ವಿಜಯಪುರ: ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಶರಣಾದ ನಕ್ಸಲರಿಗೆ ಜ.30ರ ವರೆಗೆ ನ್ಯಾಯಾಂಗ ಬಂಧನ
ಟ್ವೀಟ್ನಲ್ಲಿ ಏನಿದೆ?
ನಕ್ಸಲರ ಬೇಡಿಕೆಗಳನ್ನು ಆಲಿಸಿ ಅವರನ್ನು ಮುಖ್ಯವಾಹಿನಿಗೆ ತಂದು ಅವರು ಕೂಡ ಸಾಮಾನ್ಯರಂತೆ ಬದುಕುವುದಕ್ಕೆ ಹಕ್ಕಿದೆ. ಆದರೆ, ಶರಣಾಗಲು ಪ್ಯಾಕೇಜ್ ಕೊಡುವುದು ಸರಿಯಾದ ಕ್ರಮವಲ್ಲ.
ನಕ್ಸಲರ ಬೇಡಿಕೆಗಳನ್ನು ಆಲಿಸಿ ಅವರನ್ನು ಮುಖ್ಯ ವಾಹಿನಿಗೆ ತಂದು ಅವರು ಕೂಡ ಸಾಮಾನ್ಯರಂತೆ ಬದುಕುವುದಕ್ಕೆ ಹಕ್ಕಿದೆ. ಆದರೆ, ಶರಣಾಗಲು ಪ್ಯಾಕೇಜ್ ಕೊಡುವುದು ಸರಿಯಾದ ಕ್ರಮವಲ್ಲ .
ನಕ್ಸಲರು ಕೈಗೊಂಡ ಹಿಂಸೆಗಳಿಂದ ಅನೇಕ ಪೊಲೀಸ್ ಅಧಿಕಾರಿಗಳು, ಕಾರ್ಯಾಚರಣಾ ತಂಡದ ಸದಸ್ಯರು ಜೀವ ಕಳೆದುಕೊಂಡಿದ್ದಾರೆ. ಯಾರದ್ದೋ ಮೇಲೆ ಕೋಪಕ್ಕೆ ಬಡ ಗ್ರಾಮಸ್ಥರ… pic.twitter.com/PK4vXy2aQr
— Basanagouda R Patil (Yatnal) (@BasanagoudaBJP) January 9, 2025
ನಕ್ಸಲರು ಕೈಗೊಂಡ ಹಿಂಸೆಗಳಿಂದ ಅನೇಕ ಪೊಲೀಸ್ ಅಧಿಕಾರಿಗಳು, ಕಾರ್ಯಾಚರಣಾ ತಂಡದ ಸದಸ್ಯರು ಜೀವ ಕಳೆದುಕೊಂಡಿದ್ದಾರೆ. ಯಾರದ್ದೋ ಮೇಲೆ ಕೋಪಕ್ಕೆ ಬಡ ಗ್ರಾಮಸ್ಥರ ಮೇಲೆ, ಪೊಲೀಸರನ್ನು ಬಲಿ ತೆಗೆದುಕೊಂಡವರಿಗೆ ವಿಶೇಷ ಆತಿಥ್ಯ ಕೊಡುವುದು ಖಂಡಿತ ಸರಿಯಾದ ಕ್ರಮವಲ್ಲ. ಅವರು ಮಾಡಿರುವ ಅಪರಾಧಕ್ಕೆ ತಕ್ಕಂತೆ ಶಿಕ್ಷೆ ಅನುಭವಿಸಿ ನಂತರ ಮುಖ್ಯವಾಹಿನಿಗೆ ಬರಲಿ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.ಇದನ್ನೂ ಓದಿ: ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ – 1 ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಸಿ.ಟಿ ರವಿ