ಚಾಮರಾಜನಗರ: ರೈತರಿಗೆ ಸಾಲ ತಿರುವಳಿ ಪತ್ರ ನೀಡಲು ಲಂಚ ಕೇಳಿದ ಬ್ಯಾಂಕ್ ಮ್ಯಾನೇಜರ್ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಚಾಮರಾಜನಗರ ತಾಲೂಕಿನ ಆಲೂರು ಶಾಖೆಯ ವಿಜಯಾ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಚಂದನ್ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ. ಎಸಿಬಿ ಡಿವೈಎಸ್ಪಿ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಇದೀಗ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಚಂದನ್ ರನ್ನು ಬಂಧಿಸಲಾಗಿದೆ
ರೈತರಾದ ಸಿಂಗನಪುರದ ಸಿದ್ದಪ್ಪಾಜಿ ಬಳಿ ವಿಜಯಾ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಚಂದನ್ ಸಾಲ ತೀರುವಳಿ ಪತ್ರ ನೀಡಲು 15 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದು, ಮೊದಲಿಗೆ 3 ಸಾವಿರ ರೂ. ಹಣವನ್ನು ಮುಂಗಡವಾಗಿ ನೀಡಿದ್ದಾರೆ. ಆದರೆ ಬಾಕಿ ಹಣವನ್ನು ನೀಡುವಂತೆ ಸಿದ್ದಪ್ಪಾಜಿ ಬಳಿ ಬೇಡಿಕೆಯಿಟ್ಟಿದ್ದು, ಬ್ಯಾಂಕ್ ಮ್ಯಾನೇಜರ್ ನಡವಳಿಕೆಯಿಂದ ಬೇಸತ್ತು ಸಿದ್ದಪ್ಪಾಜಿ ಎಸಿಬಿಗೆ ದೂರು ದಾಖಲಿಸಿದ್ದರು.