ಹಲ್ಲೆಗೆ ಮುಂದಾದ ಆರೋಪಿಗಳಿಗೆ ಗುಂಡಿನ ರುಚಿ ತೋರಿಸಿದ ಪೊಲೀಸರು

Public TV
1 Min Read
NML FIRING SATHYARAYAN

ಬೆಂಗಳೂರು: ಹಲ್ಲೆಗೆ ಮುಂದಾದ ಕೊಲೆ ಆರೋಪಿಗಳಿಗೆ ಮಾದನಾಯಕನಹಳ್ಳಿ ಪೊಲೀಸರು ಕಾಲಿಗೆ ಗುಂಡು ಹೊಡೆದಿದ್ದಾರೆ.

ನಂದಿನಿ ಲೇಔಟ್ ಪೊಲೀಸ್ ಠಾಣೆಯ ರೌಡಿಶೀಟರ್‍ ಗಳಾಗಿರುವ ಚಂದನ್ ಮತ್ತು ಶರಣ್ ಮೇಲೆ ಮಾದನಾಯಕನಹಳ್ಳಿ ಸಿಪಿಐ ಸತ್ಯನಾರಾಯಣ್ ಅವರು ಗುಂಡು ಹಾರಿಸಿದ್ದಾರೆ.

ಆರೋಪಿಗಳು ಕಳೆದ ಜುಲೈ 23 ರಂದು ಮಂಜುನಾಥ್ ಎಂಬುವರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಅವರನ್ನು ಕೊಲೆ ಮಾಡಿದ್ದರು. ಈ ಆರೋಪಿಗಳು ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಫಾರೆಸ್ಟ್ ಗೇಟ್ ಬಳಿ ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಪೇದೆ ಮನಗುಂಡಿ ಮತ್ತು ಪಿ.ಎಸ್.ಐ ಮುರಳಿ ಅವರು ಮೇಲೆ ಹಲ್ಲೆ ಮಾಡಿದ್ದಾರೆ.

collage NML

ಈ ವೇಳೆ ಸ್ಥಳದಲ್ಲಿದ್ದ ಸಿಪಿಐ ಸತ್ಯನಾರಾಯಣ್ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಆರೋಪಿಗಳು ಹಾಗೂ ಪೊಲೀಸರನ್ನು ಮಾಗಡಿ ರಸ್ತೆಯ ಅನುಪಮ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *