Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 41 ಕಾರ್ಮಿಕರ ರಕ್ಷಣೆಗೆ ವರವಾಯ್ತು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ – ನಿಷೇಧಿಸಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 41 ಕಾರ್ಮಿಕರ ರಕ್ಷಣೆಗೆ ವರವಾಯ್ತು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ – ನಿಷೇಧಿಸಿದ್ದು ಯಾಕೆ?

Latest

41 ಕಾರ್ಮಿಕರ ರಕ್ಷಣೆಗೆ ವರವಾಯ್ತು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ – ನಿಷೇಧಿಸಿದ್ದು ಯಾಕೆ?

Public TV
Last updated: November 29, 2023 2:41 pm
Public TV
Share
2 Min Read
Uttarkashi Tunnel 4
SHARE

ನವದೆಹಲಿ: ಕಳೆದ 17 ದಿನಗಳಿಂದ ಉತ್ತರಕಾಶಿ ಸುರಂಗದಲ್ಲಿ (Uttarkashi Tunnel) ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ. ವಿದೇಶಿ ಯಂತ್ರಗಳನ್ನು ತರಿಸಿಯೂ ಹಲವು ಪ್ರಯತ್ನಗಳನ್ನು ಮಾಡಿ ಅವುಗಳು ಕೈಕೊಟ್ಟ ಬಳಿಕ ಕೊನೆಗೆ ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ (Rat Hole Mining) ವಿಧಾನವೇ ಕೆಲಸಕ್ಕೆ ಬಂದಿದೆ.

ಹೌದು, ಅಮೆರಿಕದಿಂದ ಆಗರ್ ಯಂತ್ರವನ್ನು ತರಿಸಿ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲು ಪ್ರಯತ್ನ ಪಡುತ್ತಿದ್ದ ವೇಳೆ ಯಂತ್ರವೇ ಕೆಟ್ಟುಹೋಗಿತ್ತು. ಇದಾದ ಬಳಿಕ ರಕ್ಷಣಾ ಕಾರ್ಯಾಚರಣೆ ಭಾರೀ ವಿಳಂಬವೂ ಆಯಿತು. ಇದೀಗ ರಕ್ಷಣಾ ಕಾರ್ಯಾಚರಣೆಯ ಕೊನೆಯ ಹಂತವನ್ನು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ ವಿಧಾನದ ಮೂಲಕ ಪೂರ್ಣಗೊಳಿಸಲಾಗಿದೆ.

uttarkashi tunnel 2

ಏನಿದು ರ‍್ಯಾಟ್ ಹೋಲ್ ಮೈನಿಂಗ್?
ರ‍್ಯಾಟ್ ಹೋಲ್ ಮೈನಿಂಗ್ ಕೈಯಿಂದ ಕೊರೆಯುವ ವಿಧಾನವಾಗಿದೆ. ಇದನ್ನು ನುರಿತ ಕೆಲಸಗಾರರಷ್ಟೇ ಮಾಡುತ್ತಾರೆ. ಮೇಘಾಲಯದಲ್ಲಿ ಹೆಚ್ಚಾಗಿ ಕಾರ್ಮಿಕರು ಈ ರೀತಿ ಕೊರೆಯುತ್ತಾರೆ. ನೆಲದಲ್ಲಿ ಕಿರಿದಾದ ಹೊಂಡಗಳನ್ನು ಅಗೆದು, ಒಬ್ಬ ವ್ಯಕ್ತಿ ತೂರಿಕೊಂಡು ಹೋಗಲು ಸಾಧ್ಯವಾಗುವಷ್ಟೇ ಅಗಲದ ಹೊಂಡಗಳನ್ನು ಕೊರೆಯಲಾಗುತ್ತದೆ. ವ್ಯಕ್ತಿ ಹೊಂಡವನ್ನು ಕೊರೆದಂತೆ ಮುಂದೆ ಮುಂದೆ ಸಾಗುತ್ತಾ ಕಲ್ಲಿದ್ದಲನ್ನು ಸಂಗ್ರಹಿಸುತ್ತಾನೆ.

ರ‍್ಯಾಟ್ ಹೋಲ್ ಎಂದರೆ ಹೆಸರೇ ಹೇಳಿದಂತೆ ಇಲಿಗಳು ಕೊರೆಯುವಂತಹ ಕಿರಿದಾದ ಹೊಂಡಗಳು. ಹೊಂಡಗಳನ್ನು ಅಗೆದ ನಂತರ ಗಣಿಗಾರನು ಹಗ್ಗ ಮತ್ತು ಬಿದಿರಿನ ಏಣಿಗಳನ್ನು ಬಳಸಿ ಹೊಂಡದೊಳಗೆ ಇಳಿಯುತ್ತಾನೆ. ಈ ವಿಧಾನವನ್ನು ಸಾಮಾನ್ಯವಾಗಿ ಕಲ್ಲಿದ್ದಲನ್ನು ಹೊರತೆಗೆಯಲು ಬಳಸಲಾಗುತ್ತದೆ. ಆದರೆ ಇದು ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಈ ವಿಧಾನವನ್ನು ಬಳಸಿ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಹಾಗೂ ಅಲ್ಲೇ ಸಿಲುಕಿ ಹಸಿವಿನಿಂದ ಜನರು ಸಾವನಪ್ಪಿರುವ ಅನೇಕ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ರ‍್ಯಾಟ್ ಹೋಲ್ ಮೈನಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

