Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

CRPF ವಾಹನ ಸ್ಫೋಟಿಸಲು ಸಂಚು – ಉಗ್ರನ ಪತ್ರದಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

Public TV
Last updated: April 1, 2019 2:25 pm
Public TV
Share
3 Min Read
Jammu
SHARE

– ಸ್ವರ್ಗದಲ್ಲಿ ಮಜಾ ಮಾಡುತ್ತೇನೆ
– ಸ್ಫೋಟಗೊಳ್ಳುವ ಮುನ್ನವೇ ಓಡಿ ಹೋದ ಉಗ್ರ
– ಭಾರತದ ಮೇಲೆ ಪ್ರತೀಕಾರಕ್ಕೆ ಪ್ಲಾನ್

ಶ್ರೀನಗರ: ಶನಿವಾರ ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಬನಿಹಾಲ್ ಬಳಿ ಪುಲ್ವಾಮಾ ದಾಳಿಯ ಮಾದರಿಯಲ್ಲಿ ಸಿಆರ್ ಪಿಎಫ್ ವಾಹನಕ್ಕೆ ಕಾರು ಡಿಕ್ಕಿ ಹೊಡೆಸಲು ಸಂಚು ರೂಪಿಸಲಾಗಿತ್ತು. ಸಿಆರ್ ಪಿಎಫ್ ವಾಹನದ ಅನತಿ ದೂರದಲ್ಲಿ ಕಾರ್ ಸ್ಫೋಟಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ. ಇತ್ತ ಸ್ಫೋಟಕ್ಕೂ ಮುನ್ನ ಸ್ಯಾಂಟ್ರೋ ಕಾರು ಚಾಲಕನಾಗಿದ್ದ ಉಗ್ರ ಓಡಿ ಹೋಗಿದ್ದನು. ಕಾರು ಚಾಲಕ ಓರ್ವ ಆತ್ಮಾಹುತಿ ದಾಳಿಕೋರ ಎನ್ನುವುದು ತನಿಖೆಯಲ್ಲಿ ಬಯಲಾಗಿದೆ. ಈ ಸಂಬಂಧ ಜಮ್ಮು-ಕಾಶ್ಮೀರ ಪೊಲೀಸರಿಗೆ ಉಗ್ರನ ಬರೆದಿದ್ದ ಪತ್ರ(ಸೂಸೈಡ್ ನೋಟ್)ವೊಂದು ಲಭ್ಯವಾಗಿದೆ.

CRPF

ಆತ್ಮಾಹುತಿ ದಾಳಿಕೋರನನ್ನು ಓವೈಸ್ ಅಮೀನ್ ಎಂದು ಗುರುತಿಸಲಾಗಿದೆ. ಓವೈಸ್ ದಾಳಿಗೂ ಮುನ್ನವೇ ಸ್ಫೋಟಕಗಳಿಂದ ಕಾರ್ ಬಿಟ್ಟು ಓಡಿ ಹೋಗಿದ್ದಾನೆ. ಜಮ್ಮು-ಕಾಶ್ಮೀರ ಪೊಲೀಸರಿಗೆ ಎರಡು ಪುಟಗಳ ಪತ್ರ ದೊರೆತಿದ್ದು, ಉಗ್ರ ಭಾರತದ ಮೇಲೆ ಪ್ರತೀಕಾರ ತೆಗೆದುಕೊಳ್ಳಲು ನಿರ್ಧರಿಸಿದ್ದನು ಎಂಬುವುದು ಬಯಲಾಗಿದೆ. ಹೀಗಾಗಿ ಸೈನಿಕರ ವಾಹನಕ್ಕೆ ತನ್ನ ಕಾರನ್ನು ಡಿಕ್ಕಿ ಹೊಡೆಸುವ ಮೂಲಕ ಆತ್ಮಾಹುತಿ ದಾಳಿ ನಡೆಸಲು ಉಗ್ರ ಓವೈಸ್ ಪ್ಲಾನ್ ಮಾಡಿದ್ದ. ಕೊನೆ ಕ್ಷಣದಲ್ಲಿ ತನ್ನ ಸಾವಿಗೆ ಹೆದರಿದ ಓವೈಸ್, ಸೈನಿಕರ ವಾಹನದ ಕೂಗಳತೆಯ ದೂರದಲ್ಲಿ ಕಾರ್ ಸ್ಫೋಟಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ. ಇದನ್ನೂ ಓದಿ: ಏರ್ ಸರ್ಜಿಕಲ್ ಸ್ಟ್ರೈಕ್-ಪಾಕ್ ಉಗ್ರ ನೆಲೆಯ ಮೇಲೆ ಸಾವಿರ ಕೆಜಿಯ ಬಾಂಬ್ ಸಿಡಿಸಿದ ಐಎಎಫ್

