗೆ ಹೈಕಮಾಂಡ್ ಯೂತ್ ಫೇಸ್ ನೆಪದಲ್ಲಿ ಬಿಜೆಪಿಯಿಂದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ಕೊಟ್ಟಿದ್ದು, ಕಾಂಗ್ರೆಸ್‍ನಿಂದ ದೆಹಲಿ ಮಟ್ಟದ ಪ್ರಭಾವಿ ನಾಯಕ ಬಿ.ಕೆ.ಹರಿಪ್ರಸಾದ್ ಸ್ಪರ್ಧೆಗಿಳಿದಿದ್ದು, ಕದನ ಕಣ ರೋಚಕವಾಗಿದೆ.

ಒಟ್ಟು ಮತದಾರರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ 22,15,758 ಮತದಾರನ್ನು ಒಳಗೊಂಡಿದೆ. 11,53,622 ಪುರುಷ ಮತದಾರರು ಮತ್ತು 10,61,796 ಮಹಿಳಾ ಮತದಾರರನ್ನು ಹೊಂದಿದೆ. ಜಾತಿವಾರು ಪ್ರಾಬಲ್ಯ ನೋಡೋದಾದ್ರೆ ಒಕ್ಕಲಿಗ ಸಮುದಾಯ 5 ಲಕ್ಷ, ಮುಸ್ಲಿಂ ಸಮುದಾಯ 4 ಲಕ್ಷ, ಬ್ರಾಹ್ಮಣ ಸಮುದಾಯ 4 ಲಕ್ಷ, ಉತ್ತರ ಭಾರತೀಯರು 2 ಲಕ್ಷ, ಕುರುಬ ಸಮುದಾಯ 2 ಲಕ್ಷ, ಎಸ್‍ಸಿ ಸಮುದಾಯ 2 ಲಕ್ಷ ಮತ್ತು ಲಿಂಗಾಯತ ಸಮುದಾಯ 1.80 ಲಕ್ಷ ಮತದಾರರು ಕ್ಷೇತ್ರದಲ್ಲಿದ್ದಾರೆ.

Bengaluru South

2014ರ ಫಲಿತಾಂಶ: 2014ರ ಲೋಕಸಭಾ ಚುನಾವಣೆಯಲ್ಲಿ ಅನಂತಕುಮಾರ್ ಅವರು 2,28,575 (19.51) ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ವಿರುದ್ಧ ಗೆದ್ದಿದ್ದರು. ಅನಂತಕುಮಾರ್ (ಬಿಜೆಪಿ) 6,33,816 (56.88%), ನಂದನ್ ನಿಲೇಕಣಿ (ಕಾಂಗ್ರೆಸ್)- 4,05,241 (36.37%), ರುತ್ ಮನೋರಮಾ (ಜೆಡಿಎಸ್) 25,677 (2.30%) ಮತಗಳನ್ನು ಪಡೆದಿದ್ದರು.

ವಿಧಾನಸಭಾ ಫಲಿತಾಂಶ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಹ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 5, ಕಾಂಗ್ರೆಸ್ 3 ಶಾಸಕರಿದ್ದಾರೆ. ಬಸವನಗುಡಿ – ರವಿ ಸುಬ್ರಮಣ್ಯ (ಬಿಜೆಪಿ), ಪದ್ಮನಾಭನಗರ – ಆರ್.ಅಶೋಕ್(ಬಿಜೆಪಿ), ಬೊಮ್ಮನಹಳ್ಳಿ ಸತೀಶ್ ರೆಡ್ಡಿ (ಬಿಜೆಪಿ), ಚಿಕ್ಕಪೇಟೆ – ಉದಯ್ ಗರುಡಾಚಾರ್(ಬಿಜೆಪಿ), ಗೋವಿಂದರಾಜನಗರ – ವಿ.ಸೋಮಣ್ಣ(ಬಿಜೆಪಿ), ವಿಜಯನಗರ – ಕೃಷ್ಣಪ್ಪ (ಕಾಂಗ್ರೆಸ್), ಜಯನಗರ – ಸೌಮ್ಯರೆಡ್ಡಿ (ಕಾಂಗ್ರೆಸ್) ಮತ್ತು ಬಿಟಿಎಂ ಲೇಔಟ್ – ರಾಮಲಿಂಗಾರೆಡ್ಡಿ (ಕಾಂಗ್ರೆಸ್) ಶಾಸಕರಿದ್ದಾರೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
1. ತೇಜಸ್ವಿಸೂರ್ಯ – ಬಿಜೆಪಿ
2. ಬಿ.ಕೆ.ಹರಿಪ್ರಸಾದ್ – ಕಾಂಗ್ರೆಸ್

3. ಬೆಂಗಳೂರು ಸೆಂಟ್ರಲ್

BENGALURU 03

ಕಾಂಗ್ರೆಸ್ ಭದ್ರಕೋಟೆ ಬೆಂಗಳೂರು ಸೆಂಟ್ರಲ್‍ನಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿಯ ಪಿ.ಸಿ. ಮೋಹನ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಾಂಗ್ರೆಸ್ಸಿನ ಐವರು ಶಾಸಕರಿದ್ದರೂ, ಈ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯೇ ಆಗಿದೆ. ಕಳೆದ ಬಾರಿ ಕೇವಲ 1.30 ಲಕ್ಷ ಮತಗಳ ಅಂತರದಿಂದ ಸೋತಿದ್ದ ರಿಜ್ವನ್ ಅರ್ಷದ್ ಈ ಬಾರಿಯೂ ಕಾಂಗ್ರೆಸ್ಸಿನ ಅಭ್ಯರ್ಥಿಯಾಗಿದ್ದಾರೆ. ಉತ್ತರ ಭಾರತೀಯರು, ಮುಸ್ಲಿಮರು, ಕ್ರೈಸ್ತರು ಹಾಗೂ ತಮಿಳು ಮತದಾರರೇ ನಿರ್ಣಾಯಕವಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಚಿತ್ರನಟ ಪ್ರಕಾಶ್ ರೈ ಅದೃಷ್ಟ ಪರೀಕ್ಷೆಯಲ್ಲಿದ್ದಾರೆ. ಮೋದಿ ವಿರೋಧಿಸುತ್ತಲೇ ರಾಜಕೀಯ ಭವಿಷ್ಯಕ್ಕಾಗಿ ಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ.

