ಲಕ್ನೋ: ಯುವಕನೋರ್ವನ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದ್ದು, ಅನ್ಯ ಧರ್ಮ ಯುವತಿಯನ್ನು ಪ್ರೀತಿಸುತ್ತಿದ್ದ ಹಿನ್ನೆಲೆ ಆತನನ್ನು ಹತ್ಯೆ ಮಾಡಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: 50 ಲಕ್ಷ ರೂ, 1 ಕೆಜಿ ಚಿನ್ನ ಕೊಟ್ಟರೂ ಹಣ ಬೇಕೆಂದ – ಹೈದರಾಬಾದ್ ವೈದ್ಯೆಗೆ ವಂಚನೆ
ಮುಸ್ಲಿಂ ಸಮುದಾಯದ ಹುಡುಗಿಯನ್ನು ಪ್ರೀತಿಸುತ್ತಿದ್ದ ಹಿನ್ನೆಲೆ ಆ ಸಮುದಾಯದವರು ಸುನೀಲ್ ಕುಮಾರ್ ಅನ್ನು ಕೊಲೆ ಮಾಡಿ, ನಂತರ ದೇಹವನ್ನು ಮರಕ್ಕೆ ನೇಣು ಹಾಕಿದ್ದಾರೆ ಎಂದು ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯೋಗಿಜೀ ಇನ್ನು ಮುಂದೆ ತಪ್ಪು ಮಾಡಲ್ಲ, ಪ್ಲೀಸ್ ಕ್ಷಮಿಸಿ ಬಿಡಿ: ಗೋಳಾಡಿದ ಆರೋಪಿ
ಈ ಮುನ್ನ ಸುನೀಲ್ ಕುಮಾರ್ಗೆ ಹುಡುಗಿಯ ಕುಟುಂಬಸ್ಥರು ಬೆದರಿಕೆಯೊಡ್ಡಿದ್ದರು. ಕೆಲವು ತಿಂಗಳ ಹಿಂದೆ ರಾಜಿ ಪಂಚಾಯತಿ ನಡೆಸಿದ ನಂತರ ಯುವಕ ಮತ್ತು ಹುಡುಗಿ ಮತ್ತೆ ಭೇಟಿಯಾಗುವುದಿಲ್ಲ ಎಂದು ಕುಟುಂಬಸ್ಥರ ಮುಂದೆ ಒಪ್ಪಿಕೊಂಡಿದ್ದರು. ಆದರೆ ಈಗ ಸುನೀಲ್ ಕುಮಾರ್ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸದ್ಯ ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮೃತ ಯುವಕನ ತಂದೆ ಅದೇ ಗ್ರಾಮದ ನಿವಾಸಿಗಳಾದ ಫಝಲ್, ಯಾಸಿನ್, ಅಬ್ರಾರ್ ಅಹಮದ್ ಮತ್ತು ಸರ್ಫರಾಜ್ ಅಹಮದ್ ವಿರುದ್ಧ ದೂರು ದಾಖಲಿಸಿದ್ದು, ಇದೀಗ ಅವರನ್ನು ವಶಕ್ಕೆ ಪಡೆದು, ತನಿಖೆ ನಡೆಸಲಾಗುತ್ತಿದೆ ಎಂದು ಗ್ರಾಮಾಂತರ ಎಸ್ಪಿ ರಾಜ್ಕುಮಾರ್ ತಿಳಿಸಿದ್ದಾರೆ.