ಪತ್ರದಲ್ಲಿ ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರ ವಿರುದ್ಧ ಪ್ರಯೋಗಿಸುವ ಪೆಲೆಟ್ ಗನ್ ಬಗ್ಗೆ ಉಲ್ಲೇಖಿಸಲಾಗಿದೆ. ಪೆಲೆಟ್ ಗನ್ ಬಳಕೆಯಿಂದಾಗಿ 18 ತಿಂಗಳ ಹಿಬಾ ನಿಸಾರ್ ಎಂಬ ಕಂದಮ್ಮ ತನ್ನ ಎಡಗಣ್ಣು ಕಳೆದುಕೊಂಡಳು. ಹಿಬಾ ಮನೆಯ ಹತ್ತಿರ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಪ್ರಯೋಗಿಸಿದ ಪೆಲೆಟ್ ಗನ್ ನಿಂದ ಅಮಾಯಕ ಬಾಲಕಿ ತನ್ನ ಕಣ್ಣು ಕಳೆದುಕೊಂಡಳು. ಕಾಶ್ಮೀರದ ಶಿಕ್ಷಕ ರಿಜ್ವಾನ್ ಅಸದ್ ಎಂಬವರನ್ನು ಪೊಲೀಸರು ತಮ್ಮ ಕಸ್ಟಡಿಯಲ್ಲಿಯೇ ಹೊಡೆದು ಕೊಲೆ ಮಾಡಿದರು. ಹೀಗಾಗಿ ಭಾರತದ ವಿರುದ್ಧ ಪ್ರತೀಕಾರ ತೆಗೆದುಕೊಳ್ಳುವುದಾಗಿ ಓವೈಸ್ ತನ್ನ ಸೂಸೈಡ್ ಪತ್ರದಲ್ಲಿ ಬರೆದುಕೊಂಡಿದ್ದ. ಇದನ್ನೂ ಓದಿ: ಏರ್ ಸ್ಟ್ರೈಕ್ ನಡೆದ ಸ್ಥಳದಲ್ಲಿ 300 ಮೊಬೈಲ್!

crpf aa

ಸ್ವರ್ಗದಲ್ಲಿ ಮಜಾ ಮಾಡ್ತೇನೆ:
ಈ ಪತ್ರ ಸಿಗುವ ವೇಳೆಗೆ ನಾನು ಸ್ವರ್ಗ ತಲುಪಿರುತ್ತೇನೆ. ಈ ಎಲ್ಲ ದೃಶ್ಯಗಳನ್ನು ನೋಡಿ ನಾನು ಸ್ವರ್ಗದಲ್ಲಿ ಮಜಾ ಮಾಡುತ್ತಿರುತ್ತೇನೆ. ಈ ಮೊದಲು ಕಾಶ್ಮೀರವನ್ನು ಸ್ವತಂತ್ರ ಮಾಡಿದ್ದರೆ, ಭಾರತ ಈ ದಿನವನ್ನು ನೋಡುತ್ತಿರಲಿಲ್ಲ. ನಮ್ಮ ಸ್ವತಂತ್ರಕ್ಕಾಗಿ ಅನಿವಾರ್ಯವಾಗಿ ನಾವು ಹೋರಾಟಕ್ಕೆ ಧುಮುಕಿದ್ದೇವೆ ಎಂದು ಪತ್ರ ಬರೆದಿದ್ದ.

ಓವೈಸ್ ಅಮಿನ್ ಯಾರು?
ಅರ್ವಾನಿ ನಿವಾಸಿ ಯೂಸೂಫ್ ಮಲೀಕ್ ಎಂಬವರ ಪುತ್ರನಾಗಿರುವ ಓವೈಸ್ ಅಹ್ಮದ್ ಮಲೀಕ್ ಅಮೀನ್ ಸಿ ಕೆಟಗರಿಯ ಉಗ್ರನಾಗಿದ್ದನು. 2018ರ ಏಪ್ರಿಲ್ 5 ರಂದು ಹಿಜಬುಲ್ ಮುಜಾಹಿದ್ದೀನ್ ಸಂಘಟನೆಯನ್ನು ಸೇರಿಕೊಂಡು ಭಯೋತ್ಪಾನಾ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದನು. ಈತ ಜಬ್ಲಿಪೋರಾ, ಅರ್ವಾನಿ ಮತ್ತು ಬಿಜ್ಬೇಹರಾ ಪ್ರದೇಶಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದನು. ಇದನ್ನೂ ಓದಿ: ಪೆಟ್ರೋಲ್ ಸುರಿದು ಮೃತದೇಹ ಸುಟ್ಟರು – ಏರ್ ಸರ್ಜಿಕಲ್ ಸ್ಟ್ರೈಕ್‍ಗೆ ಸಿಕ್ತು ಆಡಿಯೋ ಸಾಕ್ಷ್ಯ!