ಒಟ್ಟು ಮತದಾರರು: ಬೆಂಗಳೂರು ಸೆಂಟ್ರಲ್ ಒಟ್ಟು 22,04,740 ಮತದಾರರನ್ನು ಹೊಂದಿದೆ. 11,45,974 ಪುರುಷ ಮತದಾರರು ಮತ್ತು 10,58,369 ಮಹಿಳಾ ಮತದಾರರಿದ್ದಾರೆ. ಜಾತಿವಾರು ನೋಡೋದಾದ್ರೆ, ತಮಿಳರು 5 ಲಕ್ಷ, ಮುಸ್ಲಿಂ 3 ಲಕ್ಷ, ಉತ್ತರ ಭಾರತೀಯರು 2.5ಲಕ್ಷ, ಕ್ರಿಶ್ಚಿಯನ್ 2 ಲಕ್ಷ, ಮೇವಾರ 1.50 ಲಕ್ಷ, ಎಸ್‍ಸಿ 3 ಲಕ್ಷ, ಲಿಂಗಾಯತ 1 ಲಕ್ಷ, ಒಕ್ಕಲಿಗ 1.5 ಲಕ್ಷ ಮತ್ತು ಇತರೆ 3 ಲಕ್ಷ ಮತದಾರರಿದ್ದಾರೆ.

Bengaluru Central

2014ರ ಫಲಿತಾಂಶ: 2014ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಪಿ.ಸಿ.ಮೋಹನ್ 1,37,500 ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ವಿರುದ್ಧ ಜಯಮಾಲೆಯನ್ನು ತಮ್ಮದಾಗಿಸಿಕೊಂಡಿದ್ದರು. ಪಿ.ಸಿ.ಮೋಹನ್ (ಬಿಜೆಪಿ) 5,57,130 (51.85%), ರಿಜ್ವಾನ್ ಅರ್ಷದ್ (ಕಾಂಗ್ರೆಸ್) 4,19,630 (39.05%) ಮತ್ತು ನಂದಿನಿ ಆಳಾ ್ವ(ಜೆಡಿಎಸ್) 20,387 (1.90%) ಮತಗಳನ್ನು ಪಡೆದುಕೊಂಡಿದ್ದರು.

ವಿಧಾನಸಭಾ ಫಲಿತಾಂಶ: ಬೆಂಗಳೂರು ಸೆಂಟ್ರಲ್ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಕಾಂಗ್ರೆಸ್ 5, ಬಿಜೆಪಿ 3 ಶಾಸಕರನ್ನು ಹೊಂದಿದೆ. ಶಿವಾಜಿನಗರ- ರೋಷನ್‍ಬೇಗ್ (ಕಾಂಗ್ರೆಸ್), ಗಾಂಧಿನಗರ – ದಿನೇಶ್ ಗುಂಡೂರಾವ್ (ಕಾಂಗ್ರೆಸ್), ಶಾಂತಿನಗರ- ಹ್ಯಾರಿಸ್ (ಕಾಂಗ್ರೆಸ್), ಚಾಮರಾಜಪೇಟೆ – ಜಮೀರ್ ಅಹಮದ್ (ಕಾಂಗ್ರೆಸ್), ಸರ್ವಜ್ಞ ನಗರ – ಕೆ.ಜೆ.ಜಾರ್ಜ್ (ಕಾಂಗ್ರೆಸ್), ರಾಜಾಜಿನಗರ- ಸುರೇಶ್‍ಕುಮಾರ್ (ಬಿಜೆಪಿ), ಮಹದೇವಪುರ – ಅರವಿಂದ ಲಿಂಬಾವಳಿ (ಬಿಜೆಪಿ) ಮತ್ತು ಸಿ.ವಿ.ರಾಮನ್‍ನಗರ- ರಘು (ಬಿಜೆಪಿ)

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
1. ಪಿ.ಸಿ.ಮೋಹನ್ – ಬಿಜೆಪಿ
2. ರಿಜ್ವಾನ್ ಅರ್ಷದ್ – ಕಾಂಗ್ರೆಸ್
3. ಪ್ರಕಾಶ್ ರೈ – ಪಕ್ಷೇತರ

TAGGED:bengaluru centralBengaluru NorthBengaluru southbjpcongressjdsLok Sabha Election 2019Public TVಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರು ಉತ್ತರಬೆಂಗಳೂರು ದಕ್ಷಿಣಬೆಂಗಳೂರು ಸೆಂಟ್ರಲ್ಲೋಕಸಭಾ ಚುನಾವಣೆ 2019
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Harish Rana 1
Latest

ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

Public TV
By Public TV
12 minutes ago
KRS Dam 2
Latest

110 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ

Public TV
By Public TV
17 minutes ago
muslim leaders demand that minorities be given congress tickets for the davangere south constituency by elections
Davanagere

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Public TV
By Public TV
54 minutes ago
Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
1 hour ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
2 hours ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?