Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳಿನತ್ತ ‘ಬೆಂಗಳೂರು ಡೇಸ್’ ನಿರ್ದೇಶಕಿ- ಸಾಥ್ ನೀಡಿದ ‘ಕೆಆರ್‌ಜಿ’ ಸಂಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಮಿಳಿನತ್ತ ‘ಬೆಂಗಳೂರು ಡೇಸ್’ ನಿರ್ದೇಶಕಿ- ಸಾಥ್ ನೀಡಿದ ‘ಕೆಆರ್‌ಜಿ’ ಸಂಸ್ಥೆ

Cinema

ತಮಿಳಿನತ್ತ ‘ಬೆಂಗಳೂರು ಡೇಸ್’ ನಿರ್ದೇಶಕಿ- ಸಾಥ್ ನೀಡಿದ ‘ಕೆಆರ್‌ಜಿ’ ಸಂಸ್ಥೆ

Public TV
Last updated: February 20, 2024 12:42 pm
Public TV
Share
2 Min Read
anjali menon 2
SHARE

ಚಿರಪರಿಚಿತ ಚಿತ್ರ ನಿರ್ಮಾಣ, ವಿತರಣಾ ಸಂಸ್ಥೆಯಾದ ಕೆಆರ್‌ಜಿ ಸ್ಟುಡಿಯೋಸ್ ಇದೀಗ ಖ್ಯಾತ ಮಲಯಾಳಂ ನಿರ್ದೇಶಕಿ ಅಂಜಲಿ ಮೆನನ್ (Anjali Menon) ಅವರೊಂದಿಗೆ ಹೊಸ ತಮಿಳು ಚಿತ್ರಕ್ಕಾಗಿ ಕೈ ಜೋಡಿಸಿದೆ. ಬೆಂಗಳೂರು ಡೇಸ್, ಉಸ್ತಾದ್ ಹೊಟೇಲ್, ಮಂಜಡಿಕುರು, ಕೂಡೆ, ವಂಡರ್ ವುಮನ್ ಅಂತಹ ಹೆಸರಾಂತ ಚಿತ್ರಗಳನ್ನು ಕೊಡುಗೆಯಾಗಿ ನೀಡಿರುವ ನಿರ್ದೇಶಕಿ ಅಂಜಲಿ ಮೆನನ್ ಇದೀಗ ತಮಿಳು ಚಿತ್ರವನ್ನು ನಿರ್ದೇಶಿಸಲು ರೆಡಿಯಾಗಿದ್ದಾರೆ.

anjali menon

ಕೆಆರ್‌ಜಿ ಸಂಸ್ಥೆ (KRG Studios) ಈ ಸಹಯೋಗದ ಮೂಲಕ ಕನ್ನಡ ಚಿತ್ರರಂಗಕ್ಕೂ ಹಾಗೂ ಇನ್ನಿತರ ಚಿತ್ರರಂಗಕ್ಕೂ ಇರುವ ಅಂತರವನ್ನು ಕಡಿಮೆ ಮಾಡಿ, ಸಮಗ್ರ ನಿರ್ಮಾಣದ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸುತ್ತಿದೆ ಎಂದರೆ ತಪ್ಪಾಗಲಾರದು. ಕೆಆರ್‌ಜಿ ಸಂಸ್ಥೆ ತನ್ನ ಸಿನಿಮಾ ವಿತರಣೆಯನ್ನು 2017ರಲ್ಲಿ ಆರಂಭಿಸಿ, ಇಲ್ಲಿಯವರೆಗೂ ಸರಿಸುಮಾರು 100 ಚಿತ್ರಗಳನ್ನು ವಿತರಿಸಿದೆ. 2020ರಲ್ಲಿ, `ರತ್ನನ್ ಪ್ರಪಂಚ’ ಚಿತ್ರದ ಮೂಲಕ ಚಿತ್ರ ನಿರ್ಮಾಣವನ್ನು ಆರಂಭಿಸಿತು. ರೋಹಿತ್ ಪದಕಿಯವರ ನಿರ್ದೇಶನದಲ್ಲಿ, ಡಾಲಿ ಧನಂಜಯ್ ಅಭಿನಯದಲ್ಲಿ ಮೂಡಿಬಂದ ಈ ಚಿತ್ರ ಒಟಿಟಿಯಲ್ಲಿ ಬಿಡುಗಡೆಗೊಂಡು ಎಲ್ಲರ ಮನೆ ಮಾತಾಗಿತ್ತು. ಮಾರ್ಚ್ 2023ರಲ್ಲಿ ತೆರೆಕಂಡ ‘ಗುರುದೇವ್ ಹೊಯ್ಸಳ’ ಬಹಳ ದೊಡ್ಡ ಮಟ್ಟದಲ್ಲಿ ಮೆಚ್ಚುಗೆಯನ್ನು ಗಳಿಸಿತ್ತು.

