– ಢಾಕಾ ಬಳಿ ಎನ್ಸಿಪಿ ಆಯೋಜಿಸಿದ್ದ ರ್ಯಾಲಿಯಲ್ಲಿ ಸ್ಫೋಟ
ಢಾಕಾ: ರಾಷ್ಟ್ರೀಯ ನಾಗರಿಕ ಪಕ್ಷ (National Citizen Party) ಆಯೋಜಿಸಿದ್ದ ಬೃಹತ್ ರ್ಯಾಲಿ ವೇಳೆ ಪ್ರಬಲ ಸ್ಫೋಟ ಸಂಭವಿಸಿದ್ದು, ಕನಿಷ್ಠ ಮೂವರು ಗಾಯಗೊಂಡಿರುವ ಘಟನೆ ಢಾಕಾದ (Dhaka) ಸಾವರ್ ಪ್ರದೇಶದಲ್ಲಿ ನಡೆದಿದೆ.
#WATCH | Dhaka, Bangladesh: A reported bomb explosion occurred in Savar, near Dhaka, during a rally organised by the newly formed National Citizen Party (NCP), injuring at least three people.
The march marks the second anniversary of the student protests against former… pic.twitter.com/XbrsqDErE9
— ANI (@ANI) July 6, 2026
ಎನ್ಸಿಪಿ ನಾಯಕರೊಬ್ಬರು ರ್ಯಾಲಿಯನ್ನುದ್ದೇಶಿಸಿ (NCP Rally) ವೇದಿಯಲ್ಲಿ ಮಾತನಾಡುತ್ತಿದ್ದಾಗಲೇ ಘಟನೆ ನಡೆದಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ. ಸ್ಫೋಟಕ ಸಂಭವಿಸುತ್ತಿದ್ದಂತೆ ನೆರೆದಿದ್ದ ಜನರೆಲ್ಲಾ ಧಿಕ್ಕಾಪಾಲಾಗಿ ಓಡಿದ್ದಾರೆ. ಸದ್ಯ ಸ್ಫೋಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಕಾಣಿಕೆ ರೂಪದಲ್ಲಿ 582 ಕೋಟಿ ಬಂದಿದೆ – ವಸ್ತು ದಾನ ನೀಡಿದವರು ಪರಿಶೀಲಿಸಬಹುದು: ರಾಮ ಮಂದಿರ ಟ್ರಸ್ಟ್
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ವಿರುದ್ಧ ನಡೆದ ವಿದ್ಯಾರ್ಥಿ ನೇತೃತ್ವದ ಪ್ರತಿಭಟನೆಯ 2ನೇ ವಾರ್ಷಿಕೋತ್ಸವದ ಹಿನ್ನೆಲೆ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಏಕೆಂದ್ರೆ ಬಾಂಗ್ಲಾದೇಶದ ರಾಜಕೀಯ ಪಥ ಬದಲಾಯಿಸಿದ ಚಳವಳಿ ಅದಾಗಿತ್ತು. ವಿದ್ಯಾರ್ಥಿಗಳ ಹೋರಾಟದ ಹಾದಿಯನ್ನು ನೆನಪಿಸುವ ಸಲುವಾಗಿ ಎನ್ಸಿಪಿ ರ್ಯಾಲಿಯನ್ನ ಹಮ್ಮಿಕೊಂಡಿತ್ತು. ಇದೇ ಕಾರ್ಯಕ್ರಮದಲ್ಲಿ ಉಂಟಾದ ಪ್ರಬಲ ಸ್ಫೋಟ ಮತ್ತೆ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುವಂತೆ ಮಾಡಿದೆ.

ಸದ್ಯ ಅಧಿಕಾರಿಗಳು ಸ್ಫೋಟಕ್ಕೆ ನಿಖರ ಕಾರಣ ಬಹಿರಂಗಪಡಿಸಿಲ್ಲ, ಈವರೆಗೆ ಯಾರೊಬ್ಬರನ್ನೂ ಬಂಧಿಸಿಲ್ಲ. ಸ್ಫೋಟದ ಕುರಿತು ತನಿಖೆ ತೀವ್ರಗೊಳಿಸಿದ್ದಾರೆ. ಭಯೋತ್ಪಾದಕ ಸ್ಫೋಟ ಆಗಿದೆಯೇ ಅನ್ನೋ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಸ್ಫೋಟದ ವೇಳೆ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಘಟನೆಯು ದೇಶದಲ್ಲಿ ಮತ್ತೆ ಭದ್ರತಾ ವ್ಯವಸ್ಥೆಗಳ ಬಗ್ಗೆ ಕಳವಳ ಹುಟ್ಟುಹಾಕಿದೆ. ಆದಾಗ್ಯೂ ಅಧಿಕಾರಿಗಳು ಈ ಸ್ಫೋಟವು ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಅನ್ನೋದನ್ನು ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಾತ್ಕಾಲಿಕ ಪ್ರಧಾನ ಕಾರ್ಯದರ್ಶಿ ನೇಮಕ – ಯಾರು ಈ ಕೃಷ್ಣಮೋಹನ್?
