– ವಿಜಯೇಂದ್ರ ವಿರುದ್ಧ ಯತ್ನಾಳ್ ಚಾರ್ಜ್ಶೀಟ್
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ನೀಡಿದ್ದ ನೋಟಿಸ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 9 ಪುಟಗಳ ಉತ್ತರ ನೀಡಿದ್ದಾರೆ.
Advertisement
ಶಿಸ್ತು ಉಲ್ಲಂಘನೆ ಆರೋಪದಲ್ಲಿ ಯತ್ನಾಳ್ಗೆ 72 ಗಂಟೆಯಲ್ಲಿ ಉತ್ತರ ನೀಡಲು ನೋಟಿಸ್ ನೀಡಲಾಗಿತ್ತು. ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಠಕ್ಗೆ ಇ-ಮೇಲ್ ಮೂಲಕ ಯತ್ನಾಳ್ ಉತ್ತರ ರವಾನೆ ಮಾಡಿದ್ದಾರೆ.
Advertisement
Advertisement
ಉತ್ತರದಲ್ಲಿ ಏನಿದೆ?
ಪಕ್ಷದಲ್ಲಿ ಕುಟುಂಬ ರಾಜಕೀಯ ಮೀತಿ ಮೀರಿದೆ. ಭವಿಷ್ಯ ದೃಷ್ಟಿಯಿಂದ ಇದಕ್ಕೆ ಬ್ರೇಕ್ ಹಾಕಬೇಕು. ಕುಟುಂಬ ರಾಜಕೀಯದಿಂದ ಪಕ್ಷ ವ್ಯಕ್ತಿಗತವಾಗಿ ಗುರುತಿಸಿಕೊಳ್ಳಬಾರದು. ಬಿ.ವೈ ವಿಜಯೇಂದ್ರ ಅವರು ವ್ಯಕ್ತಿಗತ ಹಾಗೂ ಗುಂಪುಗಾರಿಕೆ ಮಾಡ್ತಿದ್ದಾರೆ. ಇದರಿಂದ ಸಂಘಟನೆಗೆ ತೊಡಕಾಗುತ್ತಿದೆ ಎಂದು ಯತ್ನಾಳ್ ಉತ್ತರದಲ್ಲಿ ದೂರಿದ್ದಾರೆ.
Advertisement
ಹಿರಿಯ ನಾಯಕರನ್ನು ವಿಶ್ವಾಸಕ್ಕೆ ಪಡೆದಿಲ್ಲ. ಹೊಂದಾಣಿಕೆ ರಾಜಕೀಯದಿಂದ ಪಕ್ಷ ಸಂಘಟನೆಯಲ್ಲಿ ಬಲಹೀನವಾಗಬಾರದು. ಕಾರ್ಯಕರ್ತರು ಭಾವನೆಗಳನ್ನು ನಾನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದೇನೆ. ನನ್ನ ಹೇಳಿಕೆ ಪಕ್ಷದ ಅನೇಕ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಅಭಿಪ್ರಾಯವಾಗಿದೆ. ಹೀಗಾಗಿ, ಬಿ.ವೈ ವಿಜಯೇಂದ್ರ ಅವರನ್ನು ಕೆಳಗಿಳಿಸಿ, ಸಮರ್ಥ ನಾಯಕರಿಗೆ ಜವಬ್ದಾರಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವಕ್ಫ್ ಹೋರಾಟವನ್ನು ನಾವು ಪಕ್ಷದ ವೇದಿಕೆಯಲ್ಲೇ ಮಾಡಿದ್ದೇವೆ. ಈ ಹೋರಾಟಕ್ಕೆ ಕೇಂದ್ರದ ನಾಯಕರೇ ಖುದ್ದು ಶ್ಲಾಘಿಸಿದ್ದಾರೆ. ಪಕ್ಷದ ಹಿತಕ್ಕೆ ನಾವು ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ನೀಡಿದ ಉತ್ತರವನ್ನು ನೀವು ಪರಿಗಣಿಸಬಹುದು. ನಾನು ಶಿಸ್ತು ಉಲ್ಲಂಘಿಸಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.