anjali menon 1

ಕೆಆರ್‌ಜಿ ಸಂಸ್ಥೆ ಈ ಸಹಯೋಗ ವಿಭಿನ್ನ ಕಥಾ ವಸ್ತುವನ್ನು ಒಳಗೊಂಡಿರುವ ಚಿತ್ರಗಳನ್ನು ಸಿನಿ ಪ್ರೇಮಿಗಳಿಗೆ ಉಣಬಡಿಸುವ ಮುಖ್ಯ ಉದ್ದೇಶವನ್ನು ಹೊಂದಿದೆ. ಅಷ್ಟೇ ಅಲ್ಲದೆ, ದಕ್ಷಿಣ ಭಾರತದ 4 ಭಾಷೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಗುರಿಯನ್ನು ಹೊಂದಿದೆ. ಇದನ್ನೂ ಓದಿ:ಹೃದಯ ಸ್ತಂಭನದಿಂದ ಕಿರುತೆರೆ ನಟ ರಿತುರಾಜ್ ಸಿಂಗ್ ನಿಧನ

anjali

ಈ ಕುರಿತು ನಿರ್ದೇಶಕಿ ಅಂಜಲಿ ಮೆನನ್ (Anjali Menon) ಮಾತನಾಡಿ, ಸಿನಿಮಾಗಳು ಭಾಷೆಯ ಬೇಲಿ ದಾಟಿ ಎಲ್ಲರನ್ನು ತಲುಪುತ್ತಿರುವ ಈ ಕಾಲದಲ್ಲಿ ಕೆಆರ್‌ಜಿ ಸ್ಟುಡಿಯೋಸ್ ಅಂತಹ ಸಂಸ್ಥೆಯೊಡನೆ ನಾನು ಕೈ ಜೋಡಿಸಿರುವುದು ಸಮಂಜಸವೇ ಎನಿಸುತ್ತಿದೆ. ನಮ್ಮ ಈ ಸಹಯೋಗದಲ್ಲಿ ಉನ್ನತ ಮಟ್ಟದ ಚಿತ್ರ ನಿರ್ಮಾಣ ಹಾಗೂ ನಿರ್ದೇಶನವನ್ನು ಎದುರು ನೋಡುತ್ತಿದ್ದೇನೆ ಎಂದರು.