Uttarkashi tunnel 1 1

ರ‍್ಯಾಟ್ ಹೋಲ್ ಮೈನಿಂಗ್‌ನಲ್ಲಿ ಮತ್ತೊಂದು ವಿಧವಿದೆ. ಇದರಲ್ಲಿ 10 ರಿಂದ 100 ಚದರ ಮೀಟರ್ ವರೆಗೆ ಬದಲಾಗುವ ಆಯತಾಕಾರದ ಹೊಂಡಗಳನ್ನು ಮಾಡಲಾಗುತ್ತದೆ. ಅದರ ಮೂಲಕ 100-400 ಅಡಿ ಆಳದ ಲಂಬವಾದ ಹೊಂಡವನ್ನು ಅಗೆಯಲಾಗುತ್ತದೆ. ಅದರಲ್ಲಿ ಕಲ್ಲಿದ್ದಲು ಕಂಡುಬಂದ ನಂತರ ರಂಧ್ರದ ಗಾತ್ರದ ಸುರಂಗಗಳನ್ನು ಅಡ್ಡಲಾಗಿ ಅಗೆಯಲಾಗುತ್ತದೆ. ಅದರ ಮೂಲಕ ಕಾರ್ಮಿಕರು ಕಲ್ಲಿದ್ದಲನ್ನು ಹೊರತೆಗೆಯುತ್ತಾರೆ.

ರ‍್ಯಾಟ್ ಹೋಲ್ ಮೈನಿಂಗ್ ಬ್ಯಾನ್ ಯಾಕೆ?
ರ‍್ಯಾಟ್ ಹೋಲ್ ಮೈನಿಂಗ್ ವಿಧಾನವು ಅದರ ಅಪಾಯಕಾರಿ ಕೆಲಸದ ಪರಿಸ್ಥಿತಿಗಳು, ಪರಿಸರ ಹಾನಿ ಮತ್ತು ಸಾವು ನೋವುಗಳಿಗೆ ಕಾರಣವಾಗುವ ಹಲವು ಅಂಶಗಳಿಂದಾಗಿ ತೀವ್ರ ಟೀಕೆಗಳನ್ನು ಎದುರಿಸಿದೆ. ಗಣಿಗಾರಿಕೆಗಳು ಸಾಮಾನ್ಯವಾಗಿ ಅನಿಯಂತ್ರಿತವಾಗಿದ್ದು, ಕಾರ್ಮಿಕರಿಗೆ ಸರಿಯಾದ ಗಾಳಿ, ರಚನಾತ್ಮಕ ಬೆಂಬಲ ಅಥವಾ ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ನಿರ್ಲಕ್ಷ್ಯವಹಿಸಲಾಗುತ್ತದೆ. ಮಾತ್ರವಲ್ಲದೇ ಈ ಹಳ್ಳದಲ್ಲಿ ಕಾರ್ಮಿಕರು ಇಳಿದ ಸಂದರ್ಭದಲ್ಲಿ ಮಳೆಯಾಗಿ, ಗಣಿಗಾರಿಕೆ ಪ್ರದೇಶದಲ್ಲಿ ನೀರು ನುಗ್ಗಿದ ಪರಿಣಾಮ ಅನೇಕ ಕಾರ್ಮಿಕರು ಅದರೊಳಗೆಯೇ ಪ್ರಾಣಬಿಟ್ಟಿರುವ ಅನೇಕ ನಿದರ್ಶನಗಳಿವೆ.

ಈ ರೀತಿಯ ಗಣಿಗಾರಿಕೆಯಿಂದಾಗಿ ಭೂಮಿಯ ಅವನತಿ, ಅರಣ್ಯನಾಶ ಮತ್ತು ಜಲ ಮಾಲಿನ್ಯಕ್ಕೂ ಕಾರಣವಾಗುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) 2014 ರಲ್ಲಿ ರ‍್ಯಾಟ್ ಹೋಲ್ ಮೈನಿಂಗ್ ಅಭ್ಯಾಸವನ್ನು ನಿಷೇಧಿಸಿತು.

ರ‍್ಯಾಟ್ ಹೋಲ್ ಮೈನಿಂಗ್ ಅತ್ಯಂತ ಅಪಾಯಕಾರಿಯಾಗಿದ್ದು ಅನೇಕ ದೇಶಗಳಲ್ಲಿ ಇದನ್ನು ನಿಷೇಧಿಸಿದ್ದರೂ ಕೊನೆಗೆ ಅನಿವಾರ್ಯವಾಗಿ ಉತ್ತರಕಾಶಿಯ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ಈ ವಿಧಾನವನ್ನು ಬಳಸಲಾಗಿದೆ. ಅನೇಕ ಜೀವಗಳಿಗೆ ಕುತ್ತಾಗಿದ್ದ ರ‍್ಯಾಟ್ ಹೋಲ್ ಮೈನಿಂಗ್ ವಿಧಾನವನ್ನು ಇದೀಗ ಅನೇಕ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, 41 ಕಾರ್ಮಿಕರನ್ನು ರಕ್ಷಣೆ ಮಾಡುವ ಮೂಲಕ ವರವಾಗಿ ಬಳಸಿಕೊಳ್ಳಲಾಗಿದೆ.

TAGGED:Rat Hole Miningrescue operationtunnelUttarakhandUttarkashiಉತ್ತರಕಾಶಿಉತ್ತರಾಖಂಡಕಾರ್ಮಿಕರುರಕ್ಷಣಾ ಕಾರ್ಯಾಚರಣೆರ‍್ಯಾಟ್ ಹೋಲ್ ಮೈನಿಂಗ್ಸುರಂಗ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
2 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
2 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
3 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
3 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
3 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?