Pulwama Terror Attack 2

ಶನಿವಾರ ಸ್ಫೋಟಕ್ಕಾಗಿ ಓವೈಸ್ ಹುಂಡೈ ಸ್ಯಾಂಟ್ರೋ ಕಾರು ಬಳಸಿದ್ದನು. ಕಾರಿನ ಇಂಜಿನ್ ಮತ್ತು ಚಾಸಿ ನಂಬರ್ ಒಂದಕ್ಕೊಂದು ಹೋಲಿಕೆ ಆಗುತ್ತಿಲ್ಲ. ದಾಳಿಗಾಗಿ ಕಾರನ್ನು ಕದ್ದಿದ್ದ ಓವೈಸ್ ಬಿಡಿ ಭಾಗಗಳನ್ನು ಬದಲಿಸಿದ್ದನು. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್‍ಐಎ ತಿಳಿಸಿದೆ. ಇದನ್ನೂ ಓದಿ: ಕಾರಿನ ‘ಕೀ’ ಯಿಂದ ಪುಲ್ವಾಮಾ ತನಿಖೆ ಓಪನ್! – ಕೀ ಪತ್ತೆಯಾದ ರೋಚಕ ಕಥೆ ಓದಿ

ಇಂದು ಪುಲ್ವಾಮಾದ ಲಸ್ಸಿಪುರದ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ನಾಲ್ವರು ಲಷ್ಕರ್-ಎ-ತೊಯ್ಬಾದ ನಾಲ್ವರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. 2 ಎಕೆ ರೈಫಲ್ಸ್, 1 ಎಸ್‍ಎಲ್ ಆರ್ ಹಾಗೂ ಪಿಸ್ತೂಲನ್ನು ಈಗಾಗಲೇ ವಶಪಡಿಸಿಕೊಂಡಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಪುಲ್ವಾಮಾ ದಾಳಿ:
ಫೆ. 14ರಂದು ಗುರುವಾರ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್ ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಮಾರುತಿ ಇಕೋ ಕಾರನ್ನು ಉಗ್ರ ಅದಿಲ್ ದಾರ್ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದರು. ಆ ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧದ ವಾತಾವರಣವೇ ಏರ್ಪಟ್ಟಿತ್ತು. ಬಳಿಕ ಭಾರತೀಯ ವಾಯುಸೇನೆ ಪಾಕ್ ಗಡಿಯೊಳಗೆ ನುಗಿ ಉಗ್ರರ ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿತ್ತು. ಇದನ್ನೂ ಓದಿ: ರಾತ್ರಿ ವಿಮಾನಗಳು ಹಾರಾಡುತ್ತಿದ್ದು, ಶಬ್ಧ ಕೇಳಿ ಭಯದಲ್ಲಿ ನಿದ್ದೆ ಬಂದಿಲ್ಲ- ಪ್ರತ್ಯಕ್ಷದರ್ಶಿ

Martyr Pulwama

TAGGED:BanihalCRPFfierceJammu and KashmirpakistanPublic TVPulwama attackಉಗ್ರಜಮ್ಮು ಮತ್ತು ಕಾಶ್ಮೀರಪಬ್ಲಿಕ್ ಟಿವಿಪಾಕಿಸ್ತಾನಪುಲ್ವಾಮಾ ದಾಳಿಬನಿಹಾಲ್ಸಿಆರ್ ಪಿಎಫ್
Share This Article
Facebook Whatsapp Whatsapp Telegram

You Might Also Like

GOLD SURESH
Bengaluru City

6 ಲಕ್ಷ ಹಣ ನೀಡುವಂತೆ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್‌ಗೆ ಬೆದರಿಕೆ – ಎನ್‌ಸಿಆರ್ ದಾಖಲು

Public TV
By Public TV
2 hours ago
mid day meals
Bengaluru City

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

Public TV
By Public TV
2 hours ago
Gopi Chandh Padalkar
Latest

ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ – ಮಹಾರಾಷ್ಟ್ರ ಬಿಜೆಪಿ ಶಾಸಕನ ಪ್ರಚೋದನಕಾರಿ ಹೇಳಿಕೆ

Public TV
By Public TV
3 hours ago
Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
4 hours ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
4 hours ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?