karthik gowda

ಕೆಆರ್‌ಜಿ ಸಂಸ್ಥೆಯ ರೂವಾರಿ ಕಾರ್ತಿಕ್ ಗೌಡ (Karthik Gowda) ಮಾತನಾಡಿ, ಅಂಜಲಿ ಮೆನನ್ ಮತ್ತು ನಮ್ಮ ಸಹಯೋಗ ಕೆ ಆರ್‌ಜಿ ಸ್ಟುಡಿಯೋಸ್‌ನಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಸಿನಿಮಾಗೆ ಇರುವ ಶಕ್ತಿಯನ್ನು ನಾವು ನಂಬುತ್ತೇವೆ. ಅದು ತೆರೆಯ ಮೇಲೆ ಯಾವ ರೀತಿಯ ಜಾದುವನ್ನಾದರು ಸೃಷ್ಟಿಸಬಲ್ಲದು. ಈ ನಿಟ್ಟಿನಲ್ಲಿ ನಮ್ಮ ಸಹಯೋಗ ಬಹಳ ಅರ್ಥಪೂರ್ಣವಾಗಲಿದೆ ಎಂದು ನಂಬಿದ್ದೇನೆ. ಈ ಕುರಿತು ನಮ್ಮ ಪಯಣ ಶುರು ಆಗಲು ಕಾರಣ ನನ್ನ ಸ್ನೇಹಿತ ವಿಜಯ್ ಸುಬ್ರಹ್ಮಣ್ಯಂ. ಚಿತ್ರದ ಕಥಾವಸ್ತುವಿಗೆ, ಅದರ ನಿರೂಪಣೆಗೆ ಇರುವ ಶಕ್ತಿಯನ್ನು ಕುರಿತು ಹಾಗೂ ಉನ್ನತ ಮಟ್ಟದ ನಿರ್ಮಾಣವು ಪ್ರೇಕ್ಷಕರ ಮೇಲೆ ಯಾವ ರೀತಿಯ ಪ್ರಭಾವ ಬೀರಲಿದೆ ಎಂದೆಲ್ಲಾ ನಾವು ಚರ್ಚಿಸಿದ್ದೇವೆ ಎಂದು ಮಾತನಾಡಿದ್ದಾರೆ.

ನಮ್ಮಲ್ಲಿರುವ ಸಾಮರ್ಥ್ಯವನ್ನು ಆತ ಗಮನಿಸಿ,ನಮಗೆ ಮಾರ್ಗದರ್ಶಕನಾಗಿ ಹಾಗೂ ನಮ್ಮೊಡನೆ ಸಹ-ನಿರ್ಮಾಪಕನಾಗಿ ಕೈ ಜೋಡಿಸಿದಕ್ಕಾಗಿ ನಾನು ಆಭಾರಿಯಾಗಿರುತ್ತೇನೆ. ತುಲ್ಸಿಯಾ ಸಂಸ್ಥೆಯ ಸ್ಥಾಪಕರಾದ ಚೈತನ್ಯ ಹೆಗಡೆ ಅಂತಹ ಸಮಾನ ಮನಸ್ಕರ ಸಹಕಾರದಿಂದ ಅತ್ಯುನ್ನತ ಗುಣಮಟ್ಟದ ಚಿತ್ರಗಳನ್ನು ನೀಡುವ ಭರವಸೆ ನಮ್ಮ ಸಂಸ್ಥೆ ನೀಡಲಿದೆ. ಮಲಯಾಳಂ ನಿರ್ದೇಶಕಿ ಅಂಜಲಿ ಮೆನನ್ ಅವರೊಂದಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ ಎಂದು ಕಾರ್ತಿಕ್ ಗೌಡ ತಿಳಿಸಿದ್ದಾರೆ.

TAGGED:anjali menonKollywoodKRG StudioMollywoodಅಂಜಲಿ ಮೆನನ್‌ಕಾರ್ತಿಕ್ ಗೌಡಕೆಆರ್‌ಜಿ ಸಂಸ್ಥೆ
Share This Article
Facebook Whatsapp Whatsapp Telegram

Cinema news

Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows
Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories

You Might Also Like

02 9
Latest

ಬಿಗ್‌ ಬುಲೆಟಿನ್‌ 11 January 2026 ಭಾಗ-2

Public TV
By Public TV
2 minutes ago
PM Modi
Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
By Public TV
7 minutes ago
team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
32 minutes ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
2 hours ago
virat kohli
Cricket

28,000 ರನ್‌ ಗಳಿಸಿದ ವೇಗದ ಬ್ಯಾಟ್ಸ್‌ಮನ್ – ತೆಂಡೂಲ್ಕರ್‌ ದಾಖಲೆ ಮುರಿದ ಕೊಹ್ಲಿ

Public TV
By Public TV
3 hours ago
h.d.kumaraswamy
Bengaluru City